ಬ್ರೇಕಿಂಗ್ ನ್ಯೂಸ್
08-02-23 09:18 pm HK News Desk ದೇಶ - ವಿದೇಶ
ಇಸ್ತಾಂಬುಲ್, ಫೆ.8 : ಭೂಕಂಪದಲ್ಲಿ ಮೃತರ ಸಂಖ್ಯೆ 11 ಸಾವಿರಕ್ಕೇರಿಕೆ, ಪರಿಹಾರಕ್ಕೆ ಭಾರತದಿಂದ 5 ವಿಮಾನ ರವಾನೆ
ಅಂಕಾರ: ಎರಡು ಪ್ರಬಲ ಭೂಕಂಪಗಳ ಪರಿಣಾಮ ದಕ್ಷಿಣ ಟರ್ಕಿ ಮತ್ತು ನೆರೆಯ ಸಿರಿಯಾ ದೇಶಗಳಲ್ಲಿ ವಿನಾಶ ತಾಂಡವವಾಡಿದೆ.
ದುರಂತದ ಪ್ರಮಾಣ ಈಗಷ್ಟೇ ಸ್ಪಷ್ಟವಾಗುತ್ತಿದ್ದು, ಸಾವಿನ ಸಂಖ್ಯೆ 11,000 ಮೀರಿದೆ. ಅವಶೇಷಗಳ ನಡುವಿನಿಂದ ಬದುಕುಳಿದಿರಬಹುದಾದವರನ್ನು ರಕ್ಷಿಸಲು ರಕ್ಷಣಾ ಕಾರ್ಯಕರ್ತರು ಹೆಣಗಾಡುತ್ತಿದ್ದಾರೆ. ಈ ಪೈಕಿ ಟರ್ಕಿಯೊಂದರಲ್ಲೇ 8500 ಜನರು ಮೃತಪಟ್ಟಿದ್ದಾರೆ ಎಂದು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಹೇಳಿದ್ದಾರೆ. ಟರ್ಕಿ, ಸಿರಿಯಾಗೆ ಭಾರತದಿಂದ ಪರಿಹಾರ ತಂಡಗಳ ಐದು ವಿಮಾನಗಳನ್ನು ಕಳುಹಿಸಿ ಕೊಡಲಾಗಿದೆ. ಮತ್ತೊಂದೆಡೆ, ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರ ಟರ್ಕಿ ಪ್ರವಾಸವನ್ನು ರದ್ದುಪಡಿಸಲಾಗಿದೆ. ಭೂಕಂಪದಿಂದ ತತ್ತರಿಸಿರುವಾಗ ಟರ್ಕಿಗೆ ಬರುವುದ ಬೇಡ ಎಂದು ಅಲ್ಲಿನ ಸರ್ಕಾರ ಹೇಳಿದ್ದರಿಂದ, ಷರೀಫ್ ಅನಿವಾರ್ಯವಾಗಿ ತಮ್ಮ ಪ್ರವಾಸ ರದ್ದು ಮಾಡಿದ್ದಾರೆ.


ಭೂಕಂಪ ಸಂಭವಿಸಿದ ಮೊದಲ ದಿನವಾದ ಸೋಮವಾರ ಪರಿಹಾರ ಕಾರ್ಯಾಚರಣೆಗೆ ಸ್ವಲ್ಪ ಹಿನ್ನೆಡೆಯಾಗಿತ್ತು. ಆದರೆ, ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎದು ಎರ್ಡೋಗನ್ ಅವರು ಹೇಳಿದ್ದಾರೆ. ಯಾವುದೇ ಪ್ರಜೆ ಬೀದಿಯಲ್ಲಿ ಉಳಿಯಲು ನಾವು ಬಿಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಸರ್ಕಾರಿ ನಿಯಂತ್ರಿತ ಸಿರಿಯಾ ಪ್ರದೇಶದಲ್ಲಿ 1,250 ಜನರು ಮೃತಪಟ್ಟರೆ, ಬಂಡುಕೋರರು ನಿಯಂತ್ರಣದಲ್ಲಿರುವ ಪ್ರದೇಶದಲ್ಲಿ ಕನಿಷ್ಠ 1280 ಮಂದಿ ಸಾವಿಗೀಡಾಗಿದ್ದಾರೆ ಎಂದು ಸಿರಿಯಾ ಹೇಳಿಕೊಂಡಿದೆ.
ಟರ್ಕಿ, ಸಿರಿಯಾಗೆ ಭಾರತದಿಂದ ಪರಿಹಾರ ತಂಡಗಳ ಐದು ವಿಮಾನ
ಸರಣಿ ಭೂಕಂಪದಿಂದ ತತ್ತರಿಸಿರುವ ಟರ್ಕಿ ಮತ್ತು ಸಿರಿಯಾ ಜನರಿಗೆ ನೆರವು ನೀಡುವುದಕ್ಕಾಗಿ ಭಾರತದ ಐದು ವಿಮಾನಗಳನ್ನು ಕಳುಹಿಸಲಾಗಿದೆ. ಇದರಲ್ಲಿ ತಜ್ಞ ವೈದ್ಯರು, ಪರಿಹಾರ ಕಾರ್ಯಾಚರಣೆ ತಂಡ, ಪರಿಹಾರ ಸಾಮಾಗ್ರಿ, ಔಷಧಗಳನ್ನು ಕಳುಹಿಸಿಕೊಡಲಾಗಿದೆ. ಜತೆಗೆ ಡಾಗ್ ಸ್ಕಾಟ್ ಕೂಡ ಇದೆ.
Five back-to-back earthquakes since Monday have killed over 8,300 people and left tens of thousands injured in Turkey and Syria. Officials and medics said 8,574 people have died in Turkey and 2,662 in Syria, bringing the total to around 11,200. On Monday, an earthquake of magnitude 7.8 centered in the Pazarcik district jolted Kahramanmaras and hit several provinces, including Gaziantep, Sanliurfa, Diyarbakir, Adana, Adiyaman, Malatya, Osmaniye, Hatay, and Kilis. Later in the day, an earthquake of 7.6 magnitude centred in Kahramanmaras's Elbistan district jolted the region
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm