ಭೂಮಿ ಪೂಜೆ: ’ಜೈಶ್ರೀರಾಮ್‌, ಜೈ ಭಜರಂಗಬಲಿ’ ಎಂದ ಕೇಜ್ರಿವಾಲ್‌

05-08-20 07:43 am       Headline Karnataka News Network   ದೇಶ - ವಿದೇಶ

 ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ದೇಶದ ಜನತೆಗೆ ಶುಭ ಹಾರೈಸಿದ್ದಾರೆ.

ನವದೆಹಲಿ, ಆಗಸ್ಟ್ 05: ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ದೇಶದ ಜನತೆಗೆ ಶುಭ ಹಾರೈಸಿದ್ದಾರೆ.

‘ದೇಶದ ಎಲ್ಲಾ ಪ್ರಜೆಗಳಿಗೂ ಅಭಿನಂದನೆಗಳು. ಶ್ರೀರಾಮನ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ. ಆ ದೇವರ ಕೃಪೆಯಿಂದ ದೇಶದಲ್ಲಿನ ಬಡತನ ಹಾಗೂ ಹಸಿವು ದೂರವಾಗಲಿ. ಭಾರತವು ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ರೂಪುಗೊಳ್ಳಲಿ. ಭವಿಷ್ಯದಲ್ಲಿ ಭಾರತವು ಇಡೀ ಜಗತ್ತಿಗೆ ದಾರಿ ದೀಪವಾಗಲಿ. ಜೈ ಶ್ರೀರಾಮ್‌, ಜೈ ಬಜರಂಗ ಬಲಿ’ ಎಂದು ಅವರು ಬುಧವಾರ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.