ಬ್ರೇಕಿಂಗ್ ನ್ಯೂಸ್
05-08-20 05:37 am Headline Karnataka News Network ದೇಶ - ವಿದೇಶ
ಬೈರುತ್, ಆಗಸ್ಟ್ 5: ಲೆಬನಾನ್ ರಾಜಧಾನಿ ಬೈರುತ್ ನಲ್ಲಿ ನಿನ್ನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ 78 ಮಂದಿಯಷ್ಟು ಮೃತಪಟ್ಟಿದ್ದು, 4000ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಭೀಕರ ಸ್ಫೋಟದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗುತ್ತಿದೆ.
ಕಳೆದ ಮೂರು ದಶಕಗಳಿಂದ ಲೆಬನಾನ್ ಯುದ್ಧಭೂಮಿಯಂತಾಗಿದ್ದು ಸ್ಪೋಟದ ಸದ್ದು , ಗುಂಡಿನ ಮೊರೆತ ಕಳೆದ ಕೆಲ ದಿನಗಳಿಂದ ತಗ್ಗಿದ್ದವು. ಆದರೆ ಈ ನಡುವೆ ಭೀಕರ ಸ್ಪೋಟ ಸಂಭವಿಸಿದೆ. ಬೈರುತ್ ನಗರದ ಬಂದರು ಪ್ರದೇಶದಲ್ಲಿ ಈ ಸ್ಪೋಟ ಸಂಭವಿಸಿದೆ. ಸ್ಪೋಟದ ಸದ್ದು 200 ಕಿಮೀ ದೂರದ ವರೆಗೆ ಅಪ್ಪಳಿಸಿದ್ದು ಸ್ಫೋಟದಿಂದಾಗಿ ಲೆಬನಾನ್ ನಗರದಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ. ಸುಮಾರು 2 ಕಿ ಮೀ ನ ಸುತ್ತಳತೆಯಲ್ಲಿ ಕಟ್ಟಡಗಳಿಗೆ ಹಾನಿಯಾಗಿದೆ ಎನ್ನಲಾಗುತ್ತಿದೆ. ನ್ಯೂಕ್ಲಿಯರ್ ಬಾಂಬ್ ಸ್ಪೋಟದಂತೆ ಅಗಸದಲ್ಲಿ ಅಣಬೇ ಆಕೃತಿಯ ಹೊಗೆ ಸೃಷ್ಠಿಯಾಗಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಬಂದರು ಪ್ರದೇಶದ ರಾಸಾಯನಿಕ ಗೋದಾಮಿನಲ್ಲಿ ಸ್ಪೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಅಲ್ಲಿ 2750 ಟನ್ ಅಮೋನಿಯಂ ನೈಟ್ರೇಟ್ ಶೇಖರಣೆ ಮಾಡಲಾಗಿತ್ತು. ಅದಕ್ಕೆ ಬೆಂಕಿ ಹತ್ತಿಕೊಂಡು ಸ್ಫೋಟ ಆಗಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಲೆಬನಾನ್ ಸರಕಾರ ಇದನ್ನು ಖಚಿತ ಪಡಿಸಿಲ್ಲ. ಲೆಬನಾನ್ ಸರ್ಕಾರದ ಅಧಿಕಾರಿಗಳು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಸ್ಪೋಟದ ಬಗ್ಗೆ ಮಾಹಿತಿ ನೀಡಿದ್ದರೂ ಸ್ಪೋಟಕ್ಕೆ ಕಾರಣ ತಿಳಿಸಿಲ್ಲ.
ಸ್ಪೋಟದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯದಲ್ಲಿ ಸ್ಪೋಟ ಸಂಭವಿಸಿದ ತಕ್ಷಣ ಕಿತ್ತಳೆ ಬಣ್ಣದಲ್ಲಿ ಗೋಪುರ ಆಕಾರದಲ್ಲಿ ಹೊಗೆ ಆಕಾಶದ ಎತ್ತರಕ್ಕೆ ಹಾರಿದೆ. ಅಲ್ಲದೆ, ಶಬ್ಧದ ತೀವ್ರತೆ ದೊಡ್ಡ ತರಂಗಗಳನ್ನು ಸೃಷ್ಟಿಸಿದೆ. ಪರಿಣಾಮ ಬಂದರು ಪ್ರದೇಶದಲ್ಲಿದ್ದ ಗೋದಾಮುಗಳು ಕಿಟಕಿ ಗಾಜುಗಳು ಮತ್ತು ಬಾಗಿಲುಗಳು ಹಾನಿಗೊಳಗಾಗಿವೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
25-08-25 03:02 pm
Bangalore Correspondent
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 12:24 pm
Mangalore Correspondent
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm