ಬ್ರೇಕಿಂಗ್ ನ್ಯೂಸ್
29-03-23 04:06 pm HK News Desk ದೇಶ - ವಿದೇಶ
ಮುಂಬೈ, ಮಾ.29: ಭೂಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂಬಾತನನ್ನು ನಾಗಪುರ ಪೊಲೀಸರು ಬಂಧಿಸಿದ್ದು, ವಿಮಾನದ ಮೂಲಕ ನಾಗಪುರಕ್ಕೆ ಕೊಂಡೊಯ್ದಿದ್ದಾರೆ.
ಮಾ.21ರಂದು ನಾಗಪುರದ ನಿತಿನ್ ಗಡ್ಕರಿಯವರ ಕಚೇರಿಗೆ ಫೋನಾಯಿಸಿ ಹತ್ತು ಕೋಟಿ ರೂಪಾಯಿ ಬೇಡಿಕೆ ಇರಿಸಿದ್ದ. ಫೋನ್ ಮಾಡಿದ್ದ ವ್ಯಕ್ತಿ ತನ್ನನ್ನು ಜಯೇಶ್ ಪೂಜಾರಿ ಎಂದು ಹೇಳಿಕೊಂಡಿದ್ದ. ಈ ಬಗ್ಗೆ ಕಚೇರಿ ಉದ್ಯೋಗಿಯ ದೂರಿನಂತೆ ಎಫ್ಐಆರ್ ದಾಖಲಾಗಿತ್ತು.
ಕಳೆದ ಜನವರಿ 14ರಂದು ಇದೇ ರೀತಿ ಜಯೇಶ್ ಪೂಜಾರಿ ಹೆಸರಲ್ಲಿ ನೂರು ಕೋಟಿ ಬೇಡಿಕೆ ಇರಿಸಿ ನಾಗಪುರದ ಸಚಿವರ ಕಚೇರಿಗೆ ಫೋನ್ ಮಾಡಿ ಬೆದರಿಕೆ ಒಡ್ಡಲಾಗಿತ್ತು. ಆ ಸಂದರ್ಭದಲ್ಲಿ ಬೆಳಗಾವಿ ಜೈಲಿನಿಂದಲೇ ಫೋನ್ ಬಂದಿರುವುದನ್ನು ಪತ್ತೆ ಮಾಡಿ ಪೊಲೀಸರು ಜಯೇಶ್ ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ತಾನು ಕರೆ ಮಾಡಿದ್ದಲ್ಲ ಎಂದು ಹೇಳಿಕೆ ನೀಡಿದ್ದರಿಂದ ಪೊಲೀಸರು ಬಿಟ್ಟು ಕಳುಹಿಸಿದ್ದರು.
ಆದರೆ ಇದೀಗ ಮತ್ತೆ ಅದೇ ರೀತಿಯ ಫೋನ್ ಕರೆ ಬಂದಿದ್ದು, ಹತ್ತು ಕೋಟಿ ನೀಡದಿದ್ದರೆ ಸಚಿವರ ಜೀವಕ್ಕೆ ಅಪಾಯ ಇದೆಯೆಂದು ಹೇಳಿದ್ದ. ನಾಗಪುರ ಪೊಲೀಸರು ಅಲರ್ಟ್ ಆಗಿದ್ದು, ಈ ಬಾರಿ ನೇರವಾಗಿ ಆರೋಪಿ ಜಯೇಶ್ ಪೂಜಾರಿಯನ್ನ ಹೊತ್ತೊಯ್ದಿದ್ದಾರೆ. ಜಯೇಶ್ ಪೂಜಾರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದವನಾಗಿದ್ದು ಪ್ರಕರಣ ಒಂದರಲ್ಲಿ ಶಿಕ್ಷೆ ವಿಧಿಸಲ್ಪಟ್ಟು ಜೈಲು ಪಾಲಾಗಿದ್ದ.
Threat calls to Nitin Gadkari on Jayesh Pujari taken into custody from the Hindalga jail by nagpur police. Nagpur Police on Tuesday took into custody a murder case convict from a jail in Belagavi in Karnataka in connection with the threat calls made to the office of Union minister Nitin Gadkari on two occasions, an official said.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm