ಬ್ರೇಕಿಂಗ್ ನ್ಯೂಸ್
22-02-23 05:17 pm HK News Desk ದೇಶ - ವಿದೇಶ
ನವದೆಹಲಿ, ಫೆ.22 : ಕರ್ನಾಟಕದ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಅರ್ಜಿ ವಿಚಾರಣೆಗೆ ಎತ್ತಿಕೊಳ್ಳಲು ಮುಖ್ಯ ನ್ಯಾಯಾಧೀಶ ಡಿವೈ ಚಂದ್ರಚೂಡ್ ತೀರ್ಮಾನಿಸಿದ್ದಾರೆ.
ಶಾಲೆ, ಕಾಲೇಜುಗಳಲ್ಲಿ ತರಗತಿ ಒಳಗೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕರ್ನಾಟಕ ಸರ್ಕಾರದ ಆದೇಶದ ಕುರಿತು ಕಳೆದ ಅಕ್ಟೋಬರ್ ನಲ್ಲಿ ಸುಪ್ರೀಂ ಕೋರ್ಟ್ ಭಿನ್ನ ತೀರ್ಪು ನೀಡಿತ್ತು. ಅಲ್ಲದೆ, ಈ ಬಗ್ಗೆ ವಿಸ್ತೃತ ಪೀಠಕ್ಕೆ ವರ್ಗಾಯಿಸುವಂತೆ ದ್ವಿಸದಸ್ಯ ಪೀಠದ ನ್ಯಾಯಾಧೀಶರು ಕೇಳಿಕೊಂಡಿದ್ದರು. ಈ ನಡುವೆ, ಕರ್ನಾಟಕ ಸರ್ಕಾರದ ಹಿಜಾಬ್ ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟಿನಲ್ಲಿ ಉಳಿದುಕೊಂಡಿದ್ದು ಒಂದಷ್ಟು ವಿದ್ಯಾರ್ಥಿನಿಯರು ಬೇರೆ ಖಾಸಗಿ ಶಾಲೆಗೆ ಸೇರಿದ್ದರೆ ಬಡ ಕುಟುಂಬದ ವಿದ್ಯಾರ್ಥಿಗಳು ಸರಕಾರಿ ಶಾಲೆಯಲ್ಲೇ ಮುಂದುವರಿದಿದ್ದರು.

ಈ ಬಾರಿ ಮಾರ್ಚ್ 9 ರಿಂದ ಶಾಲೆಗಳಲ್ಲಿ ಪರೀಕ್ಷೆ ಆರಂಭಗೊಳ್ಳುತ್ತಿದ್ದು ವಿದ್ಯಾರ್ಥಿನಿಯರು ಪರೀಕ್ಷೆಗೆ ಹಿಜಾಬ್ ಹಾಕಿಯೇ ಹಾಜರಾಗಬೇಕಿದೆ. ಹಿಜಾಬ್ ಹಾಕಲಾಗದು ಎಂದು ಪರೀಕ್ಷೆ ಬರೆಯದೇ ಉಳಿದರೆ ಒಂದು ವರ್ಷ ವೇಸ್ಟ್ ಆಗುತ್ತದೆ. ಹೀಗಾಗಿ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ವಕೀಲರ ಮೂಲಕ ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ.
ಕಳೆದ ವರ್ಷ ಅಕ್ಟೋಬರ್ 13 ರಂದು ವಿಭಜಿತ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಹಿಜಾಬ್ ವಿವಾದಕ್ಕೆ ಶಾಶ್ವತ ಪರಿಹಾರ ನೀಡಿರಲಿಲ್ಲ. ಹಿಜಾಬ್ ವಿವಾದ ಕುರಿತು ತೀರ್ಪು ನೀಡಲು ತ್ರಿಸದಸ್ಯ ಪೀಠ ಸ್ಥಾಪಿಸುವುದಾಗಿ ಕಳೆದ ತಿಂಗಳು ಸುಪ್ರೀಂ ಕೋರ್ಟ್ ಹೇಳಿತ್ತು. ಇದರ ನಡುವೆ, ತುರ್ತಾಗಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿನಲ್ಲಿ ಕೇಳಿಕೊಂಡಿದ್ದಾರೆ. ಆಮೂಲಕ ಹಿಜಾಬ್ ವಿಚಾರವನ್ನು ಮತ್ತೆ ಈ ಬಾರಿಯೂ ಪರೀಕ್ಷೆ ಸಂದರ್ಭದಲ್ಲಿ ಜೀವಂತ ಆಗಿಸಲು ಪ್ರಯತ್ನ ಸಾಗಿದೆ.
The hijab issue that came to the forefront last year in Mangaluru is back in focus with Supreme Court CJI DY Chandrachud saying that he will consider the Muslim girls’ plea seeking interim relief to allow them to attend exams in the government colleges, reported legal news website Live Law.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm