ಬ್ರೇಕಿಂಗ್ ನ್ಯೂಸ್
08-02-23 09:18 pm HK News Desk ದೇಶ - ವಿದೇಶ
ಇಸ್ತಾಂಬುಲ್, ಫೆ.8 : ಭೂಕಂಪದಲ್ಲಿ ಮೃತರ ಸಂಖ್ಯೆ 11 ಸಾವಿರಕ್ಕೇರಿಕೆ, ಪರಿಹಾರಕ್ಕೆ ಭಾರತದಿಂದ 5 ವಿಮಾನ ರವಾನೆ
ಅಂಕಾರ: ಎರಡು ಪ್ರಬಲ ಭೂಕಂಪಗಳ ಪರಿಣಾಮ ದಕ್ಷಿಣ ಟರ್ಕಿ ಮತ್ತು ನೆರೆಯ ಸಿರಿಯಾ ದೇಶಗಳಲ್ಲಿ ವಿನಾಶ ತಾಂಡವವಾಡಿದೆ.
ದುರಂತದ ಪ್ರಮಾಣ ಈಗಷ್ಟೇ ಸ್ಪಷ್ಟವಾಗುತ್ತಿದ್ದು, ಸಾವಿನ ಸಂಖ್ಯೆ 11,000 ಮೀರಿದೆ. ಅವಶೇಷಗಳ ನಡುವಿನಿಂದ ಬದುಕುಳಿದಿರಬಹುದಾದವರನ್ನು ರಕ್ಷಿಸಲು ರಕ್ಷಣಾ ಕಾರ್ಯಕರ್ತರು ಹೆಣಗಾಡುತ್ತಿದ್ದಾರೆ. ಈ ಪೈಕಿ ಟರ್ಕಿಯೊಂದರಲ್ಲೇ 8500 ಜನರು ಮೃತಪಟ್ಟಿದ್ದಾರೆ ಎಂದು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಹೇಳಿದ್ದಾರೆ. ಟರ್ಕಿ, ಸಿರಿಯಾಗೆ ಭಾರತದಿಂದ ಪರಿಹಾರ ತಂಡಗಳ ಐದು ವಿಮಾನಗಳನ್ನು ಕಳುಹಿಸಿ ಕೊಡಲಾಗಿದೆ. ಮತ್ತೊಂದೆಡೆ, ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರ ಟರ್ಕಿ ಪ್ರವಾಸವನ್ನು ರದ್ದುಪಡಿಸಲಾಗಿದೆ. ಭೂಕಂಪದಿಂದ ತತ್ತರಿಸಿರುವಾಗ ಟರ್ಕಿಗೆ ಬರುವುದ ಬೇಡ ಎಂದು ಅಲ್ಲಿನ ಸರ್ಕಾರ ಹೇಳಿದ್ದರಿಂದ, ಷರೀಫ್ ಅನಿವಾರ್ಯವಾಗಿ ತಮ್ಮ ಪ್ರವಾಸ ರದ್ದು ಮಾಡಿದ್ದಾರೆ.


ಭೂಕಂಪ ಸಂಭವಿಸಿದ ಮೊದಲ ದಿನವಾದ ಸೋಮವಾರ ಪರಿಹಾರ ಕಾರ್ಯಾಚರಣೆಗೆ ಸ್ವಲ್ಪ ಹಿನ್ನೆಡೆಯಾಗಿತ್ತು. ಆದರೆ, ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎದು ಎರ್ಡೋಗನ್ ಅವರು ಹೇಳಿದ್ದಾರೆ. ಯಾವುದೇ ಪ್ರಜೆ ಬೀದಿಯಲ್ಲಿ ಉಳಿಯಲು ನಾವು ಬಿಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಸರ್ಕಾರಿ ನಿಯಂತ್ರಿತ ಸಿರಿಯಾ ಪ್ರದೇಶದಲ್ಲಿ 1,250 ಜನರು ಮೃತಪಟ್ಟರೆ, ಬಂಡುಕೋರರು ನಿಯಂತ್ರಣದಲ್ಲಿರುವ ಪ್ರದೇಶದಲ್ಲಿ ಕನಿಷ್ಠ 1280 ಮಂದಿ ಸಾವಿಗೀಡಾಗಿದ್ದಾರೆ ಎಂದು ಸಿರಿಯಾ ಹೇಳಿಕೊಂಡಿದೆ.
ಟರ್ಕಿ, ಸಿರಿಯಾಗೆ ಭಾರತದಿಂದ ಪರಿಹಾರ ತಂಡಗಳ ಐದು ವಿಮಾನ
ಸರಣಿ ಭೂಕಂಪದಿಂದ ತತ್ತರಿಸಿರುವ ಟರ್ಕಿ ಮತ್ತು ಸಿರಿಯಾ ಜನರಿಗೆ ನೆರವು ನೀಡುವುದಕ್ಕಾಗಿ ಭಾರತದ ಐದು ವಿಮಾನಗಳನ್ನು ಕಳುಹಿಸಲಾಗಿದೆ. ಇದರಲ್ಲಿ ತಜ್ಞ ವೈದ್ಯರು, ಪರಿಹಾರ ಕಾರ್ಯಾಚರಣೆ ತಂಡ, ಪರಿಹಾರ ಸಾಮಾಗ್ರಿ, ಔಷಧಗಳನ್ನು ಕಳುಹಿಸಿಕೊಡಲಾಗಿದೆ. ಜತೆಗೆ ಡಾಗ್ ಸ್ಕಾಟ್ ಕೂಡ ಇದೆ.
Five back-to-back earthquakes since Monday have killed over 8,300 people and left tens of thousands injured in Turkey and Syria. Officials and medics said 8,574 people have died in Turkey and 2,662 in Syria, bringing the total to around 11,200. On Monday, an earthquake of magnitude 7.8 centered in the Pazarcik district jolted Kahramanmaras and hit several provinces, including Gaziantep, Sanliurfa, Diyarbakir, Adana, Adiyaman, Malatya, Osmaniye, Hatay, and Kilis. Later in the day, an earthquake of 7.6 magnitude centred in Kahramanmaras's Elbistan district jolted the region
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm