ಬ್ರೇಕಿಂಗ್ ನ್ಯೂಸ್
17-04-23 07:54 pm HK News Desk ದೇಶ - ವಿದೇಶ
ಚಂಡೀಗಢ, ಎ.17: ಪಂಜಾಬ್ನ ಬಟಿಂಡಾ ಸೇನಾ ನೆಲೆಯಲ್ಲಿ ಗುಂಡಿನ ದಾಳಿ ನಡೆಸಿ ನಾಲ್ವರು ಯೋಧರನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಯೋಧರೊಬ್ಬರನ್ನು ಕದ್ದ ರೈಫಲ್ನೊಂದಿಗೆ ಬಂಧಿಸಲಾಗಿದೆ.
ಗನ್ನರ್ ದೇಸಾಯಿ ಮೋಹನ್ ಬಂಧಿತ ಯೋಧ. ಗುಂಡಿನ ದಾಳಿ ನಡೆದಿದ್ದ ಸ್ಥಳದಲ್ಲಿ ರೈಫಲ್ ಮತ್ತು ಕೊಡಲಿ ಹಿಡಿದಿದ್ದ ಇಬ್ಬರನ್ನು ನೋಡಿರುವುದಾಗಿ ಮೋಹನ್ ಈ ಹಿಂದೆ ಹೇಳಿಕೆ ನೀಡಿದ್ದರು.
ನಾಲ್ವರನ್ನು ತಾನೇ ಹತ್ಯೆ ಮಾಡಿರುವುದಾಗಿ ಮೋಹನ್ ತಪ್ಪೊಪ್ಪಿಕೊಂಡಿದ್ದಾರೆ’ ಎಂದು ಬಟಿಂಡಾದ ಪೊಲೀಸ್ ವರಿಷ್ಠಾಧಿಕಾರಿ ಗುಲ್ನೀತ್ ಸಿಂಗ್ ಖುರಾನ ತಿಳಿಸಿದ್ದಾರೆ.
ಕೃತ್ಯದ ಹಿಂದಿನ ಕಾರಣವನ್ನು ಬಹಿರಂಗಪಡಿಸಲಾಗದು. ಹತ್ಯೆಗೀಡಾಗಿರುವ ನಾಲ್ವರ ಯೋಧರೊಂದಿಗೆ ಮೋಹನ್ಗೆ ವೈಯಕ್ತಿಕ ದ್ವೇಷ ಇತ್ತು’ ಎಂದು ಹೇಳಿದ್ದಾರೆ.
ಗುಂಡಿನ ದಾಳಿ ನಡೆಯುವುದಕ್ಕೂ ಎರಡು ದಿನಗಳ ಮೊದಲು ಸೇನಾ ನೆಲೆಯಿಂದ ಇನ್ಸಾಸ್ ರೈಫಲ್ ಹಾಗೂ 28 ಸುತ್ತು ಮದ್ದುಗುಂಡುಗಳು ಕಾಣೆಯಾಗಿದ್ದವು. ಸೇನಾ ನೆಲೆಯಿಂದ ಕದ್ದ ರೈಫಲ್ ಮತ್ತು ಮದ್ದುಗುಂಡುಗಳಿಂದಲೇ ಈ ಕೃತ್ಯಕ್ಕೆ ಬಳಸಲಾಗಿದೆ ಎಂಬುದು ತನಿಖೆಯಿಂದ ತಿಳಿದು ಬಂದಿರುವುದಾಗಿ ಖುರಾನ ಅವರು ಹೇಳಿದ್ದಾರೆ.
ಪೊಲೀಸರು ವಿಚಾರಣೆ ನಡೆಸಿದ ಬಳಿಕ ಫಿರಂಗಿ ದಳದ ಗನ್ನರ್ ದೇಸಾಯಿ ಮೋಹನ್ ಅವರು ತಾನು ಇನ್ಸಾಸ್ ರೈಫಲ್ ಕದ್ದು, ನಾಲ್ವರು ಸಹೋದ್ಯೋಗಿಗಳನ್ನು ಹತ್ಯೆ ಮಾಡಿರುವುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.
ಏಪ್ರಿಲ್ 9ರಂದು ಬೆಳಿಗ್ಗೆ ರೈಫಲ್ ಮತ್ತು ಮದ್ದುಗುಂಡುಗಳನ್ನು ಕದ್ದು, ಅಡಗಿಸಿಟ್ಟಿರುವುದಾಗಿ ಮೋಹನ್ ತಿಳಿಸಿದ್ದಾರೆ’ ಎಂದೂ ಹೇಳಿದೆ.
ಕೊಳಚೆ ಚರಂಡಿಯಲ್ಲಿ ಬಚ್ಚಿಟ್ಟಿದ್ದ ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಲಾಗಿದೆ. ಪಂಜಾಬ್ ಪೊಲೀಸರು ನಡೆಸುತ್ತಿರುವ ತನಿಖೆಗೆ ಸಹಕಾರ ನೀಡಲಾಗುವುದು ಎಂದೂ ಹೇಳಿಕೆಯಲ್ಲಿ ತಿಳಿಸಿದೆ.
An Army jawan has been arrested for allegedly killing four soldiers at the Bathinda Military Station with a stolen assault rifle, an official said on Monday. Gunner Desai Mohan had earlier claimed that he saw two men with a rifle and an axe near the site of the firing at the military base in Punjab. Later, he confessed to the killings, Bathinda Senior Superintendent of Police Gulneet Singh Khurana said.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm