ಬ್ರೇಕಿಂಗ್ ನ್ಯೂಸ್
19-04-23 11:03 pm HK News Desk ದೇಶ - ವಿದೇಶ
ನವದೆಹಲಿ, ಎ.19 : ಐಎನ್ಎಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ್ದೆನ್ನಲಾದ, ಕೊಡಗು ಜಿಲ್ಲೆಯಲ್ಲಿರುವ 11.04 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಾರಿ ನಿರ್ದೇಶನಾಲಯ, “ಕೊಡಗಿನಲ್ಲಿ ಕಾರ್ತಿಯವರು ಒಟ್ಟು ನಾಲ್ಕು ಆಸ್ತಿಗಳನ್ನು ಹೊಂದಿದ್ದು ಅವುಗಳಲ್ಲಿ ಒಂದು ಸ್ಥಿರಾಸ್ತಿಯಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನ್ಯಾಯಾಲಯದಿಂದ ಜಪ್ತಿ ಆದೇಶವನ್ನು ತಂದು ಈ ಕ್ರಮ ಕೈಗೊಳ್ಳಲಾಗಿದೆ’’ ಎಂದು ಹೇಳಿದೆ.
ಐಎನ್ ಎಕ್ಸ್ ಮೀಡಿಯಾ ಪಿ. ಚಿದಂಬರಂ ವಿರುದ್ಧ ಕೇಂದ್ರದಲ್ಲಿ ಸಚಿವರಾಗಿದ್ದಾಗ, ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ವತಿಯಿಂದ ಒಪ್ಪಿಗೆಯ ಪ್ರಮಾಣ ಪತ್ರ ಕೊಡಿಸಲು ಲಂಚ ಪಡೆದಿದ್ದರೆಂಬ ಆರೋಪಗಳು ಕೇಳಿಬಂದಿದ್ದವು. ಆ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ.ಯು, ಚಿದಂಬರಂ ಅವರು ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಿಂದ ತಾವು ಕೋಟ್ಯಂತರ ರೂ. ಲಂಚವನ್ನು ನೇರವಾಗಿ ಪಡೆದಿಲ್ಲ. ಅದನ್ನು ಕಾರ್ತಿ ಚಿದಂಬರಂ ಅವರ ಹೆಸರಿನಲ್ಲಿ ಕೆಲವಾರು ನಕಲಿ ಕಂಪನಿಗಳನ್ನು ತೆರೆದು ಅವುಗಳಲ್ಲಿ ಹೂಡಿಕೆ ಮಾಡಿಸಲಾಗಿದ್ದು, ಆ ಕಂಪನಿಗಳ ಹೆಸರಿನಲ್ಲಿ ಆಸ್ತಿಪಾಸ್ತಿಗಳನ್ನು ಖರೀದಿ ಮಾಡಲಾಗಿದೆ. ಅವುಗಳಲ್ಲಿ ಕೊಡಗಿನಲ್ಲಿರುವ ಆಸ್ತಿಗಳೂ ಸೇರಿವೆ. ಇದುವರೆಗೆ, ಕಾರ್ತಿ ಚಿದಂಬರಂ ಅವರು ಅಡಗಿಸಿಟ್ಟಿದ್ದ 65.88 ಕೋಟಿ ರೂ.ಗಳ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ. ವಿವರಿಸಿದೆ.
Assets worth ₹ 11.04 crore of Congress MP Karti Chidambaram and others have been seized by the Enforcement Directorate for alleged money laundering in the INX Media case. The seized assets include a property in Karnataka's Coorg district, the ED said in a statement.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 04:03 am
Mangaluru Correspondent
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm