ಬ್ರೇಕಿಂಗ್ ನ್ಯೂಸ್
21-02-23 07:39 pm HK News Desk ದೇಶ - ವಿದೇಶ
ಹೈದರಾಬಾದ್, ಫೆ.21 : ನಾಲ್ಕು ವರ್ಷದ ಬಾಲಕನನ್ನು ಬೀದಿ ನಾಯಿಗಳು ಕಚ್ಚಿ ಎಳೆದಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ಹೈದರಾಬಾದ್ ನಲ್ಲಿ ನಡೆದಿದ್ದು ಇದರ ಸಿಸಿಟಿವಿ ವೈರಲ್ ಆಗಿದೆ.
ಹೈದರಾಬಾದ್ ನಗರದ ಅಪಾರ್ಟ್ಮೆಂಟ್ ಒಂದರ ಆವರಣದಲ್ಲಿ ಫೆ.19ರಂದು ಘಟನೆ ನಡೆದಿದೆ. ಬಾಲಕನ ತಂದೆ ಅಪಾರ್ಟ್ಮೆಂಟ್ ವಾಚ್ ಮನ್ ಆಗಿದ್ದು ಬಾಲಕ ಒಬ್ಬಂಟಿಯಾಗಿ ಹೊರಕ್ಕೆ ಬಂದಿದ್ದಾಗ ನಾಯಿಗಳು ಮುತ್ತಿಕೊಂಡಿವೆ. ಬಳಿಕ ಮೂರ್ನಾಲ್ಕು ನಾಯಿಗಳು ಒಟ್ಟಾಗಿದ್ದು ಮಗುವನ್ನು ಎಳೆದಾಡಿದ್ದು ಕಚ್ಚಿ ಕಚ್ಚಿ ಸಾಯಿಸಿದೆ.
ಮಗುವಿನ ಚೀರಾಟ ಕೇಳಿದ ತಂದೆ ಗಂಗಾಧರ್ ಓಡಿ ಬಂದಿದ್ದು ಗಂಭೀರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮಗು ಸಾವು ಕಂಡಿತ್ತು. ಗಂಗಾಧರ್ ನಿಜಾಮ್ ನಗರದ ನಿವಾಸಿಯಾಗಿದ್ದು ಇತ್ತೀಚೆಗೆ ಹೈದರಾಬಾದ್ ನಗರಕ್ಕೆ ಬಂದು ನೆಲೆಸಿದ್ದ. ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಮಗು ಸಾವನ್ನಪ್ಪಿದ ಘಟನೆಯ ದೃಶ್ಯ ಅಪಾರ್ಟ್ಮೆಂಟ್ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪುಟಾಣಿ ಮಗು ನಡೆದು ಬರುತ್ತಲೇ ನಾಯಿಗಳು ಮುತ್ತಿಕೊಂಡು ಮಾಂಸದ ಮುದ್ದೆಯ ರೀತಿ ಎಳೆದಾಡಿದ ಭೀಕರ ದೃಶ್ಯ ಸೆರೆಯಾಗಿದ್ದು ಮನಸ್ಸು ಕಲಕುವಂತಿದೆ. ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶವೂ ವ್ಯಕ್ತವಾಗಿದೆ.

ಬೀದಿ ನಾಯಿಗಳಿಂದ ಮಕ್ಕಳ ಸಾವಾಗುತ್ತಿರುವುದು ಇದೇ ಮೊದಲೇನಲ್ಲ. ಇತ್ತೀಚೆಗೆ ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯಲ್ಲಿ ಏಳು ವರ್ಷದ ಬಾಲಕನೊಬ್ಬ ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟಿದ್ದ. ಬಿಲಾಸ್ಪುರದಲ್ಲಿರುವ ತನ್ನ ಮನೆಯ ಹಿಂಭಾಗದಲ್ಲಿ ಆಟವಾಡುತ್ತಿದ್ದಾಗಲೇ ಘಟನೆ ನಡೆದಿತ್ತು.
#hyderabad dog bite pic.twitter.com/mJkKOnaof3
— Sai vineeth(Journalist🇮🇳) (@SmRtysai) February 21, 2023
A horrific incident in which a pack of dogs attacked a four-year-old boy and killed him, came to light two days later on February 21. The boy, Pradeep, was attacked by four dogs on February 19,when he was walking on the road, closer to his father’s workplace in an automobile workshop, in Amberpet.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm