ಬ್ರೇಕಿಂಗ್ ನ್ಯೂಸ್
29-03-23 04:06 pm HK News Desk ದೇಶ - ವಿದೇಶ
ಮುಂಬೈ, ಮಾ.29: ಭೂಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂಬಾತನನ್ನು ನಾಗಪುರ ಪೊಲೀಸರು ಬಂಧಿಸಿದ್ದು, ವಿಮಾನದ ಮೂಲಕ ನಾಗಪುರಕ್ಕೆ ಕೊಂಡೊಯ್ದಿದ್ದಾರೆ.
ಮಾ.21ರಂದು ನಾಗಪುರದ ನಿತಿನ್ ಗಡ್ಕರಿಯವರ ಕಚೇರಿಗೆ ಫೋನಾಯಿಸಿ ಹತ್ತು ಕೋಟಿ ರೂಪಾಯಿ ಬೇಡಿಕೆ ಇರಿಸಿದ್ದ. ಫೋನ್ ಮಾಡಿದ್ದ ವ್ಯಕ್ತಿ ತನ್ನನ್ನು ಜಯೇಶ್ ಪೂಜಾರಿ ಎಂದು ಹೇಳಿಕೊಂಡಿದ್ದ. ಈ ಬಗ್ಗೆ ಕಚೇರಿ ಉದ್ಯೋಗಿಯ ದೂರಿನಂತೆ ಎಫ್ಐಆರ್ ದಾಖಲಾಗಿತ್ತು.
ಕಳೆದ ಜನವರಿ 14ರಂದು ಇದೇ ರೀತಿ ಜಯೇಶ್ ಪೂಜಾರಿ ಹೆಸರಲ್ಲಿ ನೂರು ಕೋಟಿ ಬೇಡಿಕೆ ಇರಿಸಿ ನಾಗಪುರದ ಸಚಿವರ ಕಚೇರಿಗೆ ಫೋನ್ ಮಾಡಿ ಬೆದರಿಕೆ ಒಡ್ಡಲಾಗಿತ್ತು. ಆ ಸಂದರ್ಭದಲ್ಲಿ ಬೆಳಗಾವಿ ಜೈಲಿನಿಂದಲೇ ಫೋನ್ ಬಂದಿರುವುದನ್ನು ಪತ್ತೆ ಮಾಡಿ ಪೊಲೀಸರು ಜಯೇಶ್ ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ತಾನು ಕರೆ ಮಾಡಿದ್ದಲ್ಲ ಎಂದು ಹೇಳಿಕೆ ನೀಡಿದ್ದರಿಂದ ಪೊಲೀಸರು ಬಿಟ್ಟು ಕಳುಹಿಸಿದ್ದರು.
ಆದರೆ ಇದೀಗ ಮತ್ತೆ ಅದೇ ರೀತಿಯ ಫೋನ್ ಕರೆ ಬಂದಿದ್ದು, ಹತ್ತು ಕೋಟಿ ನೀಡದಿದ್ದರೆ ಸಚಿವರ ಜೀವಕ್ಕೆ ಅಪಾಯ ಇದೆಯೆಂದು ಹೇಳಿದ್ದ. ನಾಗಪುರ ಪೊಲೀಸರು ಅಲರ್ಟ್ ಆಗಿದ್ದು, ಈ ಬಾರಿ ನೇರವಾಗಿ ಆರೋಪಿ ಜಯೇಶ್ ಪೂಜಾರಿಯನ್ನ ಹೊತ್ತೊಯ್ದಿದ್ದಾರೆ. ಜಯೇಶ್ ಪೂಜಾರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದವನಾಗಿದ್ದು ಪ್ರಕರಣ ಒಂದರಲ್ಲಿ ಶಿಕ್ಷೆ ವಿಧಿಸಲ್ಪಟ್ಟು ಜೈಲು ಪಾಲಾಗಿದ್ದ.
Threat calls to Nitin Gadkari on Jayesh Pujari taken into custody from the Hindalga jail by nagpur police. Nagpur Police on Tuesday took into custody a murder case convict from a jail in Belagavi in Karnataka in connection with the threat calls made to the office of Union minister Nitin Gadkari on two occasions, an official said.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am