ಬ್ರೇಕಿಂಗ್ ನ್ಯೂಸ್
05-08-20 08:14 am Headline Karnataka News Network ದೇಶ - ವಿದೇಶ
ಅಯೋಧ್ಯೆ (ಜು.5): ‘ಎಲ್ಲರೂ ರಾಮರೇ, ಎಲ್ಲರಲ್ಲೂ ರಾಮನೇ ಇದ್ದಾನೆ. ರಾಮ ಮಂದಿರನವನ್ನು ಇಲ್ಲಿಯೇ ಕಟ್ಟೋಣ. ನಮ್ಮ ಹೃದಯಗಳನ್ನು ಅಯೋಧ್ಯೆ ಮಾಡಿಕೊಳ್ಳೋಣ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿದ ಬಳಿಕ ಮಾತನಾಡಿದ ಅವರು, ‘ಧರ್ಮ ಎಲ್ಲರನ್ನೂ ಮೇಲ್ಮೆಗೆ ತರುತ್ತದೆ. ವಿಶ್ವಕ್ಕೇ ಭಾರತವು ಸುಖ ಶಾಂತಿ ತರಬಲ್ಲದು. ನಾವು ಅಯೋಧ್ಯೆಯಲ್ಲಿ ಮಂದಿರ ಕಟ್ಟಿ ಸುಮ್ಮನಾಗಬಾರದು. ಅದಕ್ಕೂ ಮೊದಲು ಮನಮಮಂದಿರ ಕಟ್ಟಬೇಕು’ ಎಂದು ಹೇಳಿದರು.
ಅತಿಆಸೆ, ವಿಪರೀತ ಸಿಟ್ಟು, ಜಿಪುಣತನದಂಥ ಸಮಾಜಕಂಟಕ ಸ್ವಭಾಗಳನ್ನು ದೂರವಿಡಲು ರಾಮನ ಆದರ್ಶಗಳಿಂದ ಸ್ಪೂರ್ತಿ ಪಡೆಯೋಣ ಎಂದು ಕರೆ ನೀಡಿದರು.
‘ಇದು ನನಗೆ ಅತ್ಯಂತ ಆನಂದದ ದಿನ. ಈ ಹಿಂದೆ ನಮ್ಮ ಸರಸಂಘಚಾಲಕರಾಗಿದ್ದ ಬಾಳಾಸಾಹೇಬ್ ದೇವರಸರು ‘ಈ ಕೆಲಸವನ್ನು ವರ್ಷಗಟ್ಟಲೆ ಮಾಡಬೇಕು’ ಎಂದು ಹೇಳಿದ್ದರು. ಅದೇ ರೀತಿ ನಾವು ನಡೆದುಕೊಂಡೆವು. ಸಾವಿರಾರು ಮಂದಿ ಈ ಕಾರ್ಯಕ್ಕಾಗಿ ಬಲಿದಾನ ಮಾಡಿದ್ದರು. ಅವರೆಲ್ಲರನ್ನೂ ನಾನು ನೆನಪಿಸಿಕೊಳ್ಳುತ್ತೇನೆ ಎಂದು ಭಾಗವತ್ ಹೇಳಿದರು.
ಅಡ್ವಾಣಿ ಅವರು ಈ ಕಾರ್ಯಕ್ರಮವನ್ನು ತಮ್ಮ ನಿವಾಸದಲ್ಲಿ ನೋಡುತ್ತಿರಬಹುದು. ಸಾಕಷ್ಟು ನಾಯಕರಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಿಲ್ಲ. ಪರಿಸ್ಥಿತಿಯೇ ಹಾಗಿದೆ. ಕೊರೊನಾ ಕಾಲದಿಂದ ವಿಶ್ವ ಅಂತರ್ಮುಖಿಯಾಗಿದೆ. ಏನಾದರೂ ದಾರಿಯಿದೆಯೇ ಎಂದು ಎದುರು ನೋಡುತ್ತಿದೆ. ನಮಗೆ ವಿಶ್ವಾಸವಿದೆ. ರಾಮನ ಹಾದಿಯಲ್ಲಿ ಪರಿಹಾರವಿದೆ ಎಂದು ಅವರು ಹೇಳಿದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm