ಬ್ರೇಕಿಂಗ್ ನ್ಯೂಸ್
05-08-20 07:57 am Headline Karnataka News Network ದೇಶ - ವಿದೇಶ
ಲಕ್ನೋ, ಆಗಸ್ಟ್ 05: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.
ಶ್ರಾವಣ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ಅಭಿಜಿನ್ ಮುಹೂರ್ತ, ಭೂಮಿ ಕರಣ, ಶತಭಿಷ ನಕ್ಷತ್ರದಲ್ಲಿ ಭೂಮಿಪೂಜೆ ನೆರವೇರಿತು.
ಶಿಲಾನ್ಯಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು 22.6 ಕೆಜಿ ತೂಕದ ಐದು ಇಟ್ಟಿಗೆಗಳನ್ನು ಬಳಸಿದರು. ಇವುಗಳಿಗೆ ನಂದಾ, ಭದ್ರಾ, ಜಯಾ, ರಿಕ್ಷಾ, ಪೂರ್ಣಾ ಎಂದು ಹೆಸರು.
ಋತ್ವಿಜರಿಂದ ವೇದಮಂತ್ರ ಪಠಣ ಮತ್ತು ಭಕ್ತರಿಂದ ರಾಮಾಯಣ ಶ್ಲೋಕಗಳ ಪಠಣ ಸತತವಾಗಿ ನಡೆಯಿತು. ದೇಶದ ವಿವಿಧ ಭಾಗಗಳಲ್ಲಿ ಟಿವಿಗಳಲ್ಲಿ ಅಯೋಧ್ಯೆ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸುತ್ತಿದ್ದ ಜನರು ಕುಳಿತ ಸ್ಥಳದಿಂದಲೇ ’ಜೈಶ್ರೀರಾಮ್’ ಎಂದು ಜಯಕಾರ ಮೊಳಗಿಸಿದರು.
ಭೂಮಿಪೂಜೆಗೆ ಬಳಸುವ ಗುದ್ದಲಿಯನ್ನು ವಿಧಿಪೂರ್ವಕ ಪೂಜಿಸಲಾಯಿತು. ಈ ಸಂದರ್ಭ ಭಕ್ತರು ರಾಮರಕ್ಷಾಸ್ತೋತ್ರ ಪಠಿಸಿದರು. ಭೂಮಿಯನ್ನು ಲಕ್ಷ್ಮಿ (ಸಂಪತ್ತು) ಎಂದು ಗೌರವಿಸುವ ಶ್ರೀಸೂಕ್ತವನ್ನು ಋತ್ವಿಜರು ಪಠಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೈಮುಗಿದು ಕುಳಿತಿದ್ದರು.
ಭೂಮಿಯನ್ನು ಲಕ್ಷ್ಮಿ ಎಂದು ಗೌರವಿಸುವ ಶ್ರೀಸೂಕ್ತವನ್ನು ಸ್ವರಬದ್ಧವಾಗಿ ಋತ್ವಿಜರು ಪಠಿಸಿದರು. ಪ್ರಧಾನಿ ಭೂಮಿಗೆ ಆರತಿ ಮಾಡಿ, ನಮಸ್ಕರಿಸಿದರು. ಭೂಮಿಯಿಂದ ಮಣ್ಣು ತೆಗೆದು ಶಿರಕ್ಕೆ ಧರಿಸಿದರು. ಪಂಚಭೂತಗಳೂ ಮಂಗಳ ಉಂಟು ಮಾಡಲಿ ಎಂಬ ಪ್ರಾರ್ಥನೆಯೊಂದಿಗೆ ಋತ್ವಿಜರು ಶಾಂತಿ ಮಂತ್ರ ಪಠಿಸಿದರು.
’ಕಾಲಕ್ಕೆ ಸರಿಯಾಗಿ ಮಳೆ ಬರಲಿ, ಸಸ್ಯ ಸಂಪತ್ತು ವೃದ್ಧಿಯಾಗಲಿ...’ ಋತ್ವಿಜರು ಆಶೀರ್ವಾದ ಮಂತ್ರ ಪಠಿಸಿದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm