ಬ್ರೇಕಿಂಗ್ ನ್ಯೂಸ್
29-10-20 08:55 pm Headline Karnataka News Network ದೇಶ - ವಿದೇಶ
ಪ್ಯಾರಿಸ್, ಅಕ್ಟೋಬರ್ 29 : ಯುರೋಪ್ ರಾಷ್ಟ್ರಗಳಲ್ಲಿ ಎರಡನೇ ಹಂತದ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ದೇಶಾದ್ಯಂತ ದಿಢೀರ್ ಲಾಕ್ಡೌನ್ ಘೋಷಣೆ ಮಾಡಿದ್ದು ಡಿಸೆಂಬರ್ 1ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದಿದ್ದಾರೆ.

ಕೊರೊನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಫ್ರಾನ್ಸ್ ನಲ್ಲಿ ಎರಡನೇ ಬಾರಿ ಲಾಕ್ ಡೌನ್ ಹೇರಲಾಗಿದೆ. ರೆಸ್ಟೋರೆಂಟ್, ಬಾರ್ ಗಳಿಗೆ ನೀಡಿದ್ದ ಅನುಮತಿಯನ್ನು ರದ್ದುಪಡಿಸಿದ್ದು ಅಗತ್ಯ ಸೌಲಭ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಉಳಿದಂತೆ ಆರ್ಥಿಕತೆಗೆ ಪೆಟ್ಟು ಬೀಳದಂತೆ ಸಾರ್ವಜನಿಕ ಉದ್ದಿಮೆಗಳು, ಕೃಷಿ ಚಟುವಟಿಕೆಗೆ ಅವಕಾಶ ನೀಡಲಾಗಿದೆ.
ಕೊರೊನಾ ವೈರಸ್ ಫ್ರಾನ್ಸ್ ದೇಶದ ಎಲ್ಲೆಡೆ ಹರಡುತ್ತಿದ್ದು ನವೆಂಬರ್ ತಿಂಗಳಲ್ಲಿ ಯಾವ ಹಂತಕ್ಕೆ ತಲುಪಬಹುದು ಎಂಬುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಮ್ಯಾಕ್ರನ್ ಹೇಳಿದ್ದಾರೆ.

ಇನ್ನು ಪ್ಯಾರಿಸ್ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಎರಡು ವಾರಗಳ ಹಿಂದೆ ಕರ್ಫ್ಯೂ ಹಾಕಲಾಗಿತ್ತು. ಆದರೆ, ಅದು ವಿಫಲವಾಗಿದೆ ಎನ್ನಲಾಗುತ್ತಿದೆ. ಫ್ರಾನ್ಸ್ ನಲ್ಲಿ ಕೊರೊನಾ ಸೋಂಕಿಗೆ ಈಗಾಗಲೇ 35 ಸಾವಿರ ಮಂದಿ ಬಲಿಯಾಗಿದ್ದಾರೆ. ಯುರೋಪ್ ನ ಇತರ ಭಾಗದಲ್ಲಿಯೂ ಎರಡನೇ ಹಂತದ ಕೊರೊನಾ ಸೋಂಕು ಮೊದಲ ಹಂತಕ್ಕಿಂತ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸುವ ಸಾಧ್ಯತೆ ಇರಲಿದೆ ಎಂದು ಮ್ಯಾಕ್ರನ್ ಹೇಳಿದ್ದಾರೆ.

ಸದ್ಯಕ್ಕೆ ಮೂರು ಸಾವಿರ ಇಂಟೆನ್ಸಿವ್ ಕೇರ್ ಬೆಡ್ ಫುಲ್ ಆಗಿದ್ದು ನವೆಂಬರ್ ವೇಳೆಗೆ ಅದು 9 ಸಾವಿರಕ್ಕೆ ತಲುಪಲಿದೆ ಎನ್ನುವ ಅಂದಾಜಿದೆ. ಸದ್ಯಕ್ಕೆ 5800 ಐಸಿಯು ಕೆಪಾಸಿಟಿ ಇದ್ದು ಅದನ್ನು ಹತ್ತು ಸಾವಿರಕ್ಕೆ ಏರಿಸುವ ಗುರಿಯಿದೆ ಎಂದಿದ್ದಾರೆ ಮ್ಯಾಕ್ರನ್. ಅಗತ್ಯ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ. ಲಾಕ್ಡೌನ್ ಬಳಿಕದ ಎರಡು ವಾರಗಳಲ್ಲಿ ಪರಿಸ್ಥಿತಿ ಸುಧಾರಿಸಿದರೆ ಸಡಿಲಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm