ಬ್ರೇಕಿಂಗ್ ನ್ಯೂಸ್
08-02-23 06:12 pm HK News Desk ದೇಶ - ವಿದೇಶ
ನವದೆಹಲಿ, ಫೆ.8 : ಹಿಮಾಲಯದಲ್ಲಿ ಒಂದು ಸಾವಿರಕ್ಕೂ ಅಧಿಕ ಹಿಮ ಸರೋವರಗಳು ಕರಗುತ್ತಿದ್ದು, ಭಾರತದಲ್ಲಿ ಇದರಿಂದ ಸುಮಾರು 30 ಲಕ್ಷ ಜನರು ಭೀಕರ ಪ್ರವಾಹಕ್ಕೆ ತುತ್ತಾಗಲಿದ್ದಾರೆ ಎಂದು ಅಧ್ಯಯನ ವರದಿಯೊಂದು ಎಚ್ಚರಿಕೆ ನೀಡಿದೆ.
ಬ್ರಿಟನ್ ನ್ಯೂ ಕ್ಯಾಸಲ್ ವಿಶ್ವವಿದ್ಯಾನಿಲಯದ ವಿಜ್ಞಾನಿಗಳ ನೇತೃತ್ವದ ಅಂತರಾಷ್ಟ್ರೀಯ ತಂಡವು ಈ ಕುರಿತು ಅಧ್ಯಯನ ನಡೆಸಿದ್ದು, ಹೊಮ ಸರೋವರಗಳ ಪ್ರವಾಹದಿಂದ ಕೃತಕ ನದಿ, ಸರೋವರಗಳು ಸೃಷ್ಟಿಯಾಗಲಿವೆ ಎನ್ನಲಾಗುತ್ತಿದೆ. ಅಧ್ಯಯನದ ಪ್ರಕಾರ ಭಾರತದಲ್ಲಿ ಸುಮಾರು 30 ಲಕ್ಷ ಜನರು ಹಿಮನದಿಯ ಸರೋವರಗಳ ಪ್ರವಾಹದ ಅಪಾಯದಲ್ಲಿದ್ದಾರೆ, ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ವರದಿ ಹೇಳಿದೆ.
ನೇಚರ್ ಕಮ್ಯುನಿಕೇಷನ್ಸ್ ಜರ್ನಲ್ ನಲ್ಲಿ ಈ ವರದಿ ಪ್ರಕಟಿಸಲಾಗಿದೆ. ಹಿಮನದಿಗಳ ಪ್ರವಾಹದಿಂದ ಪ್ರಪಂಚದಲ್ಲಿ 15 ಮಿಲಿಯನ್ ಜನರು ಅಪಾಯದಲ್ಲಿದೆ ಎಂದು ವರದಿ ಅಂದಾಜಿಸಿದೆ. ಆದ್ಯತೆಯ ಪ್ರದೇಶಗಳನ್ನು ಗುರುತಿಸಿದ ಸಂಶೋಧಕರು ಭಾರತ, ಪಾಕಿಸ್ತಾನ, ಪೆರು ಮತ್ತು ಚೀನಾದಲ್ಲೇ ಪ್ರವಾಹಕ್ಕೆ ಹೆಚ್ಚಿನ ಜನರು ತುತ್ತಾಗಲಿದ್ದಾರೆ ಎಂದು ಅಂದಾಜಿಸಿದ್ದಾರೆ.
![]()
ಹಿಮ ಸರೋವರಗಳಿಂದ ಕರಗಿದ ನೀರು ಹರಿಯುತ್ತಾ ಬಂದು ಒಂದು ಜಾಗದಲ್ಲಿ ಸಂಗ್ರಹಗೊಳ್ಳುತ್ತದೆ. ಬಳಿಕ ಆ ಜಾಗ ಸರೋವರವಾಗಿ ಮಾರ್ಪಾಡುಗೊಳ್ಳುತ್ತದೆ. ನೀರು ಸಂಗ್ರಹ ಹೆಚ್ಚಾದಂತೆ ಕಟ್ಟೆ ಒಡೆದು ಇಳಿದಾರಿಗೆ ಪ್ರವಾಹವಾಗಿ ಹರಿಯುತ್ತದೆ. ಇದು ಕೆಲವು ಸಂದರ್ಭಗಳಲ್ಲಿ 120 ಕಿಲೋಮೀಟರ್ ಗಳಿಗಿಂತ ಹೆಚ್ಚಿರಬಹುದು. ಇದು ಹೆಚ್ಚು ವಿನಾಶಕಾರಿಯಾಗಬಹುದು. ಆಸ್ತಿ, ಮೂಲಸೌಕರ್ಯ ಮತ್ತು ಕೃಷಿ ಭೂಮಿಯನ್ನು ಕಬಳಿಸಬಹುದು ಮತ್ತು ಭಾರೀ ಜೀವ ಹಾನಿಗೂ ಕಾರಣವಾಗಬಹುದು ಎಂದು ಅಧ್ಯಯನ ಹೇಳಿದೆ.
Three million people in India are at risk of flooding caused by glacial lakes, the highest number of those exposed in the world, according to new study. The study by an international team led by scientists at UK's Newcastle University, UK is the first global assessment of areas at greatest risk of Glacial Lake Outburst Floods (GLOF). Published in the journal Nature Communications on Tuesday, it estimates that 15 million people around the world are at risk from flooding caused by glacial lakes.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm