ಬ್ರೇಕಿಂಗ್ ನ್ಯೂಸ್
25-04-23 06:29 pm HK News Desk ದೇಶ - ವಿದೇಶ
ತೃಶ್ಯೂರು, ಎ.25: ಮೊಬೈಲ್ ಫೋನ್ ಸ್ಫೋಟಗೊಂಡು ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ಕೇರಳದ ತೃಶ್ಶೂರು ಜಿಲ್ಲೆಯ ತಿರುವಲಮಲ ಎಂಬಲ್ಲಿ ನಡೆದಿದೆ.
ಮೂರನೇ ಕ್ಲಾಸ್ ಓದುತ್ತಿದ್ದ ಆದಿತ್ಯಶ್ರೀ ಎಂಬ ಬಾಲಕಿ ಮೃತಪಟ್ಟವಳು. ನಿನ್ನೆ ರಾತ್ರಿ 10.30ರ ಸುಮಾರಿಗೆ ತನ್ನ ಮನೆಯಲ್ಲಿ ಅಜ್ಜಿಯ ಜೊತೆಗೆ ಕುಳಿತು ಮೊಬೈಲಿನಲ್ಲಿ ವಿಡಿಯೋ ನೋಡುತ್ತಿದ್ದಾಗಲೇ ಮೊಬೈಲ್ ಸ್ಫೋಟಗೊಂಡಿದೆ. ಮುಖ ಮತ್ತು ಕೈಗಳಿಗೆ ಗಂಭೀರ ಸುಟ್ಟು ಗಾಯಗೊಂಡಿದ್ದ ಬಾಲಕಿಯನ್ನು ಕೂಡಲೇ ಮನೆಯವರು ಆಸ್ಪತ್ರೆಗೆ ತಲುಪಿಸಿದ್ದರು. ಅಷ್ಟರಲ್ಲಿ ಬಾಲಕಿ ಸಾವು ಕಂಡಿದ್ದಾಳೆ.
ಹೆಚ್ಚು ಹೊತ್ತು ವಿಡಿಯೋ ನೋಡುತ್ತಿದ್ದರಿಂದ ಬ್ಯಾಟರಿ ಬಿಸಿಯಾಗಿ ಮೊಬೈಲ್ ಸ್ಫೋಟಗೊಂಡಿದೆ ಎನ್ನಲಾಗುತ್ತಿದೆ. ಫಾರೆನ್ಸಿಕ್ ತಜ್ಞರು ಪರಿಶೀಲನೆ ನಡೆಸಿದ್ದು, ಹೇಗೆ ಬ್ಲಾಸ್ಟ್ ಆಯ್ತು, ಸ್ಫೋಟಗೊಂಡಿದ್ದೇ ಬಾಲಕಿ ಸಾವಿಗೆ ಕಾರಣವೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಆ ಮೊಬೈಲ್ ಫೋನನ್ನು ಮೂರು ವರ್ಷಗಳ ಹಿಂದೆ ಖರೀದಿಸಿದ್ದು, ಒಂದು ವರ್ಷದ ಹಿಂದೆ ಅದಕ್ಕೆ ಬ್ಯಾಟರಿ ಹಾಕಲಾಗಿತ್ತು.
ನಿನ್ನೆ ರಾತ್ರಿ ಸ್ಫೋಟಗೊಂಡ ಸಂದರ್ಭದಲ್ಲಿ ಅಜ್ಜಿ ಊಟ ತರಲೆಂದು ಒಳಗೆ ಹೋಗಿದ್ದರು. ಈ ವೇಳೆ, ಮೊಬೈಲ್ ಸ್ಫೋಟ ಆಗಿದ್ದು, ಮುಖ ಮತ್ತು ಕೈಗಳಿಗೆ ತೀವ್ರ ಗಾಯವಾಗಿತ್ತು. ಅಂಗೈ ಪೂರ್ತಿ ಒಡೆದು ಬಿರುಕು ಬಿಟ್ಟಿತ್ತು. ಅಷ್ಟರ ಮಟ್ಟಿಗೆ ಸ್ಫೋಟ ಆಗಿದ್ದು, ಇದರ ಆಘಾತದಿಂದ ಬಾಲಕಿ ಸಾವನ್ನಪ್ಪಿರುವ ಸಾಧ್ಯತೆಯಿದೆ. ಬಾಲಕಿಯ ತಂದೆ ಅಶೋಕ್ ಕುಮಾರ್ ಪಜಯನ್ನೂರು ಬ್ಲಾಕ್ ಪಂಚಾಯತ್ ಮಾಜಿ ಸದಸ್ಯರಾಗಿದ್ದು, ಬಾಲಕಿಯ ಸಾವು ಭಾರೀ ದಿಗ್ಭ್ರಾಂತಿ ಸೃಷ್ಟಿಸಿದೆ.
An eight-year-old girl was killed after a mobile phone exploded in her hand while she was watching a video at her house in Thiruvilwamala here. The deceased is Adithya Sree, daughter of a former member of Pazhayannur block panchayat Ashok Kumar and Soumya.
21-07-25 05:56 pm
HK News Desk
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm