ಬ್ರೇಕಿಂಗ್ ನ್ಯೂಸ್
25-04-23 06:29 pm HK News Desk ದೇಶ - ವಿದೇಶ
ತೃಶ್ಯೂರು, ಎ.25: ಮೊಬೈಲ್ ಫೋನ್ ಸ್ಫೋಟಗೊಂಡು ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ಕೇರಳದ ತೃಶ್ಶೂರು ಜಿಲ್ಲೆಯ ತಿರುವಲಮಲ ಎಂಬಲ್ಲಿ ನಡೆದಿದೆ.
ಮೂರನೇ ಕ್ಲಾಸ್ ಓದುತ್ತಿದ್ದ ಆದಿತ್ಯಶ್ರೀ ಎಂಬ ಬಾಲಕಿ ಮೃತಪಟ್ಟವಳು. ನಿನ್ನೆ ರಾತ್ರಿ 10.30ರ ಸುಮಾರಿಗೆ ತನ್ನ ಮನೆಯಲ್ಲಿ ಅಜ್ಜಿಯ ಜೊತೆಗೆ ಕುಳಿತು ಮೊಬೈಲಿನಲ್ಲಿ ವಿಡಿಯೋ ನೋಡುತ್ತಿದ್ದಾಗಲೇ ಮೊಬೈಲ್ ಸ್ಫೋಟಗೊಂಡಿದೆ. ಮುಖ ಮತ್ತು ಕೈಗಳಿಗೆ ಗಂಭೀರ ಸುಟ್ಟು ಗಾಯಗೊಂಡಿದ್ದ ಬಾಲಕಿಯನ್ನು ಕೂಡಲೇ ಮನೆಯವರು ಆಸ್ಪತ್ರೆಗೆ ತಲುಪಿಸಿದ್ದರು. ಅಷ್ಟರಲ್ಲಿ ಬಾಲಕಿ ಸಾವು ಕಂಡಿದ್ದಾಳೆ.
ಹೆಚ್ಚು ಹೊತ್ತು ವಿಡಿಯೋ ನೋಡುತ್ತಿದ್ದರಿಂದ ಬ್ಯಾಟರಿ ಬಿಸಿಯಾಗಿ ಮೊಬೈಲ್ ಸ್ಫೋಟಗೊಂಡಿದೆ ಎನ್ನಲಾಗುತ್ತಿದೆ. ಫಾರೆನ್ಸಿಕ್ ತಜ್ಞರು ಪರಿಶೀಲನೆ ನಡೆಸಿದ್ದು, ಹೇಗೆ ಬ್ಲಾಸ್ಟ್ ಆಯ್ತು, ಸ್ಫೋಟಗೊಂಡಿದ್ದೇ ಬಾಲಕಿ ಸಾವಿಗೆ ಕಾರಣವೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಆ ಮೊಬೈಲ್ ಫೋನನ್ನು ಮೂರು ವರ್ಷಗಳ ಹಿಂದೆ ಖರೀದಿಸಿದ್ದು, ಒಂದು ವರ್ಷದ ಹಿಂದೆ ಅದಕ್ಕೆ ಬ್ಯಾಟರಿ ಹಾಕಲಾಗಿತ್ತು.
ನಿನ್ನೆ ರಾತ್ರಿ ಸ್ಫೋಟಗೊಂಡ ಸಂದರ್ಭದಲ್ಲಿ ಅಜ್ಜಿ ಊಟ ತರಲೆಂದು ಒಳಗೆ ಹೋಗಿದ್ದರು. ಈ ವೇಳೆ, ಮೊಬೈಲ್ ಸ್ಫೋಟ ಆಗಿದ್ದು, ಮುಖ ಮತ್ತು ಕೈಗಳಿಗೆ ತೀವ್ರ ಗಾಯವಾಗಿತ್ತು. ಅಂಗೈ ಪೂರ್ತಿ ಒಡೆದು ಬಿರುಕು ಬಿಟ್ಟಿತ್ತು. ಅಷ್ಟರ ಮಟ್ಟಿಗೆ ಸ್ಫೋಟ ಆಗಿದ್ದು, ಇದರ ಆಘಾತದಿಂದ ಬಾಲಕಿ ಸಾವನ್ನಪ್ಪಿರುವ ಸಾಧ್ಯತೆಯಿದೆ. ಬಾಲಕಿಯ ತಂದೆ ಅಶೋಕ್ ಕುಮಾರ್ ಪಜಯನ್ನೂರು ಬ್ಲಾಕ್ ಪಂಚಾಯತ್ ಮಾಜಿ ಸದಸ್ಯರಾಗಿದ್ದು, ಬಾಲಕಿಯ ಸಾವು ಭಾರೀ ದಿಗ್ಭ್ರಾಂತಿ ಸೃಷ್ಟಿಸಿದೆ.
An eight-year-old girl was killed after a mobile phone exploded in her hand while she was watching a video at her house in Thiruvilwamala here. The deceased is Adithya Sree, daughter of a former member of Pazhayannur block panchayat Ashok Kumar and Soumya.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm