ಬ್ರೇಕಿಂಗ್ ನ್ಯೂಸ್
02-03-23 12:58 pm HK News Desk ದೇಶ - ವಿದೇಶ
ತೆಲಂಗಾಣ, ಮಾ.1 : ಸುಖನಿದ್ರೆಯಲ್ಲಿದ್ದ ಕಾರ್ಮಿಕರ ಮೇಲೆ ಜವರಾಯ ಲಾರಿಯ ರೂಪದಲ್ಲಿ ಬಂದೆರಗಿದ್ದಾನೆ. ಇಂದು ಮುಂಜಾವು 4 ಗಂಟೆಗೆ ನಡೆದ ಭೀಕರ ಅಪಘಾತದಲ್ಲಿ ಕರ್ನಾಟಕ ನಿವಾಸಿಗಳಾದ ಒಂದೇ ಕುಟುಂಬದ ಮೂವರು ದಾರುಣ ಸಾವನ್ನಪ್ಪಿದ್ದಾರೆ.
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಹೊರವರ್ತುಲ ರಸ್ತೆಯಲ್ಲಿ ದುರಂತ ಘಟಿಸಿದೆ.
ಸಂಗಾರೆಡ್ಡಿ ಜಿಲ್ಲೆಯ ಹೊರವರ್ತುಲ ರಸ್ತೆಯ ಕೊಲ್ಲೂರಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಗುಡಿಸಲಿನ ಮೇಲೆ ಲಾರಿ ಹರಿಯಿತು. ಇದರಿಂದ ನಿದ್ರೆಯಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದರು.
ಯಮನಂತೆ ಅಪ್ಪಳಿಸಿದ ಲಾರಿ ಪಟಾಣ್ ಚೆರು ಕಡೆಯಿಂದ ಗಚ್ಚಿಬೌಳಿ ಮಾರ್ಗವಾಗಿ ಹರಿಯಾಣದಿಂದ ಚಿತ್ತೂರಿಗೆ ತೆರಳುತ್ತಿತ್ತು.
ಹೊರ ವರ್ತುಲ ರಸ್ತೆಯುದ್ದಕ್ಕೂ ಇರುವ ಗಿಡಗಳಿಗೆ ನೀರುಣಿಸಲು ಕರ್ನಾಟಕದ ಮೂಲದ ಕೆಲವರು ಎಚ್ಎಂಡಿಎ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕೊಲ್ಲೂರು ಜಂಕ್ಷನ್ ಬಳಿ ರಿಂಗ್ ರಸ್ತೆ ಮತ್ತು ಸವೀಸ್ ರಸ್ತೆ ಪಕ್ಕ ತಾತ್ಕಾಲಿಕ ಗುಡಿಸಲುಗಳಲ್ಲಿ ಇವರೆಲ್ಲರೂ ವಾಸಿಸುತ್ತಿದ್ದಾರೆ. ಲಾರಿ ರಿಂಗ್ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿನ ಮೇಲೆ ಹರಿದಿದೆ. ಅಕ್ಕಪಕ್ಕ ಹತ್ತು ಗುಡಿಸಲುಗಳಿದ್ದು, ಅವುಗಳಿಗೂ ಡಿಕ್ಕಿ ಹೊಡೆದಿದ್ದರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುತ್ತಿತ್ತು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬದುಕು ಅರಸಿ ಬಂದಿದ್ದ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದರಿಂದ ಆಸ್ಪತ್ರೆಯಲ್ಲಿ ಸಂಬಂಧಿಕರು, ಕುಟುಂಬಸ್ಥರ ರೋದನ ಮುಗಿಲುಮುಟ್ಟಿತ್ತು.
A ghastly road accident took place in the Sangareddy district of Telangana where three people lost their lives in this terrible accident at Patancheru in Hyderabad after a lorry, which was going from Patancheru towards Shamshabad, lost control near Kollur Outer Ring Road of Sangareddy District fell from the ORR on the huts below. As a result, three people living in huts died on the spot. The tragic incident took place on Thursday morning near Exit Point-2 of the Outer Ring Road.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 12:26 pm
Mangalore Correspondent
Thokottu, Mangalore: ತೊಕ್ಕೊಟ್ಟು ನಾಗರಿಕರ ಎಪ್ಪತ...
18-07-25 10:11 pm
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm