ಬ್ರೇಕಿಂಗ್ ನ್ಯೂಸ್
08-02-23 01:13 pm HK News Desk ದೇಶ - ವಿದೇಶ
ನವದೆಹಲಿ, ಫೆ.8 : ಸತತ ಆರನೇ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ತನ್ನ ರೆಪೋ ದರವನ್ನು ಏರಿಕೆ ಮಾಡಿದ್ದು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ. ಬುಧವಾರ 25 ಅಂಶಗಳ ಏರಿಕೆಯೊಂದಿಗೆ ಶೇ. 6.5ಕ್ಕೆ ರೆಪೋ ದರ ಹೆಚ್ಚಿಸಿದ್ದು ಇದರಿಂದ ಸಾಮಾನ್ಯ ಗ್ರಾಹಕರಿಗೆ ಹೊಡೆತ ಬೀಳಲಿದೆ.
ರೆಪೋ ದರ ಏರಿಕೆಯಿಂದಾಗಿ ನೇರವಾಗಿ ಗೃಹ, ವಾಹನ ಸಾಲಗಳ ಬ್ಯಾಂಕ್ಗಳ ಇಎಂಐ ಮೊತ್ತ ಮತ್ತಷ್ಟು ದುಬಾರಿಯಾಗಲಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳಲಿದೆ. ಆದರೆ, ನಿಶ್ಚಿತ ಠೇವಣಿಗಳಿಗೆ ರೆಪೋ ದರ ಏರಿಕೆಯಿಂದ ತುಸು ಪ್ರಯೋಜನ ಸಿಗಲಿದೆ.

ಆರ್ಬಿಐನ ಹಣಕಾಸು ನೀತಿ ಸಮಿತಿ (ಎಂಪಿಸಿ)ಯ ಮೂರು ದಿನಗಳ ಸಭೆಯ ಬಳಿಕ ರೆಪೋ ದರ ಏರಿಕೆ ನಿರ್ಧಾರವನ್ನು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಬುಧವಾರ ಪ್ರಕಟಿಸಿದ್ದಾರೆ. ಆರು ಸದಸ್ಯರ ಸಮಿತಿಯಲ್ಲಿ ನಾಲ್ವರು ಸದಸ್ಯರು ರೆಪೋ ದರ ಏರಿಕೆ ಪರವಾಗಿ ಮತ ಚಲಾಯಿಸಿದರು ಎಂದು ಶಕ್ತಿಕಾಂತ್ ದಾಸ್ ಮಾಹಿತಿ ನೀಡಿದ್ದಾರೆ.
ಸದ್ಯದ ಆರ್ಥಿಕ ಪರಿಸ್ಥಿತಿ ಮತ್ತು ಹಣದುಬ್ಬರಕ್ಕೆ ಕಡಿವಾಣ ಹಾಕುವ ದೃಷ್ಟಿಯಿಂದ ಹಣಕಾಸು ನೀತಿ ಸಮಿತಿ ರೆಪೋ ದರವನ್ನು ಹೆಚ್ಚಿಸಲು ನಿರ್ಧರಿಸಿದೆ. ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಳೆದ ವರ್ಷದ ಮೇ ತಿಂಗಳಿನಿಂದ ಈವರೆಗೂ ಒಟ್ಟು 250 ಮೂಲ ಅಂಶವನ್ನು ಆರ್ಬಿಐ ಏರಿಕೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷ 2022-2023ಕ್ಕೆ ಹಣದುಬ್ಬರವನ್ನು ಶೇ. 6.5 ಎಂದು ಅಂದಾಜಿಸಿದ್ದು, 2023-24ನೇ ಹಣಕಾಸು ವರ್ಷಕ್ಕೆ ಶೇ. 5.3 ಎಂದು ನಿರೀಕ್ಷೆ ಮಾಡಿದ್ದು ಜೊತೆಗೆ ಹಣದುಬ್ಬರ ಇಳಿತದ ನಿರೀಕ್ಷೆಯನ್ನೂ ಹೊಂದಿದೆ.
The Reserve Bank of India hiked its key repo rate by 25 basis points (bps) on Wednesday as expected, saying core inflation remained high. The central bank said that its policy stance remains focused on the withdrawal of accommodation. In its December monetary policy review, the central bank had raised the key benchmark interest rate by 35 basis points (bps). Since May last year, the Reserve Bank has increased the short-term lending rate by 250 basis points, including today's, to contain inflation.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm