ಬ್ರೇಕಿಂಗ್ ನ್ಯೂಸ್
02-03-23 12:58 pm HK News Desk ದೇಶ - ವಿದೇಶ
ತೆಲಂಗಾಣ, ಮಾ.1 : ಸುಖನಿದ್ರೆಯಲ್ಲಿದ್ದ ಕಾರ್ಮಿಕರ ಮೇಲೆ ಜವರಾಯ ಲಾರಿಯ ರೂಪದಲ್ಲಿ ಬಂದೆರಗಿದ್ದಾನೆ. ಇಂದು ಮುಂಜಾವು 4 ಗಂಟೆಗೆ ನಡೆದ ಭೀಕರ ಅಪಘಾತದಲ್ಲಿ ಕರ್ನಾಟಕ ನಿವಾಸಿಗಳಾದ ಒಂದೇ ಕುಟುಂಬದ ಮೂವರು ದಾರುಣ ಸಾವನ್ನಪ್ಪಿದ್ದಾರೆ.
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಹೊರವರ್ತುಲ ರಸ್ತೆಯಲ್ಲಿ ದುರಂತ ಘಟಿಸಿದೆ.
ಸಂಗಾರೆಡ್ಡಿ ಜಿಲ್ಲೆಯ ಹೊರವರ್ತುಲ ರಸ್ತೆಯ ಕೊಲ್ಲೂರಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಗುಡಿಸಲಿನ ಮೇಲೆ ಲಾರಿ ಹರಿಯಿತು. ಇದರಿಂದ ನಿದ್ರೆಯಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದರು.
ಯಮನಂತೆ ಅಪ್ಪಳಿಸಿದ ಲಾರಿ ಪಟಾಣ್ ಚೆರು ಕಡೆಯಿಂದ ಗಚ್ಚಿಬೌಳಿ ಮಾರ್ಗವಾಗಿ ಹರಿಯಾಣದಿಂದ ಚಿತ್ತೂರಿಗೆ ತೆರಳುತ್ತಿತ್ತು.
ಹೊರ ವರ್ತುಲ ರಸ್ತೆಯುದ್ದಕ್ಕೂ ಇರುವ ಗಿಡಗಳಿಗೆ ನೀರುಣಿಸಲು ಕರ್ನಾಟಕದ ಮೂಲದ ಕೆಲವರು ಎಚ್ಎಂಡಿಎ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕೊಲ್ಲೂರು ಜಂಕ್ಷನ್ ಬಳಿ ರಿಂಗ್ ರಸ್ತೆ ಮತ್ತು ಸವೀಸ್ ರಸ್ತೆ ಪಕ್ಕ ತಾತ್ಕಾಲಿಕ ಗುಡಿಸಲುಗಳಲ್ಲಿ ಇವರೆಲ್ಲರೂ ವಾಸಿಸುತ್ತಿದ್ದಾರೆ. ಲಾರಿ ರಿಂಗ್ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿನ ಮೇಲೆ ಹರಿದಿದೆ. ಅಕ್ಕಪಕ್ಕ ಹತ್ತು ಗುಡಿಸಲುಗಳಿದ್ದು, ಅವುಗಳಿಗೂ ಡಿಕ್ಕಿ ಹೊಡೆದಿದ್ದರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುತ್ತಿತ್ತು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬದುಕು ಅರಸಿ ಬಂದಿದ್ದ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದರಿಂದ ಆಸ್ಪತ್ರೆಯಲ್ಲಿ ಸಂಬಂಧಿಕರು, ಕುಟುಂಬಸ್ಥರ ರೋದನ ಮುಗಿಲುಮುಟ್ಟಿತ್ತು.
A ghastly road accident took place in the Sangareddy district of Telangana where three people lost their lives in this terrible accident at Patancheru in Hyderabad after a lorry, which was going from Patancheru towards Shamshabad, lost control near Kollur Outer Ring Road of Sangareddy District fell from the ORR on the huts below. As a result, three people living in huts died on the spot. The tragic incident took place on Thursday morning near Exit Point-2 of the Outer Ring Road.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm