ಬ್ರೇಕಿಂಗ್ ನ್ಯೂಸ್
10-04-23 03:38 pm HK News Desk ದೇಶ - ವಿದೇಶ
ನವೆದಹಲಿ, ಎ.10: ಪ್ರಯಾಣಿಕರೊಬ್ಬರು ಕ್ಯಾಬಿನ್ ಸಿಬ್ಬಂದಿಗೆ ಹೊಡೆದ ಹಿನ್ನೆಲೆಯಲ್ಲಿ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಸೋಮವಾರ ವಾಪಸ್ ದೆಹಲಿಗೆ ಮರಳಿದೆ. ಬಳಿಕ ಸಿಬ್ಬಂದಿ ಜತೆಗೆ ಜಗಳವಾಡಿದ ಪ್ರಯಾಣಿಕನನ್ನು ಪೊಲೀಸರಿಗೆ ಒಪ್ಪಿಸಿ, ಆತನ ವಿರುದ್ಧ ದೂರು ಕೂಡ ದಾಖಲಿಸಿದೆ.
ಸೋಮವಾರ ಬೆಳಗ್ಗೆ 6.35ಕ್ಕೆ ಏರ್ ಇಂಡಿಯಾ ವಿಮಾನವು ದಿಲ್ಲಿಯಿಂದ ಲಂಡನ್ ನಗರದತ್ತ ಪ್ರಯಾಣ ಬೆಳೆಸಿತು. ಆದರೆ, ಸ್ವಲ್ಪ ಹೊತ್ತಿನಲ್ಲೇ ಮತ್ತೆ ವಿಮಾನ ವಾಪಸ್ ದಿಲ್ಲಿಗೆ ಮರಳಿತು.
ಸೋವಾರ ಬೆಳಗ್ಗೆ 6.35ಕ್ಕೆ ದಿಲ್ಲಿ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆ ಪ್ರಯಾಣಿಕರೊಬ್ಬರು ಸಿಬ್ಬಂದಿ ಜತೆಗೆ ಜಗಳವಾಡಲು ಆರಂಭಿಸಿದರು. ಆಗ ವಿಮಾನವು ಮತ್ತೆ ದಿಲ್ಲಿ ವಿಮಾನ ನಿಲ್ದಾಣಕ್ಕೆ ವಾಪಸ್ ಬಂದು, ಜಗಳವಾಡುತ್ತಿದ್ದ ಪ್ರಯಾಣಿಕನನ್ನು ಪೊಲೀಸರಿಗೆ ಒಪ್ಪಿಸಿ ಮತ್ತೆ ಲಂಡನ್ನತ್ತ ತನ್ನ ಪ್ರಯಾಣವನ್ನು ಬೆಳೆಸಿತು.
ಮೌಖಿಕ ಮತ್ತು ಲಿಖಿತ ಎಚ್ಚರಿಕೆಗಳಿಗೆ ಕಿವಿಗೊಡದೆ, ಪ್ರಯಾಣಿಕರು ಇಬ್ಬರು ಕ್ಯಾಬಿನ್ ಸಿಬ್ಬಂದಿಗೆ ದೈಹಿಕ ಹಲ್ಲೆ ಮಾಡುವುದು ಸೇರಿದಂತೆ ಅಶಿಸ್ತಿನ ವರ್ತನೆಯನ್ನು ಮುಂದುವರೆಸಿದರು.
ವಿಮಾನದಲ್ಲಿ ಸಿಬ್ಬಂದಿ ಜತೆ ಪ್ರಯಾಣಿಕರು ಅನುಚಿತವಾಗಿ ವರ್ತಿಸುವ, ಜಗಳವಾಡುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿವೆ. ಕಳೆದ ತಿಂಗಳು ಲಂಡನ್ನಿಂದ ಮುಂಬೈ ಏರ್ ಇಂಡಿಯಾ ವಿಮಾನದ ಪ್ರಯಾಣಿಕರೊಬ್ಬರು ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದರು. ಅವರ ಈ ಅಶಿಸ್ತಿನ ವರ್ತನೆಗಾಗಿ ಪ್ರಕರಣ ದಾಖಲಾಗಿತ್ತು. ಈ ವರ್ಷದ ಆರಂಭದಲ್ಲಿ, ನವೆಂಬರ್ ಮೂತ್ರ ವಿಸರ್ಜನೆ ಪ್ರಕರಣದಲ್ಲಿ ನಿಯಮಗಳನ್ನು ಅನುಸರಿಸಲು ವಿಫಲವಾದ ಕಾರಣ ಏರ್ ಇಂಡಿಯಾಗೆ ಸಂಸ್ಥೆಗೆ 30 ಲಕ್ಷ ರೂ. ದಂಡ ವಿಧಿಸಲಾಯಿತು. ನವೆಂಬರ್ 26 ರಂದು ನ್ಯೂಯಾರ್ಕ್-ದಿಲ್ಲಿ ವಿಮಾನದಲ್ಲಿ ಶಂಕರ್ ಮಿಶ್ರಾ ಎಂಬ ಪ್ರಯಾಣಿಕರು ಕುಡಿದ ಅಮಲಿನಲ್ಲಿ ವಯಸ್ಸಾದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು. ಈ ಪ್ರಕರಣ ಭಾರೀ ಸುದ್ದಿ ಮಾಡಿತ್ತು.
An Air India London bound flight was forced to return to Delhi after an unruly passenger had a brawl with crew members mid-air. The flight returned to Delhi shortly after the take-off due to an unruly passenger. The flight has been rescheduled the flight to depart for London this afternoon, Air India said in a statement.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm