ಬ್ರೇಕಿಂಗ್ ನ್ಯೂಸ್
09-02-23 07:01 pm HK News Desk ದೇಶ - ವಿದೇಶ
ನವದೆಹಲಿ, ಫೆ.9: ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಭಾಷಣ ಮಾಡುತ್ತಿದ್ದಾಗ ಪ್ರತಿಪಕ್ಷ ಸದಸ್ಯರು ಮೋದಿ- ಅದಾನಿ ಭಾಯಿ ಭಾಯಿ ಎಂದು ಘೋಷಣೆ ಕೂಗಿದ್ದಾರೆ. ಪ್ರಧಾನಿ ಭಾಷಣದುದ್ದಕ್ಕೂ ಕಾಂಗ್ರೆಸ್, ಡಿಎಂಕೆ, ಟಿಎಂಸಿ ಸಂಸದರು ಸದನದ ಬಾವಿಗಿಳಿದು ಮೋದಿ – ಅದಾನಿ ಭಾಯಿ ಭಾಯಿ ಎಂದು ಘೋಷಣೆ ಕೂಗಿದ್ದಾರೆ.
ಇದೇ ವೇಳೆ, ಮೋದಿ ಪ್ರತಿಭಟನಾಕಾರರಿಗೆ ಪ್ರತಿಯಾಗಿ ಕವನವನ್ನು ಓದಿ ಟಾಂಗ್ ನೀಡಿದ್ದಾರೆ. ನಿಮ್ಮಲ್ಲಿ ಕೆಸರು ಇದೆ, ನನ್ನಲ್ಲಿ ಗುಲಾಬ್ ಇದೆ, ನೀವು ಎಷ್ಟೇ ಕೆಸರು ಎರಚಿದರೂ, ಅಲ್ಲೆಲ್ಲೆ ಕಮಲ ಅರಳುತ್ತದೆ ಎನ್ನುವ ಕವನವನ್ನು ಹೇಳಿದರು. ಆಮೂಲಕ ನಿಮ್ಮ ಕೆಸರೆರಚಾಟಕ್ಕೆ ಎದೆಗುಂದಲ್ಲ, ಇದರಿಂದ ಕಮಲ ಮತ್ತಷ್ಟು ಅರಳುತ್ತದೆ ಅನ್ನುವುದನ್ನು ಮೋದಿ ಸದನದಲ್ಲಿ ಹೇಳಿದ್ದಾರೆ.
ಇತ್ತೀಚೆಗೆ ಉದ್ಯಮಿ ಗೌತಮ್ ಅದಾನಿ ಬಗ್ಗೆ ಅಮೆರಿಕದ ಕಂಪನಿ ನೀಡಿರುವ ವರದಿ ಜಂಟಿ ಸದನ ಸಮತಿಯಿಂದ ತನಿಖೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಕಳೆದ ಮೂರು ದಿನಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದವು. ಆದರೆ, ಜಂಟಿ ಸದನ ಸಮಿತಿಯ ತನಿಖೆಯಾಗಲೀ, ಸದನದಲ್ಲಿ ಆ ಕುರಿತು ಚರ್ಚೆ ನಡೆಸುವುದಕ್ಕಾಗಲೀ ಬಿಜೆಪಿ ಸರಕಾರ ಒಪ್ಪಿಗೆ ನೀಡಿರಲಿಲ್ಲ.
ಅದಾನಿ ಉದ್ಯಮದ ತನಿಖೆಗೆ ಸುಪ್ರೀಂಗೆ ಅರ್ಜಿ
ಇದೇ ವೇಳೆ, ಅದಾನಿ ಉದ್ಯಮದ ಕುರಿತು ಹಿಂಡನ್ ಬರ್ಗ್ ನೀಡಿರುವ ವರದಿ ಕುರಿತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಬೇಕೆಂದು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಕೆಯಾಗಿದೆ. ವಕೀಲ ವಿಶಾಲ್ ತಿವಾರಿ ಸಲ್ಲಿಸಿರುವ ಅರ್ಜಿಯನ್ನು ತನಿಖೆ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದ್ದು, ಶುಕ್ರವಾರ ವಿಚಾರಣೆ ನಡೆಸಲಿದೆ. ನ್ಯಾ.ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಸಾರ್ವಜನಿಕ ಹಿತಾಸಕ್ತಿಯ ಈ ಅರ್ಜಿ ಸಲ್ಲಿಕೆಯಾಗಿತ್ತು. ಇದಲ್ಲದೆ, ಕಾರ್ಪೊರೇಟ್ ಸಂಸ್ಥೆಗಳಿಗೆ ನೀಡಲಾಗುವ 500 ಕೋಟಿಗೂ ಹೆಚ್ಚಿನ ಮೊತ್ತದ ಸಾಲದ ಮಂಜೂರಾತಿ ನೀತಿಯನ್ನು ಮೇಲ್ವಿಚಾರಣೆ ಮಾಡಲು ಪ್ರತ್ಯೇಕ ಸಮಿತಿಯನ್ನು ರಚಿಸಬೇಕೆಂದೂ ಅರ್ಜಿಯಲ್ಲಿ ವಿಶಾಲ್ ಕೋರಿದ್ದಾರೆ.
As Prime Minister Narendra Modi began addressing the Rajya Sabha, the Opposition began raising slogans of ‘Modi-Adani bhai bhai’. However, the PM remained undeterred and took a jibe at the protesting lawmakers with poetic lines.“Keechad uske paas tha, mere paas gulaal. Jo jiske paas tha, diya usne woh uchaal (They had mud, I had colours. Whosoever had whatever they flung in the air)," PM Modi said, adding “jitna keechad uchaaloge, kamal utna hi khilega" (the more mud-slinging, the more number of lotus will bloom).
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm