ಬ್ರೇಕಿಂಗ್ ನ್ಯೂಸ್
09-02-23 05:31 pm HK News Desk ದೇಶ - ವಿದೇಶ
ಹಿಮಾಚಲ, ಫೆ.9: ಜಿಎಸ್ಟಿ ಜಮಾ ಮಾಡಿಲ್ಲ ಎಂಬ ಆರೋಪದಡಿ ಗೌತಮ್ ಅದಾನಿ ಒಡೆತನದ ಅದಾನಿ ಕಂಪನಿ ಮೇಲೆ ರಾಜ್ಯ ಅಬಕಾರಿ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಮಾಚಲ ಪ್ರದೇಶ ರಾಜ್ಯ ತೆರಿಗೆ ಇಲಾಖೆಯು ಪರ್ವಾನೂರಿನಲ್ಲಿರುವ ಅದಾನಿ ಕಂಪನಿ ಮೇಲೆ ದಾಳಿ ಮಾಡಿದೆ.
ಬುಧವಾರದಂದು ರಾತ್ರಿ ವೇಳೆ ಹಿಮಾಚಲ ಪ್ರದೇಶದಲ್ಲಿರುವ ಅದಾನಿ ವಿಲ್ಮಾರ್ ಗ್ರೂಪ್ನ ಸಿ ಆಯಂಡ್ ಎಫ್ ಸ್ಟೋರ್ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ಕಳೆದ 5 ವರ್ಷದಿಂದ ಸರಕು ಮತ್ತು ಸೇವಾ ತೆರಿಗೆಯನ್ನು ಜಮಾ ಮಾಡಿಲ್ಲ ಎಂಬ ಆರೋಪದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಇದು ಕಾಂಗ್ರೆಸ್ ನಡೆಸಿದ ದಾಳಿಯೇ?
ಅಬಕಾರಿ ಇಲಾಖೆ ಮತ್ತು ತೆರಿಗೆ ಇಲಾಖೆ ತಂಡವು ದಾಳಿ ಮಾಡುವ ಮೂಲಕ ಮೊದಲಿಗೆ ಗೋದಾಮಿನಲ್ಲಿರುವ ದಾಸ್ತಾನು ಮತ್ತು ದಾಖಲೆಯನ್ನು ಪರಿಶೀಲಿಸಿದ್ದಾರೆ.ಹಿಮಾಚಲ ಪ್ರದೇಶದಲ್ಲಿರುವ ಅದಾನಿ ಒಡೆತನದ ಏಳು ಕಂಪನಿಗಳಿವೆ. ಅವುಗಳಲ್ಲಿ ಹಣ್ಣುಗಳ ಕೋಲ್ಡ್ ಸ್ಟೋರ್ಗಳಿಂದ ಹಿಡಿದು, ದಿನಸಿ ಅಂಗಡಿಯವರೆಗಿನ ಸಾಮಾಗ್ರಿಗಳಿವೆ.ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿ ಅದಾನಿ ಕಂಪನಿ ಮೇಲೆ ನಡೆಸಿದ ಮೊದಲ ದಾಳಿ ಇದಾಗಿದೆ.

8 ಲಕ್ಷ ಕೋಟಿ ನಷ್ಟ ;
ಇತ್ತೀಚೆಗೆ ಅದಾನಿ ಗ್ರೂಪ್ ಮಾಲೀಕ ಗೌತಮ್ ಅದಾನಿ ಸಂಪತ್ತು ನೆಲಕಚ್ಚಿತ್ತು. ಕೇವಲ ಎರಡು ವಾರಗಳಲ್ಲಿ ದೊಡ್ಡ ನಷ್ಟ ಅನುಭವಿಸಿತ್ತು. 8 ಲಕ್ಷ ಕೋಟಿ ನಷ್ಟ ಹೊಂದಿದ್ದರು. ಈ ಬಗ್ಗೆ ಪಾರ್ಲಿಮೆಂಟ್ನಲ್ಲೂ ಚರ್ಚೆ ನಡೆದಿತ್ತು. ರಾಹುಲ್ಗಾಂಧಿಯವರು ಲೋಕಸಭೆಯಲ್ಲಿ ಗೌತಮ್ ಅದಾನಿ ಮತ್ತು ಮೋದಿ ಸ್ನೇಹದ ಬಗ್ಗೆ ವಾಗ್ವಾದ ನಡೆಸಿದ್ದರು. ಅನೇಕ ವರ್ಷದಿಂದಲೂ ಮೋದಿಗೆ ಗೌತಮ್ ಅದಾನಿ ಜೊತೆಗೆ ಸಂಪರ್ಕ ಇತ್ತು ಎಂದು ಹೇಳಿದ್ದರು. ಜೊತೆಗೆ ಕೆಲವು ಫೋಟೋ ಸಾಕ್ಷಾಧಾರಗಳನ್ನು ತೋರಿಸಿದ್ದರು.
In another major development, the Adani Wilmar Group has reportedly been raided by the State Excise and Taxation department. As per media reports, the GST officials have visited the offices of Adani Wilmar Group over allegations of GST violations. As per Times Now, the raid on Adani Wilmar Group was carried out following allegations of not depositing GST. Further, the officials are reportedly seeking information about input tax credit claims of the company with respect to state operations.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm