ಬ್ರೇಕಿಂಗ್ ನ್ಯೂಸ್
23-04-23 09:46 pm HK News Desk ದೇಶ - ವಿದೇಶ
ತಿರುವನಂತಪುರಂ, ಎ.23 : ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸೋಮವಾರ ಕೇರಳಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಕೇರಳ ಪ್ರವಾಸದ ವೇಳೆ ಆತ್ಮಹತ್ಯಾ ದಾಳಿ ನಡೆಸುವುದಾಗಿ ಅಪರಿಚಿತ ವ್ಯಕ್ತಿ ಹೆಸರಿನಲ್ಲಿ ಬಿಜೆಪಿ ಕಚೇರಿಗೆ ಬೆದರಿಕೆ ಪತ್ರ ರವಾನಿಸಲಾಗಿತ್ತು. ಜೊತೆಗೆ ಪ್ರಧಾನಿ ಭದ್ರತೆಗೆ ನಿಯೋಜಿಸಲಾಗಿದ್ದ ಭದ್ರತಾ ವಿವರವೂ ಸೋರಿಕೆಯಾಗಿದ್ದು, ಇದು ರಾಜ್ಯ ಪೊಲೀಸರಿಂದ ಆದ ಗಂಭೀರ ಭದ್ರತಾ ಲೋಪ ಎಂಬ ಟೀಕೆ ವ್ಯಕ್ತವಾಗಿತ್ತು. ಇದೀಗ ಪತ್ರ ಬರೆದಿದ್ದ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ. ಕೊಚ್ಚಿ ನಗರದಲ್ಲಿ ವ್ಯಾಪಾರಿಯಾಗಿರುವ ಕ್ಸೇವಿಯರ್ ಎಂಬಾತ ಬೇರೊಬ್ಬನ ಹೆಸರಿನಲ್ಲಿ ಪ್ರಧಾನಿ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಪತ್ರ ಕಳುಹಿಸಿದ್ದ ಎಂದು ತಿಳಿದುಬಂದಿದೆ. ಆತನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಲಯಾಳಂನಲ್ಲಿ ಬರೆದ ಪತ್ರದಲ್ಲಿ ತಾನು ಕೊಚ್ಚಿ ನಿವಾಸಿ ಎಂದು ಬರೆದಿದ್ದ. ಮೋದಿಗೆ ಆತ್ಮಾಹುತಿ ದಾಳಿ ಮಾಡುವುದಾಗಿ ಬರೆದ ಪತ್ರವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ಅವರ ಕಚೇರಿಗೆ ಕಳುಹಿಸಲಾಗಿತ್ತು. ಅವರು ಅದನ್ನು ಕಳೆದ ವಾರ ಪೊಲೀಸರ ಕೈಗೆ ನೀಡಿದ್ದರು.
ಪತ್ರದ ಬೆನ್ನು ಹತ್ತಿ ತನಿಖೆ ನಡೆಸಿದ ಪೊಲೀಸರು ಆರೋಪಿ ಕ್ಸೇವಿಯರ್ನನ್ನು ಬಂಧಿಸಿದ್ದಾರೆ. ವೈಯಕ್ತಿಕ ದ್ವೇಷದಿಂದ ಕೊಚ್ಚಿ ನಿವಾಸಿ ಎನ್.ಜೆ. ಜಾನಿ ಅವರ ಹೆಸರಿನಲ್ಲಿ ಆರೋಪಿ ಪತ್ರ ಬರೆದಿದ್ದ. ಪೊಲೀಸರು ಜಾನಿಯನ್ನು ಬಂಧಿಸಬೇಕೆಂದು ಆತ ಬಯಸಿದ್ದ ಎಂದು ನಗರ ಪೊಲೀಸ್ ಕಮಿಷನರ್ ಕೆ. ಸೇತುರಾಮನ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಏಪ್ರಿಲ್ 24 ಮತ್ತು 25ರಂದು ಪ್ರಧಾನಿ ಕೇರಳಕ್ಕೆ ಬರುತ್ತಿದ್ದು ಭದ್ರತಾ ವ್ಯವಸ್ಥೆಯ ಭಾಗವಾಗಿ ಕೊಚ್ಚಿ ನಗರದಲ್ಲಿ 2,060 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರಧಾನಿ ಅವರ ರೋಡ್ ಶೋ ವೇಳೆ ಸುಮಾರು 20 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ನಗರ ಪೊಲೀಸ್ ಕಮಿಷನರ್ ಕೆ. ಸೇತುರಾಮನ್ ತಿಳಿಸಿದ್ದಾರೆ. ,
ಮೋದಿ ಅವರು ಮಂಗಳವಾರ ಬೆಳಗ್ಗೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಲಿದ್ದಾರೆ. ಬಳಿಕ ಸೆಂಟ್ರಲ್ ಸ್ಟೇಡಿಯಂನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ 4 ರೈಲ್ವೆ ಯೋಜನೆಗಳನ್ನು ಉದ್ಘಾಟಿಸಲಿರುವ ಮೋದಿ, ಟೆಕ್ನೋ ಸಿಟಿಗೆ ಶಂಕುಸ್ಥಾಪನೆ ಮತ್ತು ಕೊಚ್ಚಿ ವಾಟರ್ ಮೆಟ್ರೋಗೂ ಚಾಲನೆ ನೀಡಲಿದ್ದಾರೆ.
The Kerala Police on Sunday arrested a man who allegedly sent a letter threatening a suicide bomb attack on Prime Minister Narendra Modi who will be visiting the state on April 24 and 25 to take part in various programmes. Kochi resident Xavier, who runs a business in the city, was arrested by police for allegedly writing the threatening letter in the name of another person.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm