ಬ್ರೇಕಿಂಗ್ ನ್ಯೂಸ್
08-02-23 11:06 pm HK News Desk ದೇಶ - ವಿದೇಶ
ಕೋಜಿಕ್ಕೋಡ್, ಫೆ.8 : ಕೇರಳದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಲಿಂಗತ್ವ ಅಲ್ಪಸಂಖ್ಯಾತರೊಬ್ಬರು ಬುಧವಾರ ಮಗುವಿಗೆ ಜನ್ಮ ನೀಡಿದ್ದು, ಇದು ದೇಶದ ಮೊದಲ ಪ್ರಕರಣ ಎನ್ನಲಾಗಿದೆ. ಬುಧವಾರ ಬೆಳಗ್ಗೆ 9.30ರ ವೇಳೆಗೆ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಸಹದ್ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಜಹಾದ್ ಅವರ ಸಂಗಾತಿ ಜಿಯಾ ಪಾವಲ್ ತಿಳಿಸಿದ್ದಾರೆ.
‘ಮಗು ಮತ್ತು ಸಹಾದ್ ಇಬ್ಬರೂ ಆರೋಗ್ಯವಾಗಿದ್ದಾರೆ’ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಯಾ, ನವಜಾತ ಶಿಶುವಿನ ಲಿಂಗವನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.
![]()
ಇತ್ತೀಚೆಗಷ್ಟೇ ಜಿಯಾ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ಸಹಾದ್ ಅವರೀಗ ಎಂಟು ತಿಂಗಳ ಗರ್ಭಿಣಿ ಎಂದು ಘೋಷಿಸಿದ್ದರು. ‘ನಾನು ತಾಯಿಯಾಗುವ ಮತ್ತು ಅವನು ತಂದೆಯಾಗುವ ಕನಸನ್ನು ನನಸಾಗಿಸಿಕೊಳ್ಳಲಿದ್ದೇವೆ. ಎಂಟು ತಿಂಗಳ ಭ್ರೂಣವು ಈಗ ಸಹಾದ್ ಹೊಟ್ಟೆಯಲ್ಲಿ ಬೆಳೆಯುತ್ತಿದೆ. ನಮಗೆ ತಿಳಿದುಬಂದ ಮಾಹಿತಿ ಪ್ರಕಾರ, ಭಾರತದಲ್ಲಿ ಲಿಂಗಪರಿವರ್ತಿತ ಪುರುಷ (ಟ್ರಾನ್ಸ್ಮ್ಯಾನ್) ಗರ್ಭಧಾರಣೆ ಮಾಡಿರುವುದು ಇದೇ ಮೊದಲು’ ಎಂದೂ ಜಿಯಾ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ತಿಳಿಸಿದ್ದರು.
ನಾನು ಗರ್ಭಿಣಿಯಾಗುವ ಬಗ್ಗೆ ಎಂದಿಗೂ ಯೋಚಿಸಿರಲಿಲ್ಲ. ಒಂದು ವೇಳೆ ಹಾಗೆ ಮೊದಲೇ ಯೋಚಿಸಿದ್ದರೆ ಶಸ್ತ್ರಚಿಕಿತ್ಸೆಯ ಮೂಲಕ ನನ್ನ ಸ್ತನಗಳನ್ನು ತೆಗೆಸಿಕೊಳ್ಳುತ್ತಿರಲಿಲ್ಲ’ ಎಂದೂ ಸಹಾದ್ ತಿಳಿಸಿದ್ದರು.
ಹುಟ್ಟಿನಿಂದ ಹೆಣ್ಣಾಗಿದ್ದ ಸಹಾದ್, ಲಿಂಗಪರಿವರ್ತಿತ ಪುರುಷನಾಗಿದ್ದು, ಹಾರ್ಮೋನ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಮಗು ಹೊಂದಬೇಕೆಂಬ ಆಸೆಯಿಂದ ಹಾರ್ಮೋನ್ ಚಿಕಿತ್ಸೆಯನ್ನು ನಿಲ್ಲಿಸಿದ್ದರು. ಸಹಾದ್ ಅವರ ಸಂಗಾತಿ ಜಿಯಾ ಪಾವಲ್ ಹುಟ್ಟಿನಿಂದ ಗಂಡಾಗಿದ್ದು, ಲಿಂಗಪರಿವರ್ತನೆಯ ಮೂಲಕ ಹೆಣ್ಣಾಗಿದ್ದಾರೆ. ಈಗ ಸಹಾದ್ ಮಗುವಿಗೆ ಜನ್ಮ ನೀಡಿದ್ದು ಹೊಸ ದಾಖಲೆ ಸೇರಿದ್ದಾರೆ.
A Keralite transgender couple, who recently announced pregnancy, was blessed with a baby at a state-run hospital in Kozhikode on Wednesday, considered to be the first such case in the country. "The baby was born by around 9.30 am through a Cesarean Section at the Government Medical College Hospital," Ziya Paval, one of the trans partners, told PTI. Both the baby and Zahhad, her partner who delivered the child, are doing well, Ms Paval added.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm