ಬ್ರೇಕಿಂಗ್ ನ್ಯೂಸ್
24-03-23 03:18 pm HK News Desk ದೇಶ - ವಿದೇಶ
ನವದೆಹಲಿ, ಮಾ.24 : ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಆದೇಶ ಹೊರಡಿಸಿದೆ.
ಗುಜರಾತಿನ ಸೂರತ್ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರಾಹುಲ್ ಗಾಂಧಿಗೆ ಮಾನನಷ್ಟ ಪ್ರಕರಣದಲ್ಲಿ ಎರಡು ವರ್ಷಗಳ ಶಿಕ್ಷೆ ಜಾರಿಗೊಳಿಸಿತ್ತು. ಮಾ.23ರಂದು ತೀರ್ಪು ನೀಡಿದ್ದು ಜನಪ್ರತಿನಿಧಿ ಕಾಯ್ದೆ ಪ್ರಕಾರ ಯಾವುದೇ ಜನಪ್ರತಿನಿಧಿ ಎರಡು ವರ್ಷ ಅಥವಾ ಅದಕ್ಕೂ ಮೇಲ್ಪಟ್ಟು ಶಿಕ್ಷೆಗೊಳಗಾದರೆ ಆತ ಅನರ್ಹನಾಗುತ್ತಾನೆ. ಕಾಯ್ದೆಯಡಿ ಕೇರಳದ ವಯನಾಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸಂಸದ ರಾಹುಲ್ ಗಾಂಧಿ ಅವರನ್ನು ತಕ್ಷಣದಿಂದಲೇ ಅನರ್ಹಗೊಳಿಸಿ ಲೋಕಸಭೆ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.
2019ರ ಲೋಕಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ದೇಶ ಬಿಟ್ಟು ಹೋಗಿರುವ ನೀರವ್ ಮೋದಿ, ಲಲಿತ್ ಮೋದಿ ಅವರನ್ನು ಉದ್ದೇಶಿಸಿ, ಎಲ್ಲ ಕಳ್ಳರ ಸರ್ ನೇಮ್ ಮೋದಿ ಎಂದೇ ಆಗಿರುವುದೇಕೆ ಎಂದು ಪ್ರಶ್ನಿಸಿದ್ದರು. ಪರೋಕ್ಷವಾಗಿ ಪ್ರಧಾನಿ ಮೋದಿಯನ್ನು ಅಣಕಿಸಲು ರಾಹುಲ್ ಗಾಂಧಿ ಈ ಪದ ಬಳಸಿದ್ದರು. ಈ ಬಗ್ಗೆ ಗುಜರಾತಿನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ, ರಾಹುಲ್ ಗಾಂಧಿ ವಿರುದ್ಧ ಮೋದಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆಂದು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಸೂರತ್ ಕೋರ್ಟಿನಲ್ಲಿ ವಿಚಾರಣೆ ನಡೆದು ನಿನ್ನೆಯಷ್ಟೇ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದರು.
In a huge setback for the Congress party, its former president Rahul Gandhi has been disqualified from the Lok Sabha because of his conviction in a 2019 criminal defamation case. The Lok Sabha Secretariat also declared his constituency vacant. The Election Commission can now announce a special election for the seat.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am