ಬ್ರೇಕಿಂಗ್ ನ್ಯೂಸ್
06-02-23 10:53 am HK News Desk ದೇಶ - ವಿದೇಶ
ಢಾಕಾ, ಫೆ.6: ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ವಾಯುವ್ಯ ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳ ಮೇಲೆ ಶನಿವಾರ ರಾತ್ರಿ ಸರಣಿ ದಾಳಿ ನಡೆಸಿದ್ದಾರೆ.
ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದ್ದು, ವಿಗ್ರಹಗಳನ್ನು ಧ್ವಂಸ ಮಾಡಲಾಗಿದೆ. ಘಟನೆಯ ನಂತರ, ಬಾಂಗ್ಲಾದೇಶದಲ್ಲಿ ವಾಸಿಸುವ ಹಿಂದೂಗಳು ತಮ್ಮ ಜೀವ ಮತ್ತು ಆಸ್ತಿಯ ಬಗ್ಗೆ ಭಯಭೀತರಾಗಿದ್ದಾರೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿ ಹಿಂದೂಗಳಿಗೆ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ವರದಿ ಪ್ರಕಾರ, ವಿಧ್ವಂಸಕ ಘಟನೆಯು ಬಾಂಗ್ಲಾದೇಶದ ವಾಯುವ್ಯ ಪ್ರದೇಶದ ಠಾಕೂರ್ಗಾಂವ್ ಪರಿಸರದಲ್ಲಿ ನಡೆದಿದೆ. ಗ್ರಾಮದಲ್ಲಿ ವಾಸಿಸುವ ಹಿಂದೂ ಸಮುದಾಯದ ಮುಖಂಡ ಬಿದ್ಯನಾಥ್ ಬರ್ಮನ್ ಪ್ರಕಾರ, ಶನಿವಾರ ರಾತ್ರಿ ಮತ್ತು ಭಾನುವಾರದ ನಸುಕಿನಲ್ಲಿ ಅಪರಿಚಿತರು ಕತ್ತಲಿನ ಸಮಯದಲ್ಲಿ ದೇವಾಲಯಗಳ ಮೇಲೆ ಯೋಜಿತ ರೀತಿಯಲ್ಲಿ ದಾಳಿ ನಡೆಸಿದ್ದಾರೆ. ಕೋಲು ಮತ್ತಿತರ ಆಯುಧಗಳೊಂದಿಗೆ ಬಂದ ದುಷ್ಕರ್ಮಿಗಳು 14 ದೇವಸ್ಥಾನಗಳನ್ನು ಧ್ವಂಸಗೊಳಿಸಿದ್ದಾರೆ. ಈ ಸಂದರ್ಭದಲ್ಲಿ, ಅನೇಕ ವಿಗ್ರಹಗಳನ್ನು ಮುರಿದು ಕೆರೆ, ಕೊಳಕ್ಕೆ ಎಸೆದಿದ್ದಾರೆ.
ದೇವಾಲಯಗಳ ಮೇಲೆ ದಾಳಿ ನಡೆಸಿದವರು ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಬರ್ಮನ್ ಹೇಳಿದ್ದಾರೆ. ಕತ್ತಲೆಯಿಂದಾಗಿ ಯಾರೂ ಅವರನ್ನು ನೋಡಲಿಲ್ಲ. ಘಟನೆ ಬೆಳಕಿಗೆ ಬಂದಿದ್ದರಿಂದ ಈ ಪ್ರದೇಶದಲ್ಲಿ ವಾಸಿಸುವ ಹಿಂದೂಗಳು ತಮ್ಮ ಸುರಕ್ಷತೆಯ ಬಗ್ಗೆ ಚಿಂತಿತರಾಗಿದ್ದಾರೆ ಮತ್ತು ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು. ಮುಸ್ಲಿಂ ಬಾಂಧವರೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ. ಈವರೆಗೂ ಈ ರೀತಿಯ ಘಟನೆ ಇಲ್ಲಿ ನಡೆದದ್ದಿಲ್ಲ. ಇಲ್ಲಿ ಮುಸ್ಲಿಮರು ಮೆಜಾರಿಟಿ ಇದ್ದರೂ, ನಾವು ಸೌಹಾರ್ದ ಹೊಂದಿದ್ದೆವು. ಇದು ಯಾರೋ ಕಿಡಿಗೇಡಿಗಳು ಸಾನರಸ್ಯ ಕದಡುವುದಕ್ಕಾಗಿ ನಡೆಸಿರುವ ಕೃತ್ಯ ಎಂದು ಹಿಂದು ಸಮುದಾಯದ ನಾಯಕ ಸಮರ್ ಚಟರ್ಜಿ ಹೇಳಿದ್ದಾರೆ.
14 Hindu temples were vandalised by unidentified miscreants in northwestern Bangladesh in a series of orchestrated attacks overnight, police said on Sunday, as reported by the news agency PTI. "Unidentified people carried out the attacks under the cover of darkness, vandalising idols in 14 temples in three unions (lowest local government tier)," said Bidyanath Barman, a Hindu community leader at Baliadangi) “upazila” or “sub-district” in Thakurgaon.
19-04-24 04:27 pm
Bangalore Correspondent
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
Sri Dingaleshwara Swamiji dharwad, Pralad Jo...
19-04-24 10:39 am
Congress Councillor daughter Murder Hubballi:...
18-04-24 07:28 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 05:18 pm
Mangalore Correspondent
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
ಮಲ್ಪೆ ಸಮುದ್ರದಲ್ಲಿ ಈಜಾಟ ; ಅಲೆಗಳಲ್ಲಿ ಕೊಚ್ಚಿ ಹೋದ...
18-04-24 11:05 pm
Congress BJP, Mangalore News: ದಕ್ಷಿಣ ಕನ್ನಡ ಕ್...
18-04-24 11:00 pm
Brijesh Chowta Mangalore, BJP: 500 ವರ್ಷಗಳ ಬಳಿ...
18-04-24 10:35 pm
19-04-24 03:43 pm
HK News Desk
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm
Bantwal Stabbing, Mangalore crime: ಬಂಟ್ವಾಳ ;...
15-04-24 04:14 pm
Salman Khan gun shot; ಬಾಲಿವುಡ್ ನಟ ಸಲ್ಮಾನ್ ಖಾನ...
14-04-24 03:47 pm