ಬ್ರೇಕಿಂಗ್ ನ್ಯೂಸ್
26-10-20 11:29 am Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಅಕ್ಟೋಬರ್ 26 : ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಿಚಾರಣೆಗೆ ಕರೆತಂದಿದ್ದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯ ಮೊದಲ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ರಾಜಧಾನಿಯ ಲೋಧಿ ಕಾಲನಿ ಠಾಣೆಯಲ್ಲಿ ನಡೆದಿದೆ. ಮೃತರನ್ನು ಧರ್ಮವೀರ್ ಸಿಂಗ್ (52) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದ್ದು, ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಮೊದಲ ಮಹಡಿಯಿಂದ ಬಿದ್ದು ಆರೋಪಿ ಮೃತಪಟ್ಟಿದ್ದಾನೆ ಎನ್ನುವುದು ಪೊಲೀಸರ ವಾದ.
ಲೋಧಿ ಕಾಲನಿಯಲ್ಲಿ ಗುರುವಾರ ಕಾರೊಂದು ಕಳ್ಳತನವಾಗಿದ್ದು, ಈ ಕಳ್ಳರು ಧರ್ಮವೀರ್ ಸಿಂಗ್ನ ಆಟೊದಲ್ಲಿ ಪ್ರಯಾಣಿಸಿದ್ದರು ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸಿಂಗ್ನನ್ನು ವಿಚಾರಣೆಗೆ ಕರೆ ತರಲಾಗಿತ್ತು.
ಸಿಂಗ್ ನೆಲಮಹಡಿಯಲ್ಲಿ ಪ್ರಜ್ಞಾಶೂನ್ಯನಾಗಿ ಬಿದ್ದುದನ್ನು ಕಂಡ ತಕ್ಷಣ ಪೊಲೀಸರು ಧಾವಿಸಿ ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ವೇಳೆ ಆತ ಮೃತಪಟ್ಟಿದ್ದಾಗಿ ಪೊಲೀಸರು ಹೇಳಿದ್ದಾರೆ. ಕಾರು ಕಳವು ಆರೋಪಿಗಳನ್ನು ಶನಿವಾರ ಬಂಧಿಸಲಾಗಿತ್ತು.
"ಸಿಸಿಟಿವಿ ದೃಶ್ಯಾವಳಿ ನೋಡಿದಾಗ ಆಟೋದಲ್ಲಿ ಬಂದ ಇಬ್ಬರು ಕಾರು ಕದ್ದು ಪರಾರಿಯಾಗಿರುವುದು ಕಂಡುಬಂತು. ಆಟೋ ಮಾಲಕ ಧರ್ಮವೀರ್ ಸಿಂಗ್, ಫತೇಪುರ್ ನಿವಾಸಿ ಸತೀಶ್ ಎಂಬಾತನಿಗೆ ಬಾಡಿಗೆಗೆ ನೀಡಿದ್ದರು. ಧರ್ಮವೀರ್ ಅವರನ್ನು ಶುಕ್ರವಾರ ವಿಚಾರಣೆಗೆ ಗುರಿಪಡಿಸಿ ಶನಿವಾರ ಸತೀಶ್ನನ್ನು ಸೆರೆ ಹಿಡಿಯಲಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡ ಇಬ್ಬರು ಶಂಕಿತರಲ್ಲಿ ಆತ ಒಬ್ಬ. ಆತನ ಮಾಹಿತಿ ಮೇರೆಗೆ ಘೇವಾರ್ ರಾಮ್ ಚೌಧರಿ ಎಂಬ ಸಹಚರನನ್ನೂ ಬಂಧಿಸಲಾಗಿದೆ" ಎಂದು ದಕ್ಷಿಣ ವಲಯದ ಡಿಸಿಪಿ ಅತುಲ್ ಠಾಕೂರ್ ಮಾಹಿತಿ ನೀಡಿದ್ದಾರೆ.
An assistant sub-inspector of Delhi Police was suspended and two constables sent to district lines after a 45-year-old auto-rickshaw driver died in police custody in south Delhi on Sunday morning, officials said.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm