ಬ್ರೇಕಿಂಗ್ ನ್ಯೂಸ್
26-02-23 09:51 pm HK News Desk ದೇಶ - ವಿದೇಶ
ನವದೆಹಲಿ, ಫೆ.26: ದೆಹಲಿ ಆಮ್ ಆದ್ಮಿ ಪಕ್ಷದ ಸರಕಾರದಲ್ಲಿ ಉಪ ಮುಖ್ಯಮಂತ್ರಿ ಆಗಿರುವ ಮನೀಶ್ ಸಿಸೋಡಿಯಾ ಅವರನ್ನು ಕೊನೆಗೂ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಭಾನುವಾರ ಎಂಟು ಗಂಟೆಗಳ ನಿರಂತರ ವಿಚಾರಣೆಯ ಬಳಿಕ ಸಿಸೋಡಿಯಾ ಬಂಧಿಸಿದ್ದಾಗಿ ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಒಂದು ವರ್ಷದಿಂದ ದೆಹಲಿಯ ನೂತನ ಲಿಕ್ಕರ್ ಪಾಲಿಸಿ ಮತ್ತು ಅದರಲ್ಲಿ ಆಗಿರುವ ಅವ್ಯವಹಾರದಲ್ಲಿ ಸಿಸೋಡಿಯಾ ಅವರನ್ನು ಆರೋಪಿಯಾಗಿಸಿ ಕೇಂದ್ರೀಯ ತನಿಖಾ ತಂಡಗಳು ತನಿಖೆ ನಡೆಸಿದ್ದವು. ಸಿಸೋಡಿಯಾ ಬಂಧನ ಆಗುತ್ತೆ ಎಂದು ಬಹಳಷ್ಟು ಬಾರಿ ಹೇಳಲಾಗಿದ್ದರೂ, ಬಂಧನ ಮಾತ್ರ ಆಗಿರಲಿಲ್ಲ. ಸಾಕ್ಷ್ಯಾಧಾರಗಳಿದ್ದರೆ ಬಂಧಿಸಿ ಎಂದು ಸಿಸೋಡಿಯಾ ಅವರೇ ನೇರವಾಗಿ ಸವಾಲು ಹಾಕಿದ್ದರು. ಸಿಬಿಐ ಕಳೆದ ಅಕ್ಟೋಬರ್ ತಿಂಗಳಲ್ಲಿ ದಾಖಲಿಸಿದ್ದ ಎಫ್ಐಆರ್ ನಲ್ಲಿ ಸಿಸೋಡಿಯಾ ಹೆಸರನ್ನು ಆರೋಪಿಯಾಗಿ ಉಲ್ಲೇಖ ಮಾಡಿತ್ತು. ಆದರೆ, ನವೆಂಬರ್ ತಿಂಗಳಲ್ಲಿ ನ್ಯಾಯಾಲಯಕ್ಕೆ ನೀಡಿದ್ದ ಚಾರ್ಜ್ ಶೀಟ್ ನಲ್ಲಿ ಸಿಸೋಡಿಯಾ ಹೆಸರನ್ನು ಉಲ್ಲೇಖ ಮಾಡಿರಲಿಲ್ಲ.
ಸಿಸೋಡಿಯಾ ಬಂಧನ ವಿಚಾರ ತಿಳಿಯುತ್ತಿದ್ದಂತೆ ಆಪ್ ಕಾರ್ಯಕರ್ತರು ಸಿಬಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ದೆಹಲಿ ಸಿಎಂ ಕೇಜ್ರಿವಾಲ್ ಪ್ರತಿಕ್ರಿಯಿಸಿ, ನಿರಪರಾಧಿಯನ್ನು ಬಂಧಿಸಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಅನ್ನುವುದು ಗೊತ್ತಿದೆ. ಎಲ್ಲವನ್ನೂ ಜನರು ನೋಡುತ್ತಿದ್ದಾರೆ. ಜನರು ಅರ್ಥ ಮಾಡಿಕೊಂಡಿದ್ದಾರೆ. ನಮ್ಮ ಹೋರಾಟಕ್ಕೆ ಮತ್ತಷ್ಟು ಬೂಸ್ಟ್ ಸಿಕ್ಕಿದೆ ಎಂದಿದ್ದಾರೆ.
![]()
ಸಿಬಿಐ ನನ್ನನ್ನು ಅರೆಸ್ಟ್ ಮಾಡಲಿ, ಗಲ್ಲಿಗೆ ಹಾಕಲಿ, ನಾವು ಹೆದರುವುದಿಲ್ಲ. ಪ್ರಧಾನಿ ಮೋದಿ, ಕೇಜ್ರಿವಾಲ್ ಬಗ್ಗೆ ಹೆದರಿ ನಕಲಿ ಪ್ರಕರಣದಲ್ಲಿ ನನ್ನನ್ನು ಆರೋಪಿಯಾಗಿಸಿದ್ದಾರೆ. ನನ್ನನ್ನು 7-8 ತಿಂಗಳ ಕಾಲ ಜೈಲಿನಲ್ಲಿಟ್ಟರೂ ಕಾರ್ಯಕರ್ತರು ಹೆದರುವ ಅಗತ್ಯವಿಲ್ಲ ಎಂದು ಸಿಸೋಡಿಯಾ ಹೇಳಿದ್ದಾರೆ. ಕಳೆದೊಂದು ವರ್ಷದಲ್ಲಿ ದೆಹಲಿ ಆಪ್ ಸರ್ಕಾರದ ಎರಡನೇ ಸಚಿವ ಅರಸ್ಟ್ ಆಗುತ್ತಿದ್ದಾರೆ. 2022ರ ಮೇ ತಿಂಗಳಲ್ಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಬಂಧನಕ್ಕೀಡಾಗಿದ್ದರು. ಜೈನ್, ಮನೀಶ್ ಸಿಸೋಡಿಯಾ ಅವರ ಹತ್ತಿರದ ಗೆಳೆಯರಾಗಿದ್ದರು.
The CBI on Sunday arrested Delhi deputy chief minister Manish Sisodia in connection with the alleged liquor scam case after interrogating him for 8.5 hours.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm