ಬ್ರೇಕಿಂಗ್ ನ್ಯೂಸ್
27-10-20 08:31 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 27: ಜಮ್ಮು ಕಾಶ್ಮೀರದಲ್ಲಿ ಸಂವಿಧಾನದ 370 ಮತ್ತು 35 ಎ ಕಾಯ್ದೆ ರದ್ದಾದ ಬಳಿಕ ಬದಲಾವಣೆಯ ಗಾಳಿ ಬೀಸಲು ಆರಂಭಿಸಿದೆ. ಇದೀಗ ಆ ರಾಜ್ಯದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಕುದುರಿಸುವ ಸಲುವಾಗಿ ಕೇಂದ್ರ ಗೃಹ ಸಚಿವಾಲಯ ಮಹತ್ವದ ಆದೇಶ ಹೊರಡಿಸಿದ್ದು, ದೇಶದ ಯಾವುದೇ ಭಾಗದ ಜನ ಜಮ್ಮು ಕಾಶ್ಮೀರದಲ್ಲಿ ಭೂಮಿ ಖರೀದಿಸಲು ಅವಕಾಶ ನೀಡಿದೆ.
ಕಳೆದ ಬಾರಿ ಜಮ್ಮು ಕಾಶ್ಮೀರದ ವಿವಾದಾತ್ಮಕ ಕಾಯ್ದೆ 370 ಮತ್ತು 35 ಎ ಕಾಯ್ದೆಗಳನ್ನು ರದ್ದುಪಡಿಸಿದ ಬಳಿಕ ಆಸ್ತಿ ಖರೀದಿಗೆ ಅವಕಾಶ ಮುಕ್ತ ಎಂದು ಹೇಳಲಾಗಿತ್ತು. ಆದರೆ, ಅದಕ್ಕೆ ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಿರಲಿಲ್ಲ. ಪ್ರವಾಸೋದ್ಯಮ ಉತ್ತೇಜನಕ್ಕೂ ಯಾವುದೇ ಹೊಸ ಯೋಜನೆ ಪ್ರಕಟಿಸಿರಲಿಲ್ಲ. ಇದೀಗ ಜಮ್ಮು ಕಾಶ್ಮೀರದಲ್ಲಿಯೂ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ -2016 (ರೇರಾ) ಅನ್ನು ಅಳವಡಿಸಿ ಕೇಂದ್ರ ಸರಕಾರ ಆದೇಶ ಮಾಡಿದೆ. ಅಲ್ಲದೆ, ಆಸ್ತಿ ಖರೀದಿ ವಿಚಾರದಲ್ಲಿ ನಿಯಮಗಳನ್ನು ಸರಳಗೊಳಿಸಿದೆ.
ಇದರೊಂದಿಗೆ ತಕ್ಷಣದಿಂದಲೇ ಜಮ್ಮು ಕಾಶ್ಮೀರದಲ್ಲಿ ರೇರಾ ಕಾಯ್ದೆ ಜಾರಿಗೆ ಬರಲಿದ್ದು, ಯಾರು ಬೇಕಾದರೂ ಆಸ್ತಿ ಖರೀದಿಸಿ ವಾಸ ಮಾಡಬಹುದು. ಅಲ್ಲದೆ, ಅಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ತೀವ್ರ ಗತಿ ಪಡೆಯಲಿದೆ. ಈ ಹಿಂದೆ ಆರ್ಟಿಕಲ್ 35 ಎ ಕಾರಣದಿಂದ ಜಮ್ಮು ಕಾಶ್ಮೀರ ಹೊರತುಪಡಿಸಿ ದೇಶದ ಇತರೇ ಪ್ರಜೆಗಳು ಆಸ್ತಿ ಖರೀದಿಸಲು ಅವಕಾಶ ಇರಲಿಲ್ಲ.
ದೇಶದ ಇತರ ಪ್ರಜೆಗಳಿಗೂ ಆಸ್ತಿ ಖರೀದಿಸಲು ಕೇಂದ್ರ ಅವಕಾಶ ನೀಡಿರುವುದನ್ನು ಜಮ್ಮು ಕಾಶ್ಮೀರದ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ವಿರೋಧಿಸಿದ್ದಾರೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಜಮ್ಮು ಕಾಶ್ಮೀರವನ್ನು ಕೇಂದ್ರ ಮಾರಾಟಕ್ಕಿಟ್ಟಿದೆ. ಭೂಮಿಯ ಹಸ್ತಾಂತರ ಪ್ರಕ್ರಿಯೆ ಸರಳಗೊಳಿಸಿದ್ದರಿಂದ ಬಡವರಿಗೆ ಕಷ್ಟವಾಗಲಿದೆ ಎಂದಿದ್ದಾರೆ.
In a significant move, the Centre has paved the way for people from outside Jammu and Kashmir to buy land in the Union territory (UT) by amending several laws.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm