ಬ್ರೇಕಿಂಗ್ ನ್ಯೂಸ್
16-04-23 03:41 pm HK News Desk ದೇಶ - ವಿದೇಶ
ಖಾರ್ಟೂಮ್, ಎ.16: ಸುಡಾನ್ ನಡೆಯುತ್ತಿರುವ ಸೇನಾ ಸಂಘರ್ಷದಲ್ಲಿ ಓರ್ವ ಭಾರತೀಯ ಸೇರಿದಂತೆ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, 500 ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇಲ್ಲಿನ ಮಿಲಿಟರಿ ಹಾಗೂ ಪ್ಯಾರಾಮಿಲಿಟರಿ ನಡುವೆ ಸಂಘರ್ಷ ಸಂಭವಿಸಿದ ಪರಿಣಾಮ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, ಈ ಪೈಕಿ ಸುಡಾನ್ ನಲ್ಲಿ ಕೆಲಸ ಮಾಡುತ್ತಿದ್ದ ಓರ್ವ ಭಾರತ ಮೂಲದ ವ್ಯಕ್ತಿ ಕೂಡ ಸೇರಿದ್ದಾರೆ ಎನ್ನಲಾಗಿದೆ. ಮೃತ ವ್ಯಕ್ತಿಯ ದೇಹದ ಮೇಲೆ ಗುಂಡಿನ ಗಾಯಗಳಾಗಿದ್ದು, ಆತ ಸೇನಾ ಗುಂಡಿಗೆ ಬಲಿಯಾಗಿರಬಹುದು ಎಂದು ಶಂಕಿಸಲಾಗಿದೆ.
ಸೂಡಾನ್ನ ದಾಲ್ ಗ್ರೂಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಪ್ರಜೆ ಆಲ್ಬರ್ಟ್ ಆಗಸ್ಟಿನ್ ನಿನ್ನೆ ದಾರಿತಪ್ಪಿ ಸಂಘರ್ಷ ಪೀಡಿತ ಪ್ರದೇಶಕ್ಕೆ ತೆರಳಿದ್ದಾಗ ಗುಂಡು ತಗುಲಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ" ಎಂದು ಸುಡಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಟ್ವೀಟ್ ಮಾಡಿದೆ.

ಅಂತೆಯೇ ರಾಯಭಾರ ಕಚೇರಿ ಆಗಸ್ಟೀನ್ ಅವರ ಕುಟುಂಬ ಮತ್ತು ವೈದ್ಯಕೀಯ ಪ್ರಾಧಿಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮುಂದಿನ ವ್ಯವಸ್ಥೆಗಳನ್ನು ಮಾಡುತ್ತಿದೆ ಎಂದು ಮಾಹಿತಿ ನೀಡಿದೆ. ಇನ್ನು ಸೇನಾ ಸಂಘರ್ಷ ಘಟನೆಯಲ್ಲಿ 500ಕ್ಕೂ ಹೆಚ್ಚಿನವರಿಗೆ ಗಂಭೀರ ಗಾಯಗಳಾಗಿವೆ ಎಂದು ಸುಡಾನ್ ಕೇಂದ್ರ ವೈದ್ಯಕೀಯ ಮಂಡಳಿಯು ತಿಳಿಸಿದೆ.
ಈ ಘರ್ಷಣೆಯು ಇನ್ನೂ ಮುಂದುವರಿದಿದ್ದು ಗಾಯಾಳುಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ತಿಳಿಸಿವೆ. ಸುಡಾನ್ನ ರಾಜಧಾನಿಯಾದ ಖಾರ್ಟೂಮ್ ಪ್ರದೇಶದ ವಿವಿಧೆಡೆ ಶಸಸ್ತ್ರ ಸೇನೆ ಮತ್ತು ಅರೆಸೈನಿಕ ಪಡೆ ನಡುವೆ ನಡೆಯುತ್ತಿರುವ ಸಮರ ರಾಜಕೀಯ ಸಂಘರ್ಷವಾಗಿದೆ
ಶನಿವಾರ ಬೆಳಗ್ಗಿನಿಂದ ಅಲ್ಲಲ್ಲಿ ಸ್ವಲ್ಪಮಟ್ಟಿಗೆ ನಡೆಯುತ್ತಿದ್ದ ಸೈನಿಕರ ಸಂಘರ್ಷ ಬರಬರುತ್ತ ತೀವ್ರ ಸ್ವರೂಪ ಪಡೆದುಕೊಂಡಿತು. ಈ ವೇಳೆ ಗುಂಡಿನ ಚಕಮಕಿಯಿಂದಾಗಿ ಸಾವುನೋವಿಗೆ ತುತ್ತಾದವರಲ್ಲಿ ಅಮಾಯಕ ನಾಗರಿಕರ ಸಂಖ್ಯೆಗಳನ್ನು ಮಾತ್ರ ಪ್ರಕಟಿಸಲಾಗಿದೆ.
ಸುಡಾನ್ನಲ್ಲಿರುವ ಮಿಲಿಟರಿ ಆಡಳಿತದ ವಿರುದ್ಧ ಅರೆಸೇನಾಪಡೆ ದಂಗೆ ಎದ್ದಿದ್ದು, ಖಾರ್ಟೂಮ್ನಲ್ಲಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಅಧ್ಯಕ್ಷರ ನಿವಾಸವನ್ನು ವಶಕ್ಕೆ ಪಡೆಯಲು ಯತ್ನಿಸಿತ್ತು. ಈ ಸಂದರ್ಭ ಮಿಲಿಟರಿ ಪ್ರತಿರೋಧ ಒಡ್ಡಿದೆ. ಆಗ ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆದಿದೆ.
A total of 56 civilians were killed and 595 others were wounded in clashes across Sudan, the Central Committee of Sudan Doctors said early on Sunday, a day after fighting broke out between Sudan's military and a government paramilitary force.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm