ಬ್ರೇಕಿಂಗ್ ನ್ಯೂಸ್
03-04-23 12:45 pm HK News Desk ದೇಶ - ವಿದೇಶ
ಕೋಯಿಕ್ಕೋಡ್, ಎ.3: ರೈಲಿಗೆ ಹತ್ತುವ ವಿಚಾರವಾಗಿ ನಡೆದ ಜಗಳ ಭೀಕರ ದುರಂತದಲ್ಲಿ ಅಂತ್ಯವಾಗಿದೆ. ಚಲಿಸುತ್ತಿದ್ದ ಎಕ್ಸ್ಪ್ರೆಸ್ ರೈಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿರುವ ಘಟನೆ ಕೇರಳದಲ್ಲಿ ನಡೆದಿದೆ. ಜಗಳದ ಹಿನ್ನೆಲೆ ಅಪರಿಚಿತ ವ್ಯಕ್ತಿ ತನ್ನ ಜೊತೆ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಬೆಂಕಿ ಹಚ್ಚಿದ್ದಾನೆ. ಇದರಿಂದ ಉಂಟಾದ ಕಾಲ್ತುಳಿತ ಮತ್ತು ಸುಟ್ಟ ಗಾಯಗಳಿಂದ 3 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಒಂದು ವರ್ಷದ ಮಗು, ಮಹಿಳೆ ಸೇರಿದ್ದಾರೆ. ಕೇರಳದ ಎಲತ್ತೂರ್ ರೈಲು ನಿಲ್ದಾಣದ ಬಳಿ ಹಳಿಗಳ ಮೇಲೆ ಮೂವರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲಪ್ಪುಳ - ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ.
ಘಟನೆ ನಡೆದ ಕೂಡಲೇ ವ್ಯಕ್ತಿ ಪರಾರಿಯಾಗಿದ್ದು, ಪ್ರಯಾಣಿಕರು ತುರ್ತು ಸರಪಳಿ ಎಳೆದ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಭಾನುವಾರ ರಾತ್ರಿ 9.45 ರ ಸುಮಾರಿಗೆ, ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲು ಕೋಯಿಕ್ಕೋಡ್ ಅನ್ನು ದಾಟಿ ಕಣ್ಣೂರು ಬಳಿಯ ಕೊರಾಪುಳ ರೈಲ್ವೇ ಸೇತುವೆಯನ್ನು ತಲುಪಿದಾಗ ಈ ದುರ್ಘಟನೆ ನಡೆದಿದೆ.
ಕೆಲವು ಗಂಟೆಗಳ ನಂತರ, ಎಲತ್ತೂರು ರೈಲು ನಿಲ್ದಾಣದ ಬಳಿ ಹಳಿಗಳ ಮೇಲೆ ಒಂದು ವರ್ಷದ ಮಗು ಮತ್ತು ಮಹಿಳೆ ಸೇರಿದಂತೆ ಮೂವರ ಶವಗಳು ಪತ್ತೆಯಾಗಿವೆ.
Eight people sustained burn injuries after a man set his co-passenger on fire following an argument inside a moving train near Elathoor in Kozhikode in Kerala. The incident took place inside the D1 compartment of the Alappuzha-Kannur Executive Express train around 10 pm on Sunday. A bag was also found on the railway track after the incident. Police are conducting an investigation to see if the bag belonged to the accused.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm