ಬ್ರೇಕಿಂಗ್ ನ್ಯೂಸ್
17-04-23 07:54 pm HK News Desk ದೇಶ - ವಿದೇಶ
ಚಂಡೀಗಢ, ಎ.17: ಪಂಜಾಬ್ನ ಬಟಿಂಡಾ ಸೇನಾ ನೆಲೆಯಲ್ಲಿ ಗುಂಡಿನ ದಾಳಿ ನಡೆಸಿ ನಾಲ್ವರು ಯೋಧರನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಯೋಧರೊಬ್ಬರನ್ನು ಕದ್ದ ರೈಫಲ್ನೊಂದಿಗೆ ಬಂಧಿಸಲಾಗಿದೆ.
ಗನ್ನರ್ ದೇಸಾಯಿ ಮೋಹನ್ ಬಂಧಿತ ಯೋಧ. ಗುಂಡಿನ ದಾಳಿ ನಡೆದಿದ್ದ ಸ್ಥಳದಲ್ಲಿ ರೈಫಲ್ ಮತ್ತು ಕೊಡಲಿ ಹಿಡಿದಿದ್ದ ಇಬ್ಬರನ್ನು ನೋಡಿರುವುದಾಗಿ ಮೋಹನ್ ಈ ಹಿಂದೆ ಹೇಳಿಕೆ ನೀಡಿದ್ದರು.
ನಾಲ್ವರನ್ನು ತಾನೇ ಹತ್ಯೆ ಮಾಡಿರುವುದಾಗಿ ಮೋಹನ್ ತಪ್ಪೊಪ್ಪಿಕೊಂಡಿದ್ದಾರೆ’ ಎಂದು ಬಟಿಂಡಾದ ಪೊಲೀಸ್ ವರಿಷ್ಠಾಧಿಕಾರಿ ಗುಲ್ನೀತ್ ಸಿಂಗ್ ಖುರಾನ ತಿಳಿಸಿದ್ದಾರೆ.
ಕೃತ್ಯದ ಹಿಂದಿನ ಕಾರಣವನ್ನು ಬಹಿರಂಗಪಡಿಸಲಾಗದು. ಹತ್ಯೆಗೀಡಾಗಿರುವ ನಾಲ್ವರ ಯೋಧರೊಂದಿಗೆ ಮೋಹನ್ಗೆ ವೈಯಕ್ತಿಕ ದ್ವೇಷ ಇತ್ತು’ ಎಂದು ಹೇಳಿದ್ದಾರೆ.
ಗುಂಡಿನ ದಾಳಿ ನಡೆಯುವುದಕ್ಕೂ ಎರಡು ದಿನಗಳ ಮೊದಲು ಸೇನಾ ನೆಲೆಯಿಂದ ಇನ್ಸಾಸ್ ರೈಫಲ್ ಹಾಗೂ 28 ಸುತ್ತು ಮದ್ದುಗುಂಡುಗಳು ಕಾಣೆಯಾಗಿದ್ದವು. ಸೇನಾ ನೆಲೆಯಿಂದ ಕದ್ದ ರೈಫಲ್ ಮತ್ತು ಮದ್ದುಗುಂಡುಗಳಿಂದಲೇ ಈ ಕೃತ್ಯಕ್ಕೆ ಬಳಸಲಾಗಿದೆ ಎಂಬುದು ತನಿಖೆಯಿಂದ ತಿಳಿದು ಬಂದಿರುವುದಾಗಿ ಖುರಾನ ಅವರು ಹೇಳಿದ್ದಾರೆ.
ಪೊಲೀಸರು ವಿಚಾರಣೆ ನಡೆಸಿದ ಬಳಿಕ ಫಿರಂಗಿ ದಳದ ಗನ್ನರ್ ದೇಸಾಯಿ ಮೋಹನ್ ಅವರು ತಾನು ಇನ್ಸಾಸ್ ರೈಫಲ್ ಕದ್ದು, ನಾಲ್ವರು ಸಹೋದ್ಯೋಗಿಗಳನ್ನು ಹತ್ಯೆ ಮಾಡಿರುವುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.
ಏಪ್ರಿಲ್ 9ರಂದು ಬೆಳಿಗ್ಗೆ ರೈಫಲ್ ಮತ್ತು ಮದ್ದುಗುಂಡುಗಳನ್ನು ಕದ್ದು, ಅಡಗಿಸಿಟ್ಟಿರುವುದಾಗಿ ಮೋಹನ್ ತಿಳಿಸಿದ್ದಾರೆ’ ಎಂದೂ ಹೇಳಿದೆ.
ಕೊಳಚೆ ಚರಂಡಿಯಲ್ಲಿ ಬಚ್ಚಿಟ್ಟಿದ್ದ ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಲಾಗಿದೆ. ಪಂಜಾಬ್ ಪೊಲೀಸರು ನಡೆಸುತ್ತಿರುವ ತನಿಖೆಗೆ ಸಹಕಾರ ನೀಡಲಾಗುವುದು ಎಂದೂ ಹೇಳಿಕೆಯಲ್ಲಿ ತಿಳಿಸಿದೆ.
An Army jawan has been arrested for allegedly killing four soldiers at the Bathinda Military Station with a stolen assault rifle, an official said on Monday. Gunner Desai Mohan had earlier claimed that he saw two men with a rifle and an axe near the site of the firing at the military base in Punjab. Later, he confessed to the killings, Bathinda Senior Superintendent of Police Gulneet Singh Khurana said.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 09:49 pm
Mangaluru Staffee
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm