ಬ್ರೇಕಿಂಗ್ ನ್ಯೂಸ್
28-05-23 09:11 pm HK News Desk ದೇಶ - ವಿದೇಶ
ನವದೆಹಲಿ, ಮೇ 28 : ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭಾಗವಹಿಸಿದ್ದಾರೆ. ಸಂಸತ್ ಭವನ ಉದ್ಘಾಟನೆಯನ್ನು ವಿಪಕ್ಷಗಳು ಬಹಿಷ್ಕರಿಸಿದ್ದವು. ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಮಾತನಾಡುತ್ತಾ, ನಾನು ಖಂಡಿತವಾಗಿಯೂ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು ಮಾಜಿ ಪ್ರಧಾನಿ ನೂತನ ಸಂಸತ್ನಲ್ಲಿ ಉಪಸ್ಥಿತರಿದ್ದರು.
ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ಅವರು ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ಅನ್ನು ಕೊಂಡೊಯ್ದರು.
ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ನೂತನ ಸಂಸತ್ ಭವನದಲ್ಲಿ ಮಾಜಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಫೋಟೋ ಹಂಚಿಕೊಂಡು ಸಂತಸ ವ್ಯಕ್ತಪಡಿಸಿರುವ ಪ್ರತಾಪ್ ಸಿಂಹ, ಹೊಸ ಸಂಸತ್ ಭವನದ ಉದ್ಘಾಟನೆ ಸಂದರ್ಭದಲ್ಲಿ ಹಿರಿಯ ಚೇತನ, ಮಾಜಿ ಪ್ರಧಾನಿ ದೇವೇಗೌಡರಿಂದ ಆಶೀರ್ವಾದ ಪಡೆದುಕೊಂಡೆ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಸಂಸತ್ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹಾಜರಾಗುತ್ತಿದ್ದೇನೆ. ಅದು ದೇಶದ ಆಸ್ತಿ. ಯಾರೊಬ್ಬರ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದ್ದು ಅದಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದ್ದರು.
ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. ಅದು ಅವರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ. ಆ ಭವ್ಯ ಕಟ್ಟಡ ದೇಶದ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿದೆ. ಅದು ದೇಶಕ್ಕೆ ಸೇರಿದ್ದು. ಅದು ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ. ಸಂಸತ್ ಭವನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಓರ್ವ ಮಾಜಿ ಪ್ರಧಾನಿಯಾಗಿ, ದೇಶದ ಪ್ರಜೆಯಾಗಿ ಭಾಗಿಯಾಗುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದರು.
After the inauguration of new Parliament building in New Delhi, former Prime Minister and Janata Dal (Secular) supremo HD Devegowda who participated in the event shared his views. The 91-year-old reminisced about his first term as a Member of Parliament (MP) in the house and mentioned his elevation as Prime Minister of India in 1996.
08-05-24 04:37 pm
Bangalore Correspondent
C P Yogeshwara slams Dk Shivakumar: ಬಾಲ್ಯದಲ್ಲ...
08-05-24 04:28 pm
ಉಪ್ಪು ತಿಂದವನು ನೀರು ಕುಡಿಬೇಕು ಎಂದವರು ಈಗ ಯಾಕೆ ಉರ...
08-05-24 01:03 pm
DK Shivakumar, HD Kumarasway, Prajwal case:...
07-05-24 09:11 pm
Lok Sabha Elections 2024, Uttar Karnataka Vot...
07-05-24 07:11 pm
08-05-24 11:59 am
HK News Desk
ಹೈದರಾಬಾದ್ ; ಭಾರೀ ಮಳೆಗೆ ಗೋಡೆ ಕುಸಿತ, 4 ವರ್ಷದ ಮಗ...
08-05-24 10:44 am
Cyber crime, gold biscut: ಸೈಬರ್ ವಂಚಕನಿಗೆ ಸೇರಿ...
07-05-24 10:26 pm
Solapur Lok Sabha Constituency, Maharashtra,...
07-05-24 08:38 pm
Ram Mandir, Rahul Gandhi, Acharya Pramod Kris...
07-05-24 05:16 pm
08-05-24 10:48 pm
Mangalore Correspondent
Mangalore Vasantha Bangera death: ವಸಂತ ಬಂಗೇರ...
08-05-24 10:37 pm
Explosion at firecracker: ಕಾರ್ಕಳ ; ಸಿಡಿಮದ್ದು...
08-05-24 08:44 pm
Mangalore suicide, College student: ಬಿಇ ಇಂಜಿನ...
08-05-24 08:11 pm
Congress Vasantha Bangera death: ಬೆಳ್ತಂಗಡಿಯ ಹ...
08-05-24 06:19 pm
08-05-24 04:35 pm
Bengaluru Correspondent
ಹಲ್ಲಿನ ಚಿಕಿತ್ಸೆಗೆ ಬಂದು ಮೆಡಿಕಲ್ ಕಾಲೇಜಿನ ಟಾಯ್ಲೆ...
08-05-24 11:33 am
ಆನ್ಲೈನ್ ಗೇಮಿಂಗ್ ಗಾಗಿ 2 ಸಾವಿರ ರೂ. ಸಾಲ, ದುಡ್ಡ...
07-05-24 10:03 pm
Bangalore Cyber crime: ಸ್ಟಾಕ್ ಮಾರ್ಕೆಟ್ ಹೂಡಿಕೆ...
07-05-24 09:48 pm
Bangalore crime, Robbery: ಊರಿಗೆ ಹೋದ್ಲು ಅಕ್ಕ ;...
07-05-24 02:57 pm