ಬ್ರೇಕಿಂಗ್ ನ್ಯೂಸ್
26-10-20 11:29 am Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಅಕ್ಟೋಬರ್ 26 : ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಿಚಾರಣೆಗೆ ಕರೆತಂದಿದ್ದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯ ಮೊದಲ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ರಾಜಧಾನಿಯ ಲೋಧಿ ಕಾಲನಿ ಠಾಣೆಯಲ್ಲಿ ನಡೆದಿದೆ. ಮೃತರನ್ನು ಧರ್ಮವೀರ್ ಸಿಂಗ್ (52) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದ್ದು, ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಮೊದಲ ಮಹಡಿಯಿಂದ ಬಿದ್ದು ಆರೋಪಿ ಮೃತಪಟ್ಟಿದ್ದಾನೆ ಎನ್ನುವುದು ಪೊಲೀಸರ ವಾದ.
ಲೋಧಿ ಕಾಲನಿಯಲ್ಲಿ ಗುರುವಾರ ಕಾರೊಂದು ಕಳ್ಳತನವಾಗಿದ್ದು, ಈ ಕಳ್ಳರು ಧರ್ಮವೀರ್ ಸಿಂಗ್ನ ಆಟೊದಲ್ಲಿ ಪ್ರಯಾಣಿಸಿದ್ದರು ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸಿಂಗ್ನನ್ನು ವಿಚಾರಣೆಗೆ ಕರೆ ತರಲಾಗಿತ್ತು.
ಸಿಂಗ್ ನೆಲಮಹಡಿಯಲ್ಲಿ ಪ್ರಜ್ಞಾಶೂನ್ಯನಾಗಿ ಬಿದ್ದುದನ್ನು ಕಂಡ ತಕ್ಷಣ ಪೊಲೀಸರು ಧಾವಿಸಿ ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ವೇಳೆ ಆತ ಮೃತಪಟ್ಟಿದ್ದಾಗಿ ಪೊಲೀಸರು ಹೇಳಿದ್ದಾರೆ. ಕಾರು ಕಳವು ಆರೋಪಿಗಳನ್ನು ಶನಿವಾರ ಬಂಧಿಸಲಾಗಿತ್ತು.
"ಸಿಸಿಟಿವಿ ದೃಶ್ಯಾವಳಿ ನೋಡಿದಾಗ ಆಟೋದಲ್ಲಿ ಬಂದ ಇಬ್ಬರು ಕಾರು ಕದ್ದು ಪರಾರಿಯಾಗಿರುವುದು ಕಂಡುಬಂತು. ಆಟೋ ಮಾಲಕ ಧರ್ಮವೀರ್ ಸಿಂಗ್, ಫತೇಪುರ್ ನಿವಾಸಿ ಸತೀಶ್ ಎಂಬಾತನಿಗೆ ಬಾಡಿಗೆಗೆ ನೀಡಿದ್ದರು. ಧರ್ಮವೀರ್ ಅವರನ್ನು ಶುಕ್ರವಾರ ವಿಚಾರಣೆಗೆ ಗುರಿಪಡಿಸಿ ಶನಿವಾರ ಸತೀಶ್ನನ್ನು ಸೆರೆ ಹಿಡಿಯಲಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡ ಇಬ್ಬರು ಶಂಕಿತರಲ್ಲಿ ಆತ ಒಬ್ಬ. ಆತನ ಮಾಹಿತಿ ಮೇರೆಗೆ ಘೇವಾರ್ ರಾಮ್ ಚೌಧರಿ ಎಂಬ ಸಹಚರನನ್ನೂ ಬಂಧಿಸಲಾಗಿದೆ" ಎಂದು ದಕ್ಷಿಣ ವಲಯದ ಡಿಸಿಪಿ ಅತುಲ್ ಠಾಕೂರ್ ಮಾಹಿತಿ ನೀಡಿದ್ದಾರೆ.
An assistant sub-inspector of Delhi Police was suspended and two constables sent to district lines after a 45-year-old auto-rickshaw driver died in police custody in south Delhi on Sunday morning, officials said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm