ಬ್ರೇಕಿಂಗ್ ನ್ಯೂಸ್
03-04-23 02:16 pm HK News Desk ದೇಶ - ವಿದೇಶ
ಇಂದೋರ್, ಎ.3: ಕೆಲ ದಿನಗಳ ಹಿಂದೆಯಷ್ಟೇ ಮೆಟ್ಟಿಲುಬಾವಿ ಕುಸಿದು 36 ಜನರ ಸಾವಿಗೆ ಕಾರಣವಾಗಿದ್ದ ಬಲೇಶ್ವರ್ ಮಹಾದೇವ್ ದೇವಸ್ಥಾನದ ಅಕ್ರಮ ನಿರ್ಮಾಣವನ್ನು ಇಂದೋರ್ ನಗರ ಪಾಲಿಕೆಯು ಸೋಮವಾರ ತೆರವು ಮಾಡಿದೆ.
ಇಂದು ಬೆಳಗ್ಗೆಯಿಂದಲೇ ಅಕ್ರಮ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು ಭಾರೀ ಸಂಖ್ಯೆಯಲ್ಲಿ ನೆರೆದಿರುವುದರಿಂದ ಯಾವುದೇ ಪ್ರತಿರೋಧ ವ್ಯಕ್ತವಾಗಿಲ್ಲ.
ಸಂಭಾವ್ಯ ಪ್ರತಿರೋಧವನ್ನು ತಡೆಯಲು ನಾಲ್ಕು ಪೊಲೀಸ್ ಠಾಣೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತರು, ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಇದ್ದಾರೆ.

ಏತನ್ಮಧ್ಯೆ, ಸ್ಥಳದಲ್ಲಿದ್ದ ದೇವಾಲಯದ ಅರ್ಚಕರೊಬ್ಬರು ಮಾತನಾಡಿ, ದೇವಾಲಯದಲ್ಲಿದ್ದ ಮೂರ್ತಿಗಳಿಗೆ ವಿಧಿ ವಿಧಾನಗಳ ಪ್ರಕಾರ ಪ್ರಾರ್ಥನೆ ಸಲ್ಲಿಸಲಾಗಿದ್ದು, ಅವುಗಳನ್ನು ಕಂಟಫೋಡ್ ದೇವಾಲಯಕ್ಕೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.
ಕೆಲ ದಿನಗಳ ಹಿಂದೆ ಈ ದೇವಸ್ಥಾನದ ಒಳಗಡೆ ಕುಸಿತವಾಗಿ 36 ಜನರು ಅಸುನೀಗಿದ್ದರು. ಕುಸಿದ ದೇವಾಲಯದ ಪ್ರದೇಶವು ಅಕ್ರಮ ರಚನೆಯಾಗಿದೆ ಎಂದು ಅದನ್ನು ಮೆಟ್ಟಿಲುಬಾವಿಯ ಹೊದಿಕೆಯನ್ನು ನೆಲಸಮ ಮಾಡಲು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ಕಳೆದ ವರ್ಷ ಸೂಚಿಸಿತ್ತು. ಆದರೆ, ದೇವಾಲಯದ ಟ್ರಸ್ಟ್ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ಎಚ್ಚರಿಸಿದ ನಂತರ ಮುನಿಸಿಪಾಲಿಟಿ ಅದರಿಂದ ಹಿಂದೆ ಸರಿದಿತ್ತು.

ರಾಮ ನವಮಿಯಂದು ಜನಸಂದಣಿಯ ಭಾರದಿಂದ ಮೆಟ್ಟಿಲುಬಾವಿಯ ಮೇಲ್ಛಾವಣಿ ಒಡೆದು ಹೋಗಿತ್ತು. ಘಟನೆ ನಡೆದಾಗ ದೇವಸ್ಥಾನದಲ್ಲಿ ಹೋಮ ಹವನ ನಡೆಯುತ್ತಿತ್ತು.
ದುರಂತದ ನಂತರ, ಭಾರತೀಯ ದಂಡ ಸಂಹಿತೆ ಸೆಕ್ಷನ್ 304 ಅಡಿಯಲ್ಲಿ ಬಲೇಶ್ವರ್ ಮಹಾದೇವ್ ಜುಲೇಲಾಲ್ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಸೇವಾರಾಮ್ ಗಲಾನಿ ಮತ್ತು ಕಾರ್ಯದರ್ಶಿ ಮುರಳಿ ಕುಮಾರ್ ಸಬ್ನಾನಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.

ಇಬ್ಬರು ಆರೋಪಿಗಳು ಮೆಟ್ಟಿಲುಬಾವಿಯ ಮೇಲೆ ಮೇಲ್ಛಾವಣಿಯನ್ನು ಹಾಕುವ ಮೂಲಕ ಅಸುರಕ್ಷಿತ ನಿರ್ಮಾಣ ಕಾರ್ಯವನ್ನು ಮಾಡಿದ ಆರೋಪವನ್ನು ಎದುರಿಸುತ್ತಿದ್ದಾರೆ, ಅಸುರಕ್ಷಿತ ನಿರ್ಮಾಣದಿಂದಾಗಿ 36 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ದೇವಾಲಯದ ಸಂಕೀರ್ಣದಲ್ಲಿನ ಅಕ್ರಮ ನಿರ್ಮಾಣವನ್ನು ತೆಗೆದುಹಾಕಲು ಟ್ರಸ್ಟ್ಗೆ ಆದೇಶ ನೀಡಲಾಗಿತ್ತು, ಆದರೆ ಟ್ರಸ್ಟ್ ಆದೇಶವನ್ನು ಪಾಲಿಸಿರಲಿಲ್ಲ.
Bulldozers deployed by the Indore Municipal Corporation on Monday demolished illegal construction at the Beleshwar Jhulelal Mahadev Temple, where last Thursday, 36 people were killed after its floor caved into a stepwell.District administration officials and police personnel were present in strength as bulldozers rolled in.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm