ಬ್ರೇಕಿಂಗ್ ನ್ಯೂಸ್
26-10-20 11:29 am Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಅಕ್ಟೋಬರ್ 26 : ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಿಚಾರಣೆಗೆ ಕರೆತಂದಿದ್ದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯ ಮೊದಲ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ರಾಜಧಾನಿಯ ಲೋಧಿ ಕಾಲನಿ ಠಾಣೆಯಲ್ಲಿ ನಡೆದಿದೆ. ಮೃತರನ್ನು ಧರ್ಮವೀರ್ ಸಿಂಗ್ (52) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದ್ದು, ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಮೊದಲ ಮಹಡಿಯಿಂದ ಬಿದ್ದು ಆರೋಪಿ ಮೃತಪಟ್ಟಿದ್ದಾನೆ ಎನ್ನುವುದು ಪೊಲೀಸರ ವಾದ.
ಲೋಧಿ ಕಾಲನಿಯಲ್ಲಿ ಗುರುವಾರ ಕಾರೊಂದು ಕಳ್ಳತನವಾಗಿದ್ದು, ಈ ಕಳ್ಳರು ಧರ್ಮವೀರ್ ಸಿಂಗ್ನ ಆಟೊದಲ್ಲಿ ಪ್ರಯಾಣಿಸಿದ್ದರು ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸಿಂಗ್ನನ್ನು ವಿಚಾರಣೆಗೆ ಕರೆ ತರಲಾಗಿತ್ತು.
ಸಿಂಗ್ ನೆಲಮಹಡಿಯಲ್ಲಿ ಪ್ರಜ್ಞಾಶೂನ್ಯನಾಗಿ ಬಿದ್ದುದನ್ನು ಕಂಡ ತಕ್ಷಣ ಪೊಲೀಸರು ಧಾವಿಸಿ ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ವೇಳೆ ಆತ ಮೃತಪಟ್ಟಿದ್ದಾಗಿ ಪೊಲೀಸರು ಹೇಳಿದ್ದಾರೆ. ಕಾರು ಕಳವು ಆರೋಪಿಗಳನ್ನು ಶನಿವಾರ ಬಂಧಿಸಲಾಗಿತ್ತು.
"ಸಿಸಿಟಿವಿ ದೃಶ್ಯಾವಳಿ ನೋಡಿದಾಗ ಆಟೋದಲ್ಲಿ ಬಂದ ಇಬ್ಬರು ಕಾರು ಕದ್ದು ಪರಾರಿಯಾಗಿರುವುದು ಕಂಡುಬಂತು. ಆಟೋ ಮಾಲಕ ಧರ್ಮವೀರ್ ಸಿಂಗ್, ಫತೇಪುರ್ ನಿವಾಸಿ ಸತೀಶ್ ಎಂಬಾತನಿಗೆ ಬಾಡಿಗೆಗೆ ನೀಡಿದ್ದರು. ಧರ್ಮವೀರ್ ಅವರನ್ನು ಶುಕ್ರವಾರ ವಿಚಾರಣೆಗೆ ಗುರಿಪಡಿಸಿ ಶನಿವಾರ ಸತೀಶ್ನನ್ನು ಸೆರೆ ಹಿಡಿಯಲಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡ ಇಬ್ಬರು ಶಂಕಿತರಲ್ಲಿ ಆತ ಒಬ್ಬ. ಆತನ ಮಾಹಿತಿ ಮೇರೆಗೆ ಘೇವಾರ್ ರಾಮ್ ಚೌಧರಿ ಎಂಬ ಸಹಚರನನ್ನೂ ಬಂಧಿಸಲಾಗಿದೆ" ಎಂದು ದಕ್ಷಿಣ ವಲಯದ ಡಿಸಿಪಿ ಅತುಲ್ ಠಾಕೂರ್ ಮಾಹಿತಿ ನೀಡಿದ್ದಾರೆ.
An assistant sub-inspector of Delhi Police was suspended and two constables sent to district lines after a 45-year-old auto-rickshaw driver died in police custody in south Delhi on Sunday morning, officials said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm