ಬ್ರೇಕಿಂಗ್ ನ್ಯೂಸ್
21-10-20 02:09 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೂಬರ್ 21: ಜಮ್ಮು ಕಾಶ್ಮೀರದಲ್ಲಿ ಶಾಂತಿ ಮರು ಸ್ಥಾಪನೆ ಮಾಡುತ್ತಿರುವ ಸೇನಾ ಪಡೆಗಳ ಮೇಲೆ ಪಾಕಿಸ್ಥಾನ, ಡ್ರೋಣ್ ಮೂಲಕ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿರುವ ಮಾಹಿತಿ ಹೊರಬಿದ್ದಿದೆ.
ಸಿರಿಯಾದಲ್ಲಿ ಭದ್ರತಾ ಪಡೆಗಳ ಮೇಲೆ ಐಸಿಸ್ ಭಯೋತ್ಪಾದಕರು ಡ್ರೋಣ್ ದಾಳಿ ನಡೆಸುತ್ತಿದ್ದಾರೆ. ಅದೇ ರೀತಿಯಲ್ಲಿ ಗಡಿಭಾಗದಲ್ಲಿ ಬೀಡು ಬಿಟ್ಟಿರುವ ಭಾರತದ ಭದ್ರತಾ ಪಡೆಗಳ ಮೇಲೆ ಡ್ರೋಣ್ ಮೂಲಕ ಬಾಂಬ್ ದಾಳಿ ನಡೆಸಲು ಪಾಕಿಸ್ಥಾನದ ಐಎಸ್ಐ ಮತ್ತು ಉಗ್ರರು ಯೋಜನೆ ಹಾಕಿದ್ದಾರೆ. ಕಡಿಮೆ ಬೆಲೆಯ ಡ್ರೋಣ್ ಗಳನ್ನು ಬಳಸಿ, ಈ ದಾಳಿ ನಡೆಸಲು ಪಾಕಿಸ್ಥಾನದ ಐಎಸ್ಐ ಸಂಚು ರೂಪಿಸಿದೆ. ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ಕಳೆದ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಜೈಷ್ ಮತ್ತು ಲಷ್ಕರ್ ಉಗ್ರವಾದಿ ಗುಂಪುಗಳ ಪ್ರಮುಖರ ಜೊತೆ ಐಎಸ್ಐ ಈ ಬಗ್ಗೆ ಚರ್ಚೆ ನಡೆಸಿದೆ ಎನ್ನುವ ಮಾಹಿತಿಯನ್ನು ಗುಪ್ತಚರ ಸಂಸ್ಥೆಗಳು ವರದಿ ಮಾಡಿವೆ. ಸಭೆಯಲ್ಲಿ ಮೂರು ಕಿಮೀ ವ್ಯಾಪ್ತಿಯ ಮತ್ತು 5 ಕೆಜಿ ಸ್ಫೋಟಕಗಳನ್ನು ಹೊತ್ತೊಯ್ಯಬಲ್ಲ ಡ್ರೋಣ್ ಗಳನ್ನು ಬಳಸಲು ಯೋಜನೆ ಹಾಕಲಾಗಿದೆ ಎನ್ನುವ ವಿಚಾರ ಹೊರಬಿದ್ದಿದೆ.

ಪಾಕಿಸ್ಥಾನದ ಕುತಂತ್ರಕ್ಕೆ ಭಾರತದ ಸೇನಾ ಪಡೆಯೂ ತಂತ್ರ ಹೂಡಿದ್ದು, ಯಾವುದೇ ಡ್ರೋಣ್ ಕಂಡುಬಂದರೂ ಹೊಡೆದುರುಳಿಸಲು ಸನ್ನದ್ಧವಾಗಿದೆ. ಗಡಿಭಾಗದಲ್ಲಿ ರಾಡಾರ್ ವ್ಯವಸ್ಥೆಯನ್ನು ಬಲಪಡಿಸಿದ್ದು, ಡ್ರೋಣ್ ಪತ್ತೆಗೆ ಸ್ಥಳೀಯ ಭದ್ರತಾ ಪಡೆಗಳಿಗೆ ತರಬೇತಿಯನ್ನೂ ನೀಡಲಾಗುತ್ತಿದೆ. ಗಡಿಭಾಗದಲ್ಲಿ ಶಸ್ತ್ರಾಸ್ತ್ರ, ನಕಲಿ ಕರೆನ್ಸಿ, ಮಾದಕ ವಸ್ತು ಸಾಗಿಸಲು ಪಾಕ್ ಉಗ್ರರು ಡ್ರೋಣ್ ಬಳಕೆ ಮಾಡುತ್ತಿರುವುದನ್ನು ಈಗಾಗಲೇ ಸೇನಾಪಡೆ ಪತ್ತೆ ಮಾಡಿದ್ದು, ಹಲವು ಬಾರಿ ಡ್ರೋಣ್ ಗಳನ್ನು ಹೊಡೆದುರುಳಿಸಿತ್ತು.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm