ಬ್ರೇಕಿಂಗ್ ನ್ಯೂಸ್
13-02-23 01:45 pm HK News Desk ದೇಶ - ವಿದೇಶ
ಮುಂಬೈ, ಫೆ.13: ಆಹಾರ ವಿತರಣಾ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಝೊಮ್ಯಾಟೊ ಕಂಪನಿ ದೇಶದ 225 ಸಣ್ಣ ನಗರಗಳಲ್ಲಿ ತನ್ನ ಕಾರ್ಯಚರಣೆ ಸ್ಥಗಿತಗೊಳಿಸಿದೆ.
ಆಹಾರ ವಿತರಣೆ ಸೇವೆ ವಹಿವಾಟಿನಲ್ಲಿ ಮುಂದಗತಿಯಿಂದ ಡಿಸೆಂಬರ್ ಅಂತ್ಯಕ್ಕೆ 346.6 ಕೋಟಿ ರೂಪಾಯಿ ನಷ್ಟ ಅನುಭವಿಸಿರುವ ಹಿನ್ನೆಲೆಯಲ್ಲಿ ಹೆಚ್ಚು ಬೇಡಿಕೆ ಇರದ 200ಕ್ಕೂ ಹೆಚ್ಚು ಸಣ್ಣ ನಗರಗಳಲ್ಲಿ ತನ್ನ ಕಾರ್ಯಚರಣೆ ನಿಲ್ಲಿಸಿದೆ. ಇದರಿಂದ ಸಾವಿರಾರು ಜನರು ಉದ್ಯೋಗ ಕಳೆದುಕೊಳ್ಳುವಂತಾಗಿದೆ.
ಕೊರೊನಾ ಪೂರ್ವ ಹಾಗೂ ಕೊರೊನೋತ್ತರ ದಲ್ಲಿ ಉತ್ತಮ ಬೇಡಿಕೆ ಇತ್ತಾದರೂ ಇತ್ತೀಚಿನ ತಿಂಗಳಲ್ಲಿ ಆಹಾರ ವಿತರಣೆ ಸೇವೆಯಲ್ಲಿನ ಬೇಡಿಕೆ ಕುಸಿತವು ಅನಿರೀಕ್ಷಿತವಾಗಿದೆ. ಇದು ನಮ್ಮ ಕಂಪನಿಯ ಲಾಭದ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತಿದೆ. ಅದರ ಹೊರತಾಗಿಯೂ ನಮ್ಮ ಲಾಭದಾಯಕ ಗುರಿಯನ್ನು ಪೂರೈಸಲು ನಾವು ಉತ್ತಮ ಸ್ಥಿತಿಯಲ್ಲಿರುತ್ತೇವೆ ಎಂದು ಕಂಪನಿಯು ತನ್ನ ವರದಿಯಲ್ಲಿ ತಿಳಿಸಿದೆ.
ಝೊಮ್ಯಾಟೊ ಭಾರತದಲ್ಲಿ ಆಹಾರ ವಿತರಣೆ ಸೇವೆಗೆ ಹೆಚ್ಚು ಬಳಕೆಯಲ್ಲಿರುವ ಫುಡ್ ಡೆಲಿವರಿ ಆ್ಯಪ್ ಆಗಿದೆ. ಕಂಪನಿಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಇತ್ತೀಚಿಗೆ ಅದು ಗ್ರಾಹಕರಿಗೆ ಗೋಲ್ಡನ್ ಮೆಂಬರ್ಶಿಪ್ ಸ್ಕೀಮ್ ಮರು ಜಾರಿಗೊಳಿಸಿದೆ. ಇದಲ್ಲದೆ 800 ಹುದ್ದೆಗೆ ನೇಮಕ ಮಾಡಿಕೊಳ್ಳುವ ಬಗ್ಗೆ ಮುಂದಾಗಿರುವ ಸಂದರ್ಭದಲ್ಲಿಯೇ 225 ಸಣ್ಣ ನಗರಗಳಲ್ಲಿ ಜನವರಿಯಿಂದಲೇ ಹಂತ ಹಂತವಾಗಿ ಸೇವೆ ಸ್ಥಗಿತಗೊಳಿಸಿರುವ ವಿಚಾರವನ್ನು ವರದಿಯಲ್ಲಿ ಹೊರಹಾಕಿದೆ. ಈ ನಗರಗಳಿಂದ ಡಿಸೆಂಬರ್ ಅಂತ್ಯಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಒಟ್ಟು ಆರ್ಡರ್ ಮೌಲ್ಯದ ಮೇಲೆ ಕೇವಲ 0.3% ಬೇಡಿಕೆ ಬಂದಿವೆ.
Zomato, during its quarter three financial earnings report, noted that the food delivery tech company's losses have widened further. The company also announced that it has ceased operations in 225 smaller cities as the performance of these cities was 'not very encouraging'. The company reported losses of Rs 346.6 crore for the quarter that ended in December due to the reduction in food delivery business.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm