ಬ್ರೇಕಿಂಗ್ ನ್ಯೂಸ್
26-05-23 11:57 am HK News Desk ದೇಶ - ವಿದೇಶ
ನವದೆಹಲಿ, ಮೇ 26: ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಮೇ 28ರಂದು ಉದ್ಘಾಟಿಸಲು ದಿನ ನಿಗದಿಯಾಗಿದೆ. ಈ ನಡುವೆ, ಪ್ರಧಾನಿ ಮೋದಿ ಉದ್ಘಾಟನೆ ಮಾಡಬಾರದು ಎಂದು ಪ್ರತಿಪಕ್ಷಗಳು ತಗಾದೆ ಎತ್ತಿದ್ದು ಕಾರ್ಯಕ್ರಮ ಬಹಿಷ್ಕಾರ ಮಾಡಿವೆ. ಸಂಸತ್ ಕಟ್ಟಡ ಉದ್ಘಾಟನೆ ವಿಚಾರ ಭಾರೀ ವಿವಾದಕ್ಕೆ ಈಡಾಗಿರುವಾಗಲೇ ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಕೆಯಾಗಿದೆ.

ನೂತನ ಸಂಸತ್ ಭವನದ ಉದ್ಘಾಟನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಮಾಡಬೇಕು. ಈ ಬಗ್ಗೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸುಪ್ರಿಂ ಕೋರ್ಟಿಗೆ ಸಲ್ಲಿಕೆಯಾಗಿದೆ. ಜಯ ಸುಕಿನ್ ಎಂಬ ವಕೀಲರು ಅರ್ಜಿ ಸಲ್ಲಿಸಿದ್ದು, ಲೋಕಸಭೆ ಸೆಕ್ರೆಟರಿಯೇಟ್ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸದೆ ಸಂವಿಧಾನ ಉಲ್ಲಂಘನೆ ಮಾಡಲಾಗಿದೆ. ಸಂಸತ್ತು ಭಾರತದ ಸರ್ವೋಚ್ಚ ಶಾಸಕಾಂಗ ಸಂಸ್ಥೆಯಾಗಿದೆ. ಭಾರತೀಯ ಸಂಸತ್ತು ರಾಷ್ಟ್ರಪತಿ, ರಾಜ್ಯಸಭೆ ಮತ್ತು ಲೋಕಸಭೆ ಎಂಬ ಎರಡು ಸದನಗಳನ್ನು ಒಳಗೊಂಡಿದೆ. ಸಂಸತ್ತಿನ ಸದನವನ್ನು ಕರೆಯಲು ಮತ್ತು ಮುಂದೂಡಲು ಅಥವಾ ಲೋಕಸಭೆಯನ್ನು ವಿಸರ್ಜಿಸಲು ರಾಷ್ಟ್ರಪತಿಗಳಿಗೆ ಮಾತ್ರ ಅಧಿಕಾರವಿರುತ್ತದೆ. ಹಾಗಿರುವಾಗ ಸಂಸತ್ತಿನ ಪರಮೋಚ್ಛ ಪದವಿ ಹೊಂದಿರುವ ರಾಷ್ಟ್ರಪತಿ ಅವರೇ ಸಂಸತ್ತನ್ನು ಉದ್ಘಾಟನೆ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.

ಈಗಾಗಲೇ ಹೊಸ ಸಂಸತ್ ಕಟ್ಟಡದ ಉದ್ಘಾಟನೆಗೆ ಮೇ 28ರ ದಿನ ನಿಗದಿಯಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಉದ್ಘಾಟಿಸಲಿದ್ದಾರೆಂದು ತಿಳಿಸಲಾಗಿದೆ. ಆದರೆ, ನೂತನ ಸಂಸತ್ ಭವನದ ಉದ್ಘಾಟನೆ ಸಮಾರಂಭವನ್ನು ಬಹಿಷ್ಕರಿಸಲು 20 ಪ್ರತಿಪಕ್ಷಗಳು ನಿರ್ಧರಿಸಿರುವುದು ಭಾರೀ ಬಿಕ್ಕಟ್ಟಿಗೆ ಕಾರಣವಾಗಿದೆ. ದಲಿತ ವರ್ಗದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬದಿಗೊತ್ತಿ ಸಂಸತ್ತಿನ ಕಟ್ಟಡವನ್ನು ಸ್ವತಃ ಪ್ರಧಾನಿ ಅವರೇ ಉದ್ಘಾಟಿಸಲು ಮುಂದಾಗಿರುವ ನಿರ್ಧಾರವು ದೇಶಕ್ಕೆ ಎಸಗಿದ ಘೋರ ಅವಮಾನ ಮಾತ್ರವಲ್ಲ. ನಮ್ಮ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ ಎಂದು ತಮ್ಮ ಜಂಟಿ ಹೇಳಿಕೆಯಲ್ಲಿ ವಿರೋಧ ಪಕ್ಷಗಳು ಹೇಳಿವೆ.
New Parliament building inauguration Live Updates: The row over the decision to invite Prime Minister Narendra Modi to inaugurate the new parliament building instead of President Droupadi Murmu has led to over 20 Opposition parties having boycotted and around 25 attending the event. Several BJP and Opposition leaders have entered a Twitter war due to the latter boycotting the event.
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm