ಡಿಕೆಶಿಗೆ ಕೈ ತಪ್ಪಿದ ಮುಖ್ಯಮಂತ್ರಿ ಸ್ಥಾನ ; ಈ ಬೆಳವಣಿಗೆ ನನಗೆ ಖುಷಿ ನೀಡಿಲ್ಲ ಎಂದ ತಮ್ಮ ಸುರೇಶ್, ಪಕ್ಷದ ಹಿತಾಸಕ್ತಿ ಕಾಪಾಡುವ ಕಾರಣಕ್ಕೆ ನಾನು ಒಪ್ಪಿಕೊಂಡಿದ್ದೇನೆ ಅಷ್ಟೇ

18-05-23 02:14 pm       HK News Desk   ದೇಶ - ವಿದೇಶ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಹುದ್ದೆ ಕೈತಪ್ಪಿದೆ. ಹೈಕಮಾಂಡ್‌ ಮಾತಿಗೆ ಮನವೊಲಿದು ಡಿಸಿಎಂ ಸ್ಥಾನವನ್ನು ಡಿಕೆಶಿ ಒಪ್ಪಿಕೊಂಡಿದ್ದಾರೆ.

ಹೊಸದಿಲ್ಲಿ, ಮೇ 18: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಹುದ್ದೆ ಕೈತಪ್ಪಿದೆ. ಹೈಕಮಾಂಡ್‌ ಮಾತಿಗೆ ಮನವೊಲಿದು ಡಿಸಿಎಂ ಸ್ಥಾನವನ್ನು ಡಿಕೆಶಿ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ಡಿಕೆಶಿ ಸಹೋದರ ಡಿಕೆ ಸುರೇಶ್‌ ಬೇಸರ ವ್ಯಕ್ತಪಡಿಸಿದ್ದು, ಈ ಬೆಳವಣಿಗೆ ನನಗೆ ಸಂಪೂರ್ಣ ಖುಷಿ ನೀಡಿಲ್ಲ. ನಾವು ಕಾದು ನೋಡುತ್ತೇವೆ ಎಂದು ಹೇಳಿದ್ದಾರೆ.

ದಿಲ್ಲಿಯಲ್ಲಿ ಎಎನ್‌ಐ ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ಅವರು, ಈ ಬೆಳವಣಿಗೆಯಿಂದ ನನಗೆ ಸಂಪೂರ್ಣ ಖುಷಿಯಾಗಿಲ್ಲ. ಆದರೆ, ಕರ್ನಾಟಕದ ಜನರ ಹಿತಾಸಕ್ತಿಗಾಗಿ ಹಾಗೂ ನಾವು ನೀಡಿದ ಭರವಸೆಗಳನ್ನು ಈಡೇರಿಸಬೇಕಾಗಿದೆ. ಆದ್ದರಿಂದ ಡಿಕೆ ಶಿವಕುಮಾರ್‌ ಮನವೊಲಿದು ಹೈಕಮಾಂಡ್‌ ಸೂತ್ರಕ್ಕೆ ಒಪ್ಪಿದ್ದಾರೆ. ಮುಂದೆ ನೋಡೋಣ, ಇನ್ನು ಬಹಳ ದೂರ ಸಾಗಬೇಕಿದೆ ಎಂದು ಹೇಳಿದರು.

kpcc president dk shivakumar invited bjp rebel mlas to congress | ಕೈ ತೊರೆದು  ಕಮಲ ಸೇರಿದವರಿಗೆ ಮರಳಿ ಕಾಂಗ್ರೆಸ್ ಗೆ ಆಹ್ವಾನ ನೀಡಿದ ಡಿಕೆಶಿ! Karnataka News in  Kannada

ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗಬೇಕು ಎಂದು ಬಯಸಿದ್ದೆ. ಆದರೆ, ಅದು ಆಗಲಿಲ್ಲ. ನಾವು ಕಾದು ನೋಡುತ್ತೇವೆ ಎಂದು ಸಂಸದ ಡಿಕೆ ಸುರೇಶ್‌ ಬೇಸರ ಹೊರಹಾಕಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಕೂಡ ಪಕ್ಷದ ಹೈಕಮಾಂಡ್‌ ನಿರ್ಧಾರ ತೆಗೆದುಕೊಂಡಿದೆ. ಪಕ್ಷದ ಹಿತಾಸಕ್ತಿ ಕಾಪಾಡುವ ಕಾರಣಕ್ಕೆ ನಾನು ಒಪ್ಪಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

After the Congress party high command choose DK Shivakumar as the Deputy Chief Minister of Karnataka, Congress MP DK Suresh said that he was not happy with the decision and wished for the chief ministerial post for his brother. The Congress is all set to name Siddaramaiah as the next chief minister of Karnataka, and a formal announcement on the same is set to be made at a meeting of the Congress Legislature Party (CLP) meeting on Thursday evening here in Bengaluru.