ಬ್ರೇಕಿಂಗ್ ನ್ಯೂಸ್
06-05-23 12:18 pm HK News Desk ದೇಶ - ವಿದೇಶ
ಗುವಾಹಟಿ,ಮೇ 6 : ಮಣಿಪುರ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಂಫಾಲ್ನಲ್ಲಿ ನಿಯೋಜನೆಗೊಂಡ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.
"ಇಂಫಾಲ್ನಲ್ಲಿ ತೆರಿಗೆ ಸಹಾಯಕರಾದ Sh. ಲೆಟ್ಮಿಂಥಾಂಗ್ ಹಾಕಿಪ್ ಅವರ ಸಾವಿಗೆ ಕಾರಣವಾದ ಹಿಂಸಾಚಾರದ ಭೀಕರ ಕೃತ್ಯವನ್ನು ಸಂಘ ಬಲವಾಗಿ ಖಂಡಿಸುತ್ತದೆ. ಯಾವುದೇ ಸಿದ್ಧಾಂತ ಕರ್ತವ್ಯದಲ್ಲಿದ್ದ ಅಮಾಯಕ ಅಧಿಕಾರಿಯ ಹತ್ಯೆಯನ್ನು ಸಮರ್ಥಿಸುವುದಿಲ್ಲ" ಇತ್ತೀಚಿನ ಟ್ವೀಟ್ನಲ್ಲಿ ಸಂಘ ಹೇಳಿದೆ.
ಇನ್ನು ಮಣಿಪುರ ಹಿಂಸಾಚಾರವನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ 355ನೇ ವಿಧಿ ಜಾರಿಗೊಳಿಸಿ, ಭದ್ರತೆಯ ಸಂಪೂರ್ಣ ಹೊಣೆ ವಹಿಸಿಕೊಂಡಿದೆ.
355ನೇ ವಿಧಿಯು ಆಂತರಿಕ ಅಡಚಣೆಗಳು ಮತ್ತು ಬಾಹ್ಯ ಆಕ್ರಮಣಗಳ ವಿರುದ್ಧ ರಾಜ್ಯವನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಕೇಂದ್ರಕ್ಕೆ ಅಧಿಕಾರ ನೀಡುತ್ತದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಣಿಪುರದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲು ಕರ್ನಾಟಕ ಚುನಾವಣಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

ಮಣಿಪುರ ಸರ್ಕಾರವು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಗುಪ್ತಚರ) ಅಶುತೋಷ್ ಸಿನ್ಹಾ ಅವರನ್ನು "ರಾಜ್ಯದ ಪರಿಸ್ಥಿತಿ ನಿಯಂತ್ರಿಸಲು ಮತ್ತು ಸಹಜ ಸ್ಥಿತಿಗೆ ತರಲು" ಒಟ್ಟಾರೆ ಕಾರ್ಯಾಚರಣೆಯ ಕಮಾಂಡರ್ ಆಗಿ ನೇಮಿಸಿದೆ.
ಅಶುತೋಷ್ ಸಿನ್ಹಾ ಅವರು ಭದ್ರತಾ ಸಲಹೆಗಾರರಾಗಿ ನೇಮಕಗೊಂಡಿರುವ ಮಾಜಿ ಸಿಆರ್ಪಿಎಫ್ ಮುಖ್ಯಸ್ಥ ಕುಲದೀಪ್ ಸಿಂಗ್ ಅವರಿಗೆ ವರದಿ ನೀಡಲಿದ್ದಾರೆ.
ರಾಜ್ಯ ರಾಜಧಾನಿ ಇಂಫಾಲ್ನಲ್ಲಿ ಗುರುವಾರ ದುಷ್ಕರ್ಮಿಗಳು ನಡೆಸಿದ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಬಿಜೆಪಿ ಶಾಸಕ ವುಂಗ್ಜಾಗಿನ್ ವಾಲ್ಟೆ ಅವರನ್ನು ಚಿಕಿತ್ಸೆಗಾಗಿ ಶುಕ್ರವಾರ ದೆಹಲಿಗೆ ಕರೆದೊಯ್ಯಲಾಗಿದೆ.

ಹಿಂಸಾಚಾರ ಪೀಡಿತ ಜಿಲ್ಲೆಗಳಲ್ಲಿ ಕರ್ಫ್ಯೂ ಮುಂದುವರಿದಿದ್ದು, ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮಣಿಪುರಕ್ಕೆ ಪ್ರಯಾಣಿಸುವ ಎರಡು ರೈಲುಗಳನ್ನು ಅಸ್ಸಾಂನಲ್ಲಿ ರೈಲ್ವೆ ಅಧಿಕಾರಿಗಳು ಅಲ್ಪಾವಧಿಯವರೆಗೆ ನಿಲ್ಲಿಸಿದ್ದಾರೆ.
ಶುಕ್ರವಾರ ಕೆಲ ಸಣ್ಣಪುಟ್ಟ ಹಿಂಸಾಚಾರದ ಘಟನೆಗಳು ನಡೆದಿವೆ. ಆದರೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸೇನೆ ತಿಳಿಸಿದೆ.
IRS Association strongly condemns the dastardly act of violence resulting in the death of Sh. Letminthang Haokip, Tax Assistant in Imphal. No cause or ideology can justify the killing of an innocent public servant on duty. Our thoughts are with his family in this difficult hour. pic.twitter.com/MQgeCDO95O
— IRS Association (@IRSAssociation) May 5, 2023
An Income Tax department official posted in Imphal was dragged out of his official residence and killed during the current spate of violence in Manipur, the Indian Revenue Service (IRS) Association said on Friday. In a tweet, the association strongly condemned "the dastardly act of violence resulting in the death of Sh. Letminthang Haokip, Tax Assistant in Imphal".
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm