ಬ್ರೇಕಿಂಗ್ ನ್ಯೂಸ್
18-05-23 08:35 pm HK News Desk ದೇಶ - ವಿದೇಶ
ನಾಗಪುರ, ಮೇ 18: ಗುಜರಾತ್ ಮೂಲದ ವ್ಯಕ್ತಿಯೊಬ್ಬ ತನ್ನನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಪಿಎ ಎಂದು ಹೇಳಿಕೊಂಡು ಮಹಾರಾಷ್ಟ್ರದಲ್ಲಿ ಬಿಜೆಪಿ ಶಾಸಕರನ್ನು ಸಂಪರ್ಕಿಸಿ, ಸಚಿವ ಸ್ಥಾನ ಕೊಡಿಸುತ್ತೇನೆಂದು ಹೇಳಿ ಹಣ ಪೀಕಿಸಲು ಯತ್ನಿಸಿದ ಘಟನೆ ನಡೆದಿದ್ದು, ಆರೋಪಿಯನ್ನು ನಾಗಪುರ ಪೊಲೀಸರು ಬಂಧಿಸಿದ್ದಾರೆ.
ಗುಜರಾತಿನ ಮೋರ್ಬಿ ಜಿಲ್ಲೆಯ ನೀರಜ್ ಸಿಂಗ್ ರಾಥೋಡ್ ಬಂಧಿತ ವ್ಯಕ್ತಿ. ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರಕಾರದಲ್ಲಿ ಸಚಿವ ಸ್ಥಾನ ಕೊಡಿಸುತ್ತೇನೆಂದು ಹೇಳಿ ನೀರಜ್ ಸಿಂಗ್ ಹಲವು ಬಿಜೆಪಿ ಶಾಸಕರನ್ನು ಸಂಪರ್ಕಿಸಿದ್ದು ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿದ್ದ. ಬಿಜೆಪಿ ಶಾಸಕರಾದ ವಿಕಾಸ್ ಕಾಂಭರೆ, ತೇಕ್ ಚಂದ್ ಸಾವರ್ಕರ್, ತಾನಾಜಿ ಮುಟ್ಕುಲೆ, ನಾರಾಯಣ್ ಕುಛೆ ಇವರನ್ನು ಸಂಪರ್ಕಿಸಿದ್ದ ನೀರಜ್ ಸಿಂಗ್, ಮುಂದಿನ ಬಾರಿ ಸಂಪುಟ ವಿಸ್ತರಣೆಯ ವೇಳೆ ಸಚಿವ ಸ್ಥಾನ ಕೊಡಿಸುತ್ತೇನೆಂದು ನಂಬಿಸಿದ್ದ. ಅಲ್ಲದೆ, ಅದಕ್ಕಾಗಿ ಲಕ್ಷಾಂತರ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ.
ಇದಲ್ಲದೆ, ಫೋನಲ್ಲಿ ಜೆಪಿ ನಡ್ಡಾ ರೀತಿಯಲ್ಲೇ ಶಾಸಕರ ಜೊತೆಗೆ ಮಾತನಾಡುವಂತೆಯೂ ನೀರಜ್ ಸಿಂಗ್ ಮಾಡಿದ್ದ. ಶಾಸಕ ವಿಕಾಸ್ ಕಾಂಬರೆ ಅವರಿಗೆ ನಾಲ್ಕು ಬಾರಿ ಫೋನ್ ಮಾಡಿದ್ದು, ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಸ್ಥಾನ ಕೊಡಿಸುವುದಾಗಿ ಹೇಳಿದ್ದ. ಪದೇ ಪದೇ ಫೋನ್ ಬಂದಿದ್ದರಿಂದ ಸಂಶಯಗೊಂಡ ವಿಕಾಸ್ ಕಾಂಬರೆ, ನಾಗಪುರ ಪೊಲೀಸರಿಗೆ ದೂರು ಕೊಟ್ಟಿದ್ದರು. 5-6 ಬಾರಿ ಫೋನಾಯಿಸಿ, ಗುಜರಾತಿನಲ್ಲಿ ದೊಡ್ಡ ಕಾರ್ಯಕ್ರಮ ನಡೆಸಲು ಹಣ ಎರೇಂಜ್ ಮಾಡುವಂತೆ ಜೆಪಿ ನಡ್ಡಾ ಪಿಎ ಹೆಸರಲ್ಲಿ ಕರೆ ಮಾಡಿದ್ದಾಗಿ ದೂರಿನಲ್ಲಿ ತಿಳಿಸಿದ್ದರು. ತನಿಖೆ ನಡೆಸಿದ ಪೊಲೀಸರು ಗುಜರಾತಿನ ನಕಲಿ ಪಿಎ ವ್ಯಕ್ತಿಯನ್ನು ಬಂಧಿಸಿದ್ದಾರೆ.
The man from Gujarat's Ahmedabad arrested for allegedly taking money from three MLAs in Maharashtra on the promise of ministerial berths in the Eknath Shinde-led state government is being brought to Nagpur by the police for further action, a senior official said on Wednesday.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm