ಬ್ರೇಕಿಂಗ್ ನ್ಯೂಸ್
29-03-23 04:06 pm HK News Desk ದೇಶ - ವಿದೇಶ
ಮುಂಬೈ, ಮಾ.29: ಭೂಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂಬಾತನನ್ನು ನಾಗಪುರ ಪೊಲೀಸರು ಬಂಧಿಸಿದ್ದು, ವಿಮಾನದ ಮೂಲಕ ನಾಗಪುರಕ್ಕೆ ಕೊಂಡೊಯ್ದಿದ್ದಾರೆ.
ಮಾ.21ರಂದು ನಾಗಪುರದ ನಿತಿನ್ ಗಡ್ಕರಿಯವರ ಕಚೇರಿಗೆ ಫೋನಾಯಿಸಿ ಹತ್ತು ಕೋಟಿ ರೂಪಾಯಿ ಬೇಡಿಕೆ ಇರಿಸಿದ್ದ. ಫೋನ್ ಮಾಡಿದ್ದ ವ್ಯಕ್ತಿ ತನ್ನನ್ನು ಜಯೇಶ್ ಪೂಜಾರಿ ಎಂದು ಹೇಳಿಕೊಂಡಿದ್ದ. ಈ ಬಗ್ಗೆ ಕಚೇರಿ ಉದ್ಯೋಗಿಯ ದೂರಿನಂತೆ ಎಫ್ಐಆರ್ ದಾಖಲಾಗಿತ್ತು.
ಕಳೆದ ಜನವರಿ 14ರಂದು ಇದೇ ರೀತಿ ಜಯೇಶ್ ಪೂಜಾರಿ ಹೆಸರಲ್ಲಿ ನೂರು ಕೋಟಿ ಬೇಡಿಕೆ ಇರಿಸಿ ನಾಗಪುರದ ಸಚಿವರ ಕಚೇರಿಗೆ ಫೋನ್ ಮಾಡಿ ಬೆದರಿಕೆ ಒಡ್ಡಲಾಗಿತ್ತು. ಆ ಸಂದರ್ಭದಲ್ಲಿ ಬೆಳಗಾವಿ ಜೈಲಿನಿಂದಲೇ ಫೋನ್ ಬಂದಿರುವುದನ್ನು ಪತ್ತೆ ಮಾಡಿ ಪೊಲೀಸರು ಜಯೇಶ್ ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ತಾನು ಕರೆ ಮಾಡಿದ್ದಲ್ಲ ಎಂದು ಹೇಳಿಕೆ ನೀಡಿದ್ದರಿಂದ ಪೊಲೀಸರು ಬಿಟ್ಟು ಕಳುಹಿಸಿದ್ದರು.
ಆದರೆ ಇದೀಗ ಮತ್ತೆ ಅದೇ ರೀತಿಯ ಫೋನ್ ಕರೆ ಬಂದಿದ್ದು, ಹತ್ತು ಕೋಟಿ ನೀಡದಿದ್ದರೆ ಸಚಿವರ ಜೀವಕ್ಕೆ ಅಪಾಯ ಇದೆಯೆಂದು ಹೇಳಿದ್ದ. ನಾಗಪುರ ಪೊಲೀಸರು ಅಲರ್ಟ್ ಆಗಿದ್ದು, ಈ ಬಾರಿ ನೇರವಾಗಿ ಆರೋಪಿ ಜಯೇಶ್ ಪೂಜಾರಿಯನ್ನ ಹೊತ್ತೊಯ್ದಿದ್ದಾರೆ. ಜಯೇಶ್ ಪೂಜಾರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದವನಾಗಿದ್ದು ಪ್ರಕರಣ ಒಂದರಲ್ಲಿ ಶಿಕ್ಷೆ ವಿಧಿಸಲ್ಪಟ್ಟು ಜೈಲು ಪಾಲಾಗಿದ್ದ.
Threat calls to Nitin Gadkari on Jayesh Pujari taken into custody from the Hindalga jail by nagpur police. Nagpur Police on Tuesday took into custody a murder case convict from a jail in Belagavi in Karnataka in connection with the threat calls made to the office of Union minister Nitin Gadkari on two occasions, an official said.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm