ಬ್ರೇಕಿಂಗ್ ನ್ಯೂಸ್
09-02-23 02:53 pm HK News Desk ದೇಶ - ವಿದೇಶ
ಕೇರಳ, ಫೆ.9 : ಬಹುಭಾಷಾ ನಟ ಪ್ರಕಾಶ್ ರಾಜ್ ಪಠಾಣ್, ಪಠಾಣ್ ಸಿನಿಮಾ ಟೀಕಿಸಿದವರ ಬಗ್ಗೆ, ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಕೊಂಡಾಡಿದವರ ಬಗ್ಗೆ ಮಾತನಾಡಿದ್ದಾರೆ. ಇತ್ತೀಚೆಗೆ ಕೇರಳದ ತಿರುವನಂತಪುರದಲ್ಲಿ ನಡೆದ ಮಾತೃಭೂಮಿ ಅಂತಾರಾಷ್ಟ್ರೀಯ ಉತ್ಸವದಲ್ಲಿ ಭಾಗವಹಿಸಿದ ಪ್ರಕಾಶ್ ರಾಜ್, ಪಠಾಣ್ ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ.
ಶಾರುಖ್ ಖಾನ್ ಅವರ ಪಠಾಣ್ ಚಿತ್ರವನ್ನು ಬ್ಯಾನ್ ಮಾಡಬೇಕೆಂದು ಮೂರ್ಖರು, ಮತಾಂಧರ ಒಂದು ದೊಡ್ಡ ಪಡೆಯೇ ಮುಂದೆ ಬಂದಿತ್ತು. ಆದರೆ, ಅದು ಸಾಧ್ಯವಾಗಲಿಲ್ಲ. ಇತ್ತ ಪಠಾಣ್ ಚಿತ್ರ ಬಾಕ್ಸ್ ಆಫೀಸ್ನಲ್ಲಿ ನೂರಾರು ಕೋಟಿ ಗಳಿಕೆ ಮಾಡಿತು. ಇದೇ ಮೂರ್ಖರಿಗೆ ಪ್ರಧಾನಿ ಮೋದಿ ಚಿತ್ರ ಬಿಡುಗಡೆ ಆದಾಗ ಕೇವಲ 30 ಕೋಟಿ ಗಳಿಕೆ ಮಾಡಿಸಲು ಆಗಲಿಲ್ಲ.. ಹಾಗಾಗಿ ಇದು ಕೇವಲ ಬೊಗಳುವಿಕೆ ಮಾತ್ರವೇ ಹೊರತು ಕಚ್ಚುವಿಕೆಯಲ್ಲ ಎಂದಿದ್ದಾರೆ.

ಕಾಶ್ಮೀರ್ ಫೈಲ್ಸ್ ಚಿತ್ರಕ್ಕೂ ಟೀಕೆ
ಅದೇ ರೀತಿ ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆಯೂ ಮಾತನಾಡಿದ ಪ್ರಕಾಶ್ ರಾಜ್, "ಕಾಶ್ಮೀರ್ ಫೈಲ್ಸ್ ಒಂದು ನಾನ್ಸೆನ್ಸ್ ಸಿನಿಮಾ. ಆದರೆ, ಆ ಚಿತ್ರವನ್ನು ನಿರ್ಮಿಸಿದವರು ಯಾರು ಎಂಬುದು ನಮಗೆ ತಿಳಿದಿದೆ. ಈ ನಾಚಿಗೆ ಇಲ್ಲದ ಚಿತ್ರಕ್ಕೆ ಅಂತಾರಾಷ್ಟ್ರೀಯ ಸಿನಿಮಾ ತೀರ್ಪುಗಾರರು ಉಗಿದಿದ್ದಾರೆ. ಇತ್ತ ನನಗೇಕೆ ಆಸ್ಕರ್ ಸಿಗುತ್ತಿಲ್ಲ ಎಂದು ನಿರ್ದೇಶಕರು ಹೇಳಿಕೊಳ್ಳುತ್ತಿದ್ದಾರೆ. ಆಸ್ಕರ್ ಅಲ್ಲ, ಇವರಿಗೆ ಭಾಸ್ಕರ್ ಕೂಡ ಸಿಗುವುದಿಲ್ಲ. ಈ ಥರದ ಸಿನಿಮಾ ಮಾಡುವ ಸಲುವಾಗಿಯೇ ಅವರು 2000 ಕೋಟಿ ಹಣವನ್ನು ತೆಗೆದಿಟ್ಟಿದ್ದಾರೆ. ಆದರೆ, ಎಲ್ಲ ಸಮಯದಲ್ಲೂ ಜನರನ್ನು ಮರಳು ಮಾಡಲು ಸಾಧ್ಯವಿಲ್ಲ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ಪಠಾಣ್ ಬಾಕ್ಸ್ ಆಫೀಸ್ ಕಮಾಯಿ
ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾ ಬಿಡುಗಡೆಗೂ ಮುನ್ನ ಭಾರೀ ವಿರೋಧ ಎದುರಿಸಿತ್ತು. ಆದರೆ, ಬಿಡುಗಡೆ ಬಳಿಕ ಅದು ಬೇರೆಯದೇ ಸ್ವರೂಪ ಪಡೆಯಿತು. ಚಿತ್ರ ಬಿಡುಗಡೆಯಾಗಿ15 ದಿನಗಳಾದರೂ ಕಲೆಕ್ಷನ್ ಇನ್ನೂ ನಿಂತಿಲ್ಲ. ಬಾಕ್ಸ್ ಆಫೀಸ್ನಲ್ಲಿ ನೂರಾರು ಕೋಟಿ ಗಳಿಕೆ ಮಾಡಿ, ಹಿಟ್ ಪಟ್ಟಿ ಸೇರಿದೆ. ಅಷ್ಟೇ ಅಲ್ಲ ಸೋಲಿನ ಸುಳಿಗೆ ಸಿಲುಕಿದ್ದ ಶಾರುಖ್ಗೂ ಪಠಾಣ್ ಕೈ ಹಿಡಿದಿದೆ. ಹಿಂದಿಯಲ್ಲಿಯೇ 430 ಕೋಟಿ ಗಳಿಕೆ ಮಾಡುವ ಮೂಲಕ ಈ ಹಿಂದಿನ ಕೆಜಿಎಫ್ ಚಾಪ್ಟರ್ 2 ಹೆಸರಿನಲ್ಲಿದ್ದ ದಾಖಲೆಯನ್ನೂ ಮುರಿದು ಎರಡನೇ ಸ್ಥಾನವನ್ನು ಪಠಾಣ್ ಸಿನಿಮಾ ಅಲಂಕರಿಸಿದೆ.
Prakash Raj also added that the director badly needs an Oscar for this. He further added that creators like him cannot fool people all the time. The Kashmir Files was one of the highest-grossing films in Bollywood in 2022. Prakash Raj has been vocal in supporting Pathaan and spoke about the 'Boycott Pathaan' trend several times on his official Twitter page. Recently, he attended Mathrubhumi International Festival of Letters in Kerala.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm