ಬ್ರೇಕಿಂಗ್ ನ್ಯೂಸ್
28-02-23 03:46 pm HK News Desk ದೇಶ - ವಿದೇಶ
ಮುಂಬೈ, ಫೆ.28 : ಪಾಕಿಸ್ತಾನ, ಚೀನಾ ಮತ್ತು ಹಾಂಕಾಂಗ್ನಲ್ಲಿ ತರಬೇತಿ ಪಡೆದ `ಡೇಂಜರಸ್’ ವ್ಯಕ್ತಿಯೊಬ್ಬ ಮುಂಬೈ ಪ್ರವೇಶಿಸಿದ್ದಾನೆ ಎನ್ನಲಾಗುತ್ತಿದೆ. ಈ ಬಗ್ಗೆ ನಿಗಾ ವಹಿಸುವಂತೆ ರಾಷ್ಟ್ರೀಯ ತನಿಖಾ ದಳ ಮುಂಬೈ ಪೊಲೀಸರಿಗೆ ಇ-ಮೇಲ್ ಸಂದೇಶ ರವಾನಿಸಿದೆ.
ಡೇಂಜರಸ್ ವ್ಯಕ್ತಿಯನ್ನು ಮಧ್ಯಪ್ರದೇಶದ ಇಂದೋರ್ ಮೂಲದ ಸರ್ಫರಾಜ್ ಮೆಮನ್ ಎಂದು ಎನ್ಐಎ ಗುರುತಿಸಿದೆ. ಈತ ಈಗಾಗಲೇ ಮುಂಬೈ ಪ್ರವೇಶ ಮಾಡಿದ್ದಾನೆ. ಉಗ್ರ ಕೃತ್ಯಗಳನ್ನು ಎಸಗುವ ಸಾಧ್ಯತೆಯಿದೆ ಎಂದು ಇ-ಮೇಲ್ನಲ್ಲಿ ಎಚ್ಚರಿಕೆ ನೀಡಿದೆ. ಜೊತೆಗೆ ಆತನ ಆಧಾರ್ ಮಾಹಿತಿ, ವಾಹನ ಚಾಲನಾ ಪರವಾನಗಿ, ಪಾಸ್ಪೋರ್ಟ್ ಮತ್ತಿತರ ಮಾಹಿತಿಗಳನ್ನ ಎನ್ಐಎ ಮುಂಬೈ ಪೊಲೀಸರಿಗೆ ರವಾನಿಸಿದೆ.
ಮುಂಬೈ ನಗರದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದು, ಮಧ್ಯಪ್ರದೇಶದ ಇಂದೋರ್ ಪೊಲೀಸರಿಗೂ ಈ ಬಗೆಗಿನ ಮಾಹಿತಿ ರವಾನಿಸಿದೆ. ಕಳೆದ ಶನಿವಾರವಷ್ಟೇ ಮಹಾರಾಷ್ಟ್ರ ಮೂಲದ ಖಾಲಿದ್ ಮುಬಾರಕ್ (21) ಮತ್ತು ತಮಿಳುನಾಡು ಮೂಲದ ಅಬ್ದುಲ್ಲಾ (26) ಎಂಬಿಬ್ಬರು ಶಸ್ತ್ರಾಸ್ತ್ರ ತರಬೇತಿ ಪಡೆಯಲು ಪಾಕಿಸ್ತಾನಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ದೆಹಲಿ ಪೊಲೀಸರ ವಿಶೇಷ ಪಡೆ ಬಂಧಿಸಿತ್ತು. ಇದರ ಬೆನ್ನಲ್ಲೇ ಡೇಂಜರಸ್ ವ್ಯಕ್ತಿಯ ಸುಳಿವು ಆತಂಕ ಮೂಡಿಸಿದೆ.
ಶನಿವಾರ ದೆಹಲಿಯಲ್ಲಿ ಸಿಕ್ಕಿಬಿದ್ದ ಇಬ್ಬರೂ ವ್ಯಕ್ತಿಗಳು ಅಕ್ರಮವಾಗಿ ಗಡಿದಾಟುವ ಮೂಲಕ ಪಾಕಿಸ್ತಾನಕ್ಕೆ ತೆರಳಿ ಅಲ್ಲಿ ಶಸ್ತ್ರಾಸ್ತ್ರ ಬಳಕೆ ತರಬೇತಿ ಪಡೆಯಲು ನಿರ್ಧರಿಸಿದ್ದರು. ಫೆಬ್ರವರಿ 14ರಂದೇ ಪಾಕ್ ಮೂಲದ ಹ್ಯಾಂಡ್ಲರ್ ಸಹಾಯದಿಂದ ಭಯೋತ್ಪಾದನಾ ಘಟಕದ ಬಗ್ಗೆ ನಿಷ್ಠೆ ಹೊಂದಿರುವ ಕೆಲ ಉಗ್ರಗಾಮಿಗಳು ಪಾಕ್ಗೆ ತೆರಳಲು ಸಂಚು ರೂಪಿಸಿದ್ದ ವೇಳೆ ಇಬ್ಬರೂ ಸಿಕ್ಕಿಬಿದ್ದಿದ್ದರು. ಈ ವೇಳೆ ಅವರಿಂದ 2 ಪಿಸ್ತೂಲ್, 10 ಸಜೀವ ಗುಂಡು, ಚಾಕು, ವೈರ್ ಕಟರ್ ವಶಪಡಿಸಿಕೊಳ್ಳಲಾಗಿತ್ತು.
The National Investigation Agency (NIA) has informed Mumbai Police to be alert via email, saying that a dangerous man has entered the financial capital of the country. The investigating agency has been on alert since it received this input.The NIA mentions the word "dangerous" in its email asking Mumbai Police to be alert. In its email, the NIA mentioned the name of the suspect as Sarfaraz Memon and said that he has reached Mumbai, sources told
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm