ಬ್ರೇಕಿಂಗ್ ನ್ಯೂಸ್
10-04-23 06:53 pm HK News Desk ದೇಶ - ವಿದೇಶ
ನವದೆಹಲಿ, ಎ.10 : ಬಾಲಕನ ತುಟಿಗೆ ಮುತ್ತು ಕೊಡುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಬೌದ್ಧ ಧರ್ಮಗುರು ದಲೈಲಾಮಾ, ಬಾಲಕ ಮತ್ತು ಆತನ ಕುಟುಂಬಕ್ಕೆ ಕ್ಷಮೆ ಯಾಚಿಸಿದ್ದಾರೆ. ಅಲ್ಲದೇ, ದಲೈಲಾಮಾ ಅವರು ತಮ್ಮನ್ನು ಭೇಟಿಯಾಗುವ ಜನರನ್ನು ಮುಗ್ಧ ಹಾಗೂ ತಮಾಷೆ ರೀತಿಯಲ್ಲಿ ಕೀಟಲೆ ಮಾಡುತ್ತಾರೆ ಎಂದು ದಲೈಲಾಮಾ ಅವರ ತಂಡ ಹೇಳಿಕೆ ನೀಡಿದೆ.
ಕ್ಷಮೆ ಯಾಚನೆಯ ಟಿಪ್ಪಣಿಯನ್ನು ದಲೈಲಾಮಾ ತನ್ನ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಕ್ಷಮಾಪಣೆ ಟಿಪ್ಪಣಿಯನ್ನು ದಲೈಲಾಮಾ ಪರವಾದ ತಂಡ ಬರೆದುಕೊಂಡಿದ್ದು, ದಲೈಲಾಮಾ ವರ್ತನೆಯಿಂದ ನೋವಾಗಿದ್ದರೆ ಆ ಬಾಲಕ ಹಾಗೂ ಅವರ ಕುಟುಂಬ ಮತ್ತು ವಿಶ್ವಾದ್ಯಂತ ಇರುವ ಸ್ನೇಹಿತರಲ್ಲಿ ಅವರು ಕ್ಷಮೆ ಯಾಚಿಸುತ್ತಾರೆ. ದಲೈಲಾಮಾ ಅವರು ತಮ್ಮನ್ನು ಭೇಟಿಯಾಗುವ ಜನರನ್ನು ಮುಗ್ಧ ಮತ್ತು ತಮಾಷೆಯ ರೀತಿಯಲ್ಲಿ ನೋಡುತ್ತಾರೆ. ಈ ಘಟನೆಯ ಬಗ್ಗೆ ಅವರು ವಿಷಾದ ವ್ಯಕ್ತಪಡಿಸುತ್ತಾರೆ ಎಂದು ಹೇಳಿದ್ದಾರೆ.
ವೈರಲ್ ಆದ ವಿಡಿಯೋದಲ್ಲಿ ದಲೈಲಾಮಾ ಬಾಲಕನ ತುಟಿಗಳಿಗೆ ಮುತ್ತಿಡುತ್ತಾ ಹಣೆ ಸ್ಪರ್ಶಿಸುತ್ತಿರುವ ದೃಶ್ಯ ಇತ್ತು. ಅಲ್ಲದೆ, ತಮ್ಮ ನಾಲಿಗೆಯನ್ನು ಹೊರಹಾಕಿ ನಾಲಿಗೆಯನ್ನು ನೆಕ್ಕುವಂತೆ ಹೇಳಿರುವ ದೃಶ್ಯಗಳು ಅದೇ ವಿಡಿಯೋದಲ್ಲಿವೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ದಲೈಲಾಮಾ ವಿರುದ್ಧ ಕಿಡಿಕಾರಿದ್ದರು.
ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರಾಗಿರುವ ದಲೈಲಾಮಾ ಈ ಹಿಂದೆ 2019ರಲ್ಲಿ ಇದೇ ರೀತಿಯ ವಿವಾದ ಸೃಷ್ಟಿಸಿಕೊಂಡಿದ್ದರು. ತಮ್ಮ ಉತ್ತರಾಧಿಕಾರಿ ಮಹಿಳೆಯಾಗಬೇಕಾದರೆ ಅವರು ನೋಡಲು ಆಕರ್ಷಕವಾಗಿರಬೇಕು ಎಂದು ಹೇಳಿದ್ದರು. ಅದು ವಿವಾದವಾದ ಬಳಿಕ ಕ್ಷಮೆ ಯಾಚಿಸಿದ್ದರು. ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ದಲೈಲಾಮಾ, ಮಹಿಳಾ ದಲೈಲಾಮಾ ಬರಬೇಕೆಂದರೆ ಅವಳು ಹೆಚ್ಚು ಆಕರ್ಷಕವಾಗಿರಬೇಕು ಎಂದು ಹೇಳಿದ್ದು ವಿವಾದಕ್ಕೆ ಒಳಗಾಗಿತ್ತು.
The Dalai Lama has apologised to a young boy after a video emerged online of the spiritual Tibetan Buddhist leader kissing him on the lips and asking him to suck his tongue. The disturbing video of the most senior spiritual figure in Tibetan Buddhism was recorded during an event in northern India's hillside city of Dharamshala back in February.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm