ಬ್ರೇಕಿಂಗ್ ನ್ಯೂಸ್
21-04-23 11:04 pm HK News Desk ದೇಶ - ವಿದೇಶ
ನವದೆಹಲಿ, ಎ.21: ಕೋರ್ಟ್ ಆವರಣದಲ್ಲಿಯೇ ಮಹಿಳೆಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಸಾಕೇತ್ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ವಕೀಲನ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಯೊಬ್ಬ ಮಹಿಳೆ ಮೇಲೆ ಗುಂಡು ಹಾರಿಸಿದ್ದಾನೆ.
ಕೋರ್ಟ್ ಆವರಣದಲ್ಲಿ ಮಹಿಳೆ ಮೇಲೆ ನಾಲ್ಕು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ. ಮಹಿಳೆ ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋರ್ಟ್ನಲ್ಲಿ ಗುಂಡಿನ ದಾಳಿ ನಡೆದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೂಲಗಳ ಪ್ರಕಾರ ಆರೋಪಿಯು ಕ್ರಿಮಿನಲ್ ಹಿನ್ನೆಲೆಯವನಾಗಿದ್ದು ಪೂರ್ವ ದ್ವೇಷದಿಂದ ಕೃತ್ಯ ಎಸಗಿದ್ದಾನೆ.

ಹಣಕಾಸು ವಿಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹಿಳೆ, ಸಾಕೇತ ನ್ಯಾಯಾಲಯಕ್ಕೆ ತೆರಳಿದ್ದರು. ಆಗ ವಕೀಲನ ಸೋಗಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಆಕೆಯ ಮೇಲೆ ಬಂದೂಕಿನಿಂದ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನೈಋತ್ಯ ದಿಲ್ಲಿಯ ದ್ವಾರಕಾದಲ್ಲಿ ಕೆಲವು ದಿನಗಳ ಹಿಂದಷ್ಟೇ ವಕೀಲರೊಬ್ಬರನ್ನು ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ದಾಳಿಕೋರರು ವಕೀಲರ ವೇಷದಲ್ಲಿ ನ್ಯಾಯಾಲಯದ ಆವರಣಕ್ಕೆ ಪ್ರವೇಶಿಸಿದ್ದರು. ಕಳೆದ ವರ್ಷ ರೋಹಿಣಿ ಕೋರ್ಟ್ ರೂಂ ಒಳಗೆ ಗ್ಯಾಂಗ್ಸ್ಟರ್ ಜಿತೇಂದರ್ ಮಾನ್ ಅಲಿಯಾಸ್ ಗೋಗಿಯನ್ನು ಪೊಲೀಸರ ಸಮ್ಮುಖದಲ್ಲಿಯೇ ಗುಂಡು ಹಾರಿಸಿ ಕೊಲ್ಲಲಾಗಿತ್ತು. ವಕೀಲರ ದಿರಿಸಿನಲ್ಲಿ ಬಂದಿದ್ದ ಇಬ್ಬರು ಹಂತಕರು, ಸೆ.24ರಂದು ಗೋಗಿ ಮೇಲೆ ಹಲವು ಸುತ್ತು ಗುಂಡುಗಳನ್ನು ಹಾರಿಸಿದ್ದರು. ಪ್ರತಿದಾಳಿ ನಡೆಸಿದ್ದ ಪೊಲೀಸರು, ಇಬ್ಬರೂ ದಾಳಿಕೋರರನ್ನು ಸ್ಥಳದಲ್ಲಿಯೇ ಕೊಂದಿದ್ದರು.
A woman was injured after being shot inside a court complex in Delhi this morning, the police have said. She was immediately taken to the hospital by a police officer and the accused, who was dressed as a lawyer, has been arrested, they added. The accused has been identified as Kameshwar Singh, police said. The incident took place in the district court in Saket in south Delhi.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm