ಬ್ರೇಕಿಂಗ್ ನ್ಯೂಸ್
20-04-23 11:02 pm HK News Desk ದೇಶ - ವಿದೇಶ
ಜಮ್ಮು, ಎ.20: ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದ ಜಮ್ಮು ಕಾಶ್ಮೀರದ ಬಾಲಕಿಯ ಶಾಲೆ ಅಭಿವೃದ್ಧಿಗೆ 91 ಲಕ್ಷ ರೂ. ಸರ್ಕಾರದಿಂದ ಮಂಜೂರಾಗಿದೆ. ಸದ್ಯ ಬಾಲಕಿ ಸಂತಸಗೊಂಡಿದ್ದು, ಪ್ರಧಾನಿ ಮೋದಿ ಅವರಿಗೆ ಥ್ಯಾಂಕ್ಯೂ ಹೇಳಿದಿದ್ದಾಳೆ.
ಜಮ್ಮು ಮತ್ತು ಕಾಶ್ಮೀರದ ಕಠುವಾ ಜಿಲ್ಲೆಯ ಲೋಹಾಯ್ ಮಲ್ಹಾರ್ ಎಂಬ ಗ್ರಾಮದ 3ನೇ ತರಗತಿ ವಿದ್ಯಾರ್ಥಿನಿ ಸೀರಾತ್ ನಾಜ್ ಕೆಲ ದಿನಗಳ ಮುನ್ನ ತನ್ನ ಶಾಲೆಯ ದುಃಸ್ಥಿತಿಯ ಬಗ್ಗೆ ಮಾಡಿದ್ದ ವಿಡಿಯೊ ವೈರಲ್ ಆಗಿತ್ತು. ಕೇವಲ 5 ನಿಮಿಷ ಇರುವ ಈ ವಿಡಿಯೋವನ್ನು ಬಾಲಕಿ ತನ್ನ ಪರಿಚಯ ಹಾಗೂ ಮೋದಿ ಅವರ ಕುಶಲೋಪದಿ ವಿಚಾರಿಸಿ ಆರಂಭಿಸುತ್ತಾಳೆ.

''ನನ್ನ ಶಾಲೆ ಎಷ್ಟು ಕೊಳಕಾಗಿದೆ ನೋಡಿ ಮೋದಿ ಜೀ, ಈ ಕಲ್ಲು ಹಾಗೂ ಮಣ್ಣು ಎದ್ದಿರುವ ನೆಲದ ಮೇಲೆ ಕುಳಿತುಕೊಂಡು ನಾವು ಪಾಠ ಆಲಿಸುವುದಾದರೂ ಹೇಗೆ? ಶಾಲೆಯ ನೆಲ ಗಲೀಜಾಗಿದ್ದು, ನಮ್ಮ ಬಟ್ಟೆ ಕೊಳೆಯಾಗುತ್ತದೆ. ಶಾಲೆಯಲ್ಲಿ ಸೂಕ್ತ ಶೌಚಾಲಯವೂ ಇಲ್ಲ. ಹೀಗಾಗಿ, ಈ ಸಮಸ್ಯೆಗೆ ಪರಿಹಾರ ಕೊಡಿ. ದಯವಿಟ್ಟು ನಮಗಾಗಿ ಒಂದು ಒಳ್ಳೆ ಶಾಲೆ ಕಟ್ಟಿಸಿಕೊಡಿ,'' ಎಂದು ಬಾಲಕಿ ಸೀರಾತ್ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಳು.
ಆ ವಿದ್ಯಾರ್ಥಿನಿಯ ಕೋರಿಕೆಗೆ ಪ್ರಧಾನಿ ಕಾರ್ಯಾಲಯ ಸ್ಪಂದಿಸಿದೆ. ಜಮ್ಮು ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ರವಿ ಶಂಕರ್ ಶರ್ಮಾ ಅವರು ಲೋಹಾಯ್ ಹಳ್ಳಿಯಲ್ಲಿರುವ ಬಾಲಕಿಯ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಶಾಲೆ ಅಭಿವೃದ್ಧಿಗೆ 91 ಲಕ್ಷ ರೂ. ಮಂಜೂರು ;
ಶಾಲೆಯನ್ನು ದುರಸ್ತಿ ಮಾಡಿ , ಆಧುನಿಕವಾಗಿ ಅಭಿವೃದ್ಧಿಗೊಳಿಸುವ ಸಲುವಾಗಿ 91 ಲಕ್ಷ ರೂ. ಗಳನ್ನು ಇಲಾಖೆಯು ಮಂಜೂರು ಮಾಡಿದೆ. ಬಾಲಕಿ ಸೀರಾತ್ ನಾಜ್ ಖುಷಿಯಾಗಿದ್ದು, ಮತ್ತೊಂದು ವಿಡಿಯೊ ಹರಿಬಿಟ್ಟಿದ್ದಾಳೆ. ಅದರಲ್ಲಿ, ತಾನು ಐಎಎಸ್ ಅಧಿಕಾರಿಯಾಗಬೇಕು ಎಂದು ಕನಸು ಹೊಂದಿರುವ ಬಗ್ಗೆ ಮಾತನಾಡಿದ್ದಾಳೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾಳೆ.
ಈ ಬಾಲಕಿ ಮಾಡಿದ್ದ ವಿಡಿಯೋವನ್ನು ಮರ್ಮಿಕ್ ನ್ಯೂಸ್ ಎಂಬ ಫೇಸ್ಬುಕ್ ಪೇಜ್ನಲ್ಲಿ ಪ್ರಕಟ ಮಾಡಲಾಗಿತ್ತು. ಈ ವಿಡಿಯೋಗೆ ಸದ್ಯ 2 ಮಿಲಿಯನ್ ಹೆಚ್ಚು ಜನ ವೀಕ್ಷಣೆ ಮಾಡಿದ್ದಾರೆ. ಮಾತ್ರವಲ್ಲದೇ ಒಂದೂವರೆ ಲಕ್ಷ ಮಂದಿ ಮಂದಿ ಈ ವಿಡಿಯೋ ಲೈಕ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
The Jammu and Kashmir government has begun work to modernise the school days after a Class 3 student pleaded with Prime Minister Narendra Modi in a video message to guarantee basic amenities at her school in the Kathua area. Ravi Shankar Sharma, the director of school education in Jammu, visited the public school that is located in the isolated Lohai-Malhar block after seeing Seerat Naaz's video appeal to the prime minister last week, which was extensively circulated on social media.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm