ಬ್ರೇಕಿಂಗ್ ನ್ಯೂಸ್
21-10-20 05:29 pm Headline Karnataka News Network ದೇಶ - ವಿದೇಶ
ಚೀನಾ,ಅಕ್ಟೋಬರ್ 21 : ಒಂದೇ ಕುಟುಂಬದ ಒಂಬತ್ತು ಜನ ಸದಸ್ಯರು ಮನೆಯಲ್ಲಿ ಕಾರ್ನ್ ನೂಡಲ್ಸ್ ತಿಂದು ಸಾವನ್ನಪ್ಪಿರುವ ಘಟನೆ ಈಶಾನ್ಯ ಚೀನಾದ ಹೀಲಾಂಗ್ಜಿಯಾಂಗ್ ಪ್ರಾಂತ್ಯದ ಜಿಕ್ಸಿ ನಗರದಲ್ಲಿ ನಡೆದಿದೆ.
ಹುದುಗಿಸಿದ ಜೋಳದ ಹಿಟ್ಟಿನ ನೂಡಲ್ ಅನ್ನು ಸುಮಾರು ಒಂದು ವರ್ಷಗಳ ಕಾಲ ಫ್ರಿಡ್ಜ್ನಲ್ಲಿ ಇಡಲಾಗಿತ್ತು. ಅದನ್ನು ಗಮನಿಸದೆ ಕುಟುಂಬ ಸೇವಿಸಿದೆ. ನೂಡಲ್ಸ್ನಲ್ಲಿದ್ದ ಬೊಂಗ್ರೆಕಿಕ್ ವಿಷಕಾರಿ ಆಮ್ಲದ ಪರಿಣಾಮ ಎಲ್ಲರೂ ಮೃತಪಟ್ಟಿದ್ದಾರೆ.
ಸ್ಯೂಡೋಮೊನಸ್ ಕೊಕೊವೆನೆನಾನ್ಸ್ ಎಂಬ ಬ್ಯಾಕ್ಟೀರಿಯನಿಂದ ಉತ್ಪತ್ತಿಯಾಗುವ ಬೊಂಗ್ರೆಕಿಕ್ ಆಮ್ಲದ ಹೆಚ್ಚಿನ ಸಾಂದ್ರತೆಯು ಕಾರ್ನ್ ನೂಡಲ್ಸ್ನಲ್ಲಿ ಪತ್ತೆಯಾಗಿದೆ, ಜೊತೆಗೆ ಅನಾರೋಗ್ಯಕ್ಕೆ ಒಳಗಾದವರ ದೇಹದಲ್ಲಿ ಗ್ಯಾಸ್ಟ್ರಿಕ್ ದ್ರವದಲ್ಲಿ ಪತ್ತೆಯಾಗಿದೆ ಎಂದು ಆರೋಗ್ಯ ಆಯೋಗ ತಿಳಿಸಿದೆ.
ಅಕ್ಟೋಬರ್ 5 ರ ಬೆಳಿಗ್ಗೆ 12 ಸದಸ್ಯರ ಕುಟುಂಬ ಕೂಟದಲ್ಲಿ, ಒಂಬತ್ತು ಜನ ಹುದುಗಿಸಿದ ಜೋಳದ ಹಿಟ್ಟಿನಿಂದ ತಯಾರಿಸಿದ ದಪ್ಪವಾದ ನೂಡಲ್ ಅನ್ನು ತಿಂದಿದ್ದರು. ಅಕ್ಟೋಬರ್ 10ರಂದು 8 ಜನ ಮೃತಪಟ್ಟರೆ, ಕೊನೆಯಲ್ಲಿ ಸೂಪ್ ಕುಡಿದು ಬದುಕುಳಿದಿದ್ದ ಮಹಿಳೆ ಸೋಮವಾರ ಸಾವಿಗೀಡಾಗಿದ್ದಾರೆ. ಆದರೆ ಅದೃಷ್ಟವಶಾತ್ ಕುಟುಂಬದ ಮೂವರು ಮಕ್ಕಳು ನೂಡಲ್ಸ್ ತಿನ್ನಲು ನಿರಾಕರಿಸಿದ್ದರು.
ಬೊಂಗ್ರೆಕಿಕ್ ಆಸಿಡ್, ಲಿವರ್, ಕಿಡ್ನಿ, ಹೃದಯ ಮತ್ತು ಮೆದುಳು ಒಳಗೊಂಡಂತೆ ಅನೇಕ ಅಂಗಗಳಿಗೆ ಗಂಭೀರವಾಗ ಹಾನಿಯುಂಟು ಮಾಡಬಲ್ಲದು. ಒಮ್ಮೆ ವಿಷ ಸೇವಿಸಿದರೆ, ಸಾವಿನ ಪ್ರಮಾಣವು ಶೇ. 40 ರಿಂದ 100% ವರೆಗೆ ಇರುತ್ತದೆ. ಹೆಚ್ಚಿನ ಉಷ್ಣಾಂಶದಲ್ಲಿ ಬೇಯಿಸಿದಾಗ ಬೊಂಗ್ರೆಕಿಕ್ ಆಸಿಡ್ ತಡೆಯಬಹುದು. ಇದೊಂದು ಮಾರಣಾಂತಿಕ ವಿಷ. ಹುದುಗಿಸಿದ ತೆಂಗಿನಕಾಯಿಯಿಂದಲೂ ಇದು ಉತ್ಪತಿಯಾಗುತ್ತದೆ ಎಂದು ಹೆಲಾಂಗ್ಜಿಯಾಂಗ್ನ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರದ ಆಹಾರ ಸುರಕ್ಷತಾ ನಿರ್ದೇಶಕ ಗಾವೋ ಫೈ ತಿಳಿಸಿದ್ದಾರೆ
ಕಲುಷಿತ ಆಹಾರ ಸೇವಿಸಿದ ಕೆಲವೇ ಗಂಟೆಗಳಲ್ಲಿ ಬೊಂಗ್ರೆಕಿಕ್ ಆಸಿಡ್ ರೋಗ ಲಕ್ಷಣಗಳು ಆರಂಭವಾಗುತ್ತವೆ. ಹೊಟ್ಟೆ ನೋವು, ಬೆವರುವುದು, ದೌರ್ಬಲ್ಯ ಮತ್ತು ಕೊನೆಯಲ್ಲಿ ಕೋಮಾಗೆ ಜಾರುತ್ತಾರೆ. 24 ಗಂಟೆಗಳಲ್ಲೇ ಸಾವು ಸಂಭವಿಸುತ್ತದೆ ಎಂದು ಗಾವೋ ಮಾಹಿತಿ ನೀಡಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm