ಬ್ರೇಕಿಂಗ್ ನ್ಯೂಸ್
29-10-20 08:55 pm Headline Karnataka News Network ದೇಶ - ವಿದೇಶ
ಪ್ಯಾರಿಸ್, ಅಕ್ಟೋಬರ್ 29 : ಯುರೋಪ್ ರಾಷ್ಟ್ರಗಳಲ್ಲಿ ಎರಡನೇ ಹಂತದ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ದೇಶಾದ್ಯಂತ ದಿಢೀರ್ ಲಾಕ್ಡೌನ್ ಘೋಷಣೆ ಮಾಡಿದ್ದು ಡಿಸೆಂಬರ್ 1ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದಿದ್ದಾರೆ.

ಕೊರೊನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಫ್ರಾನ್ಸ್ ನಲ್ಲಿ ಎರಡನೇ ಬಾರಿ ಲಾಕ್ ಡೌನ್ ಹೇರಲಾಗಿದೆ. ರೆಸ್ಟೋರೆಂಟ್, ಬಾರ್ ಗಳಿಗೆ ನೀಡಿದ್ದ ಅನುಮತಿಯನ್ನು ರದ್ದುಪಡಿಸಿದ್ದು ಅಗತ್ಯ ಸೌಲಭ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಉಳಿದಂತೆ ಆರ್ಥಿಕತೆಗೆ ಪೆಟ್ಟು ಬೀಳದಂತೆ ಸಾರ್ವಜನಿಕ ಉದ್ದಿಮೆಗಳು, ಕೃಷಿ ಚಟುವಟಿಕೆಗೆ ಅವಕಾಶ ನೀಡಲಾಗಿದೆ.
ಕೊರೊನಾ ವೈರಸ್ ಫ್ರಾನ್ಸ್ ದೇಶದ ಎಲ್ಲೆಡೆ ಹರಡುತ್ತಿದ್ದು ನವೆಂಬರ್ ತಿಂಗಳಲ್ಲಿ ಯಾವ ಹಂತಕ್ಕೆ ತಲುಪಬಹುದು ಎಂಬುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಮ್ಯಾಕ್ರನ್ ಹೇಳಿದ್ದಾರೆ.

ಇನ್ನು ಪ್ಯಾರಿಸ್ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಎರಡು ವಾರಗಳ ಹಿಂದೆ ಕರ್ಫ್ಯೂ ಹಾಕಲಾಗಿತ್ತು. ಆದರೆ, ಅದು ವಿಫಲವಾಗಿದೆ ಎನ್ನಲಾಗುತ್ತಿದೆ. ಫ್ರಾನ್ಸ್ ನಲ್ಲಿ ಕೊರೊನಾ ಸೋಂಕಿಗೆ ಈಗಾಗಲೇ 35 ಸಾವಿರ ಮಂದಿ ಬಲಿಯಾಗಿದ್ದಾರೆ. ಯುರೋಪ್ ನ ಇತರ ಭಾಗದಲ್ಲಿಯೂ ಎರಡನೇ ಹಂತದ ಕೊರೊನಾ ಸೋಂಕು ಮೊದಲ ಹಂತಕ್ಕಿಂತ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸುವ ಸಾಧ್ಯತೆ ಇರಲಿದೆ ಎಂದು ಮ್ಯಾಕ್ರನ್ ಹೇಳಿದ್ದಾರೆ.

ಸದ್ಯಕ್ಕೆ ಮೂರು ಸಾವಿರ ಇಂಟೆನ್ಸಿವ್ ಕೇರ್ ಬೆಡ್ ಫುಲ್ ಆಗಿದ್ದು ನವೆಂಬರ್ ವೇಳೆಗೆ ಅದು 9 ಸಾವಿರಕ್ಕೆ ತಲುಪಲಿದೆ ಎನ್ನುವ ಅಂದಾಜಿದೆ. ಸದ್ಯಕ್ಕೆ 5800 ಐಸಿಯು ಕೆಪಾಸಿಟಿ ಇದ್ದು ಅದನ್ನು ಹತ್ತು ಸಾವಿರಕ್ಕೆ ಏರಿಸುವ ಗುರಿಯಿದೆ ಎಂದಿದ್ದಾರೆ ಮ್ಯಾಕ್ರನ್. ಅಗತ್ಯ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ. ಲಾಕ್ಡೌನ್ ಬಳಿಕದ ಎರಡು ವಾರಗಳಲ್ಲಿ ಪರಿಸ್ಥಿತಿ ಸುಧಾರಿಸಿದರೆ ಸಡಿಲಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm